Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ
ಯಶ್-ವಿಜಯ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 14, 2022 | 9:40 PM

‘ಕೆಜಿಎಫ್ ಚಾಪ್ಟರ್​ 2’ ಚಿತ್ರದ (KGF Chapter 2) ಎದುರು ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ (Beast Movie) ಮಂಕಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ಸುಮಾರು 900 ಶೋಗಳನ್ನು ‘ಬೀಸ್ಟ್​’ಗೆ ನೀಡಲಾಗಿತ್ತು. ಅದು ಈಗ 250ಕ್ಕೆ ಇಳಿಕೆ ಆಗಿದೆ. ಮುಂದಿನ ದಿನಗಳಲ್ಲಿ ವಿಜಯ್ ಸಿನಿಮಾದ ಶೋ ಸಂಖ್ಯೆ ಕುಸಿಯಬಹುದು. ಈ ಮಧ್ಯೆ, ತಮಿಳುಮಂದಿ ಕೂಡ ‘ಕೆಜಿಎಫ್ 2’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ವಿಶೇಷ ಎಂದರೆ, ಯಶ್ (Yash) ಚಿತ್ರಕ್ಕಾಗಿ ‘ಬೀಸ್ಟ್’ ಸಿನಿಮಾ ಕಡೆಗಣಿಸಿದ್ದಾರೆ. ಪ್ರಶಾಂತ್ ನೀಲ್​ ನಿರ್ದೇಶನದ ಈ ಸಿನಿಮಾನ ಮೊದಲು ನೋಡಿ ಎಂದು ಕೋರುತ್ತಿದ್ದಾರೆ.

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎಂದು ಅಭಿಮಾನಿಯೋರ್ವ ಥಿಯೇಟರ್​ನ ಸ್ಕ್ರೀನ್​ಗೆ ಬೆಂಕಿ ಹಚ್ಚಿದ ಬಗ್ಗೆ ವರದಿ ಆಗಿತ್ತು. ಇದಾದ ಮರುದಿನ (ಏಪ್ರಿಲ್ 14) ‘ಕೆಜಿಎಫ್​ ಚಾಪ್ಟರ್​ 2’ ತೆರೆಗೆ ಬಂದಿದೆ. ಈ ಸಿನಿಮಾಗೆ ಧನಾತ್ಮಕ ಪ್ರತಿಕ್ರಿಯೆ ಬಂದಿದೆ.

ತಮಿಳುನಾಡಿನಲ್ಲಿ 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಕೆಜಿಎಫ್​ 2’ ತೆರೆಗೆ ಬಂದಿದೆ. ಕೆಲ ಯೂಟ್ಯೂಬ್​ ಚಾನೆಲ್​ಗಳು ಸಿನಿಮಾ ನೋಡಿದವರನ್ನು ಮಾತನಾಡಿಸಿದ್ದಾರೆ. ಎಲ್ಲರೂ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕೆಲವರು ಯಶ್ ಅವರ ನಟನೆಯನ್ನು ಹೊಗಳಿದರೆ, ಇನ್ನೂ ಕೆಲವರು ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ವಿಶೇಷ ಎಂದರೆ, ತಮಿಳುನಾಡಿನಲ್ಲಿ ಕೆಲವರು ‘ಮೊದಲು ಕೆಜಿಎಫ್ ಎರಡನೇ ಚಾಪ್ಟರ್​ ನೋಡಿ. ಆಮೇಲೆ ಬೇಕಿದ್ದರೆ ಬೀಸ್ಟ್​ ನೋಡುವಿರಂತೆ’ ಎಂದಿದ್ದಾರೆ. ಇನ್ನೂ ಕೆಲವರು, ‘ಯಶ್ ನಟನೆಯ ‘ಕೆಜಿಎಫ್ 2’ ನಿಜವಾದ ಬೀಸ್ಟ್​’ ಎಂದು ಬಾಯ್ತುಂಬ ಹೊಗಳಿದ್ದಾರೆ. ತಮಿಳುನಾಡಿನಲ್ಲಿ ಈ ಸಿನಿಮಾಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ, ತಮಿಳುನಾಡಿನ ಹಲವು ಚಿತ್ರಮಂದಿರಗಳಲ್ಲಿ ‘ಬೀಸ್ಟ್’​ ಬದಲು ‘ಕೆಜಿಎಫ್ 2’ ಕಂಡರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​

ಬೆಂಗಳೂರಲ್ಲಿ ‘ಬೀಸ್ಟ್​’ ನೋಡಿ ಜನ ಏನಂದ್ರು? ಫ್ಯಾನ್ಸ್​ ಸೂಪರ್​ ಅಂದ್ರು, ಕೆಲವರು ಮುಖ ಹಿಂಡಿದ್ರು

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು