‘ಆತ ಯಾರು ದಯವಿಟ್ಟು ಹೇಳಿ’; ಹುಡುಗನ ವಿಚಾರದಲ್ಲಿ ರಶ್ಮಿಕಾ ಮಂದಣ್ಣ ದುಂಬಾಲು ಬಿದ್ದ ಅಭಿಮಾನಿಗಳು

ರಶ್ಮಿಕಾ ಒಂದು ಅದ್ಭುತ ಸೆಲ್ಫಿಯನ್ನು ಇನ್​ಸ್ಟಾಗ್ರಾಮ್​ ಹಾಗೂ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ‘ಇದನ್ನು ಪೋಸ್ಟ್ ಮಾಡಲೇಬೇಕು; ಆತ ಹೇಳಿದ’ ಎಂದು ಅವರು ಬರೆದುಕೊಂಡಿದ್ದಾರೆ.

‘ಆತ ಯಾರು ದಯವಿಟ್ಟು ಹೇಳಿ’; ಹುಡುಗನ ವಿಚಾರದಲ್ಲಿ ರಶ್ಮಿಕಾ ಮಂದಣ್ಣ ದುಂಬಾಲು ಬಿದ್ದ ಅಭಿಮಾನಿಗಳು
‘ಆತ ಯಾರು ದಯವಿಟ್ಟು ಹೇಳಿ’ ಹುಡುಗನ ವಿಚಾರದಲ್ಲಿ ರಶ್ಮಿಕಾ ಮಂದಣ್ಣ ದುಂಬಾಲು ಬಿದ್ದ ಅಭಿಮಾನಿಗಳು
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 11, 2021 | 7:03 PM

ನಟಿ ರಶ್ಮಿಕಾ ಮಂದಣ್ಣ ಸಿನಿಮಾ ಇಂಡಸ್ಟ್ರಿಗೆ ಬಂದು ಐದು ವರ್ಷ ಕಳೆಯುತ್ತಾ ಬಂದಿದೆ. ಅತಿ ಕಡಿಮೆ ಅವಧಿಯಲ್ಲಿ ಸಾಕಷ್ಟು ಖ್ಯಾತಿ ಗಳಿಸಿಕೊಂಡ ಹೆಚ್ಚುಗಾರಿಕೆ ರಶ್ಮಿಕಾ ಅವರದ್ದು. ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ರಶ್ಮಿಕಾ ನಿರಂತರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿರುತ್ತಾರೆ. ಈಗ ಅವರು ಹಾಕಿರೋ ಸೋಶಿಯಲ್​ ಮೀಡಿಯಾ ಪೋಸ್ಟ್​ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಪೋಸ್ಟ್​ ನೋಡಿದ ಅನೇಕರು ಆತ ಯಾರು ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ರಶ್ಮಿಕಾ ಒಂದು ಅದ್ಭುತ ಸೆಲ್ಫಿಯನ್ನು ಇನ್​ಸ್ಟಾಗ್ರಾಮ್​ ಹಾಗೂ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ‘ಇದನ್ನು ಪೋಸ್ಟ್ ಮಾಡಲೇಬೇಕು; ಆತ ಹೇಳಿದ’ ಎಂದು ಅವರು ಬರೆದುಕೊಂಡಿದ್ದಾರೆ. ಅಷ್ಟಕ್ಕೂ ಆತ ಯಾರು ಎನ್ನುವ ಹುಳ ಅಭಿಮಾನಿಗಳ ತರೆಯಲ್ಲಿ ಕೊರೆಯೋಕೆ ಆರಂಭವಾಗಿತ್ತು. ಈ ಬಗ್ಗೆ ಸಾಕಷ್ಟು ಜನರು ಸಾಕಷ್ಟು ರೀತಿಯಲ್ಲಿ ಚರ್ಚೆ ಕೂಡ ಮಾಡಿದ್ದರು.

ಕುತೂಹಲ ತಾಳಲಾರದೆ ಓರ್ವ ಅಭಿಮಾನಿ ‘ಆತ ಯಾರು?’ ಎಂದು ರಶ್ಮಿಕಾಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ರಶ್ಮಿಕಾ ಉತ್ತರಿಸಿದ್ದಾರೆ. ಆತ ಎಂದರೆ, ‘ನನ್ನ ಆಲೋಚನೆಯಲ್ಲಿರು ಫ್ಯಾನ್​ ಬಾಯ್’​ ಎಂದು ರಶ್ಮಿಕಾ ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದೆ ಕೂಡ ರಶ್ಮಿಕಾ ಇದೇ ರೀತಿ ಪ್ರಶ್ನೋತ್ತರ ನಡೆಸಿದಾಗ ನಿಮ್ಮ ಬಾಯ್ ಫ್ರೆಂಡ್​ ಯಾರು ಎಂಬ ಪ್ರಶ್ನೆ ಎದುರಾಗಿತ್ತು. ‘ಕೆಲಸವೇ ನನ್ನ ಬಾಯ್​ಫ್ರೆಂಡ್​. ಅದನ್ನು ಬಿಟ್ಟರೆ ನನಗೆ ಬೇರೆ ಯಾವುದಕ್ಕೂ ಸಮಯ ಇಲ್ಲ’ ಎಂದು ಅವರು ಉತ್ತರ ನೀಡಿದ್ದರು. ಸದ್ಯ ಬಾಲಿವುಡ್​ನಲ್ಲಿ ಸಿದ್ಧಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’, ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ತೆರೆ ಹಂಚಿಕೊಳ್ಳುತ್ತಿರುವ ‘ಪುಷ್ಪ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ.

ಸದ್ಯ ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ, ಬಾಲಿವುಡ್​ನ ‘ಗುಡ್​ಬೈ’ ಮತ್ತು ‘ಮಿಷನ್​ ಮಜ್ನು’ ಸಿನಿಮಾಗಳ ಶೂಟಿಂಗ್​ ಸಲುವಾಗಿ ಅವರಿಗೆ ಮುಂಬೈಗೆ ತೆರಳಿದ್ದಾರೆ. ಅಲ್ಲಿ ಹೊಸ ಅಪಾರ್ಟ್​ಮೆಂಟ್​ ಕೂಡ ಖರೀದಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಅವರಿಗೆ ಸಿಕ್ಕಾಟ್ಟೆ ಬೇಡಿಕೆ ಇದೆ. ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ಬಹುನಿರೀಕ್ಷಿತ ‘ಪುಷ್ಪ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದನ್ನೂ ಓದಿ: Rashmika Mandanna : ಮುಂಬೈನ ಜುಹುವಿನಲ್ಲಿ ಕಾಣಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ!

‘ಸರಿಯಾಗಿ ಪ್ರಪೋಸ್​ ಆದ್ರೂ ಮಾಡು’​; ನನ್ನ ಮದುವೆ ಆಗಿ ಎಂದು ನೇರವಾಗಿ ಕೇಳಿದವನಿಗೆ ರಶ್ಮಿಕಾ ಖಡಕ್​ ಉತ್ತರ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ