AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ
ಯಶ್-ವಿಜಯ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 14, 2022 | 9:40 PM

Share

‘ಕೆಜಿಎಫ್ ಚಾಪ್ಟರ್​ 2’ ಚಿತ್ರದ (KGF Chapter 2) ಎದುರು ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ (Beast Movie) ಮಂಕಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ಸುಮಾರು 900 ಶೋಗಳನ್ನು ‘ಬೀಸ್ಟ್​’ಗೆ ನೀಡಲಾಗಿತ್ತು. ಅದು ಈಗ 250ಕ್ಕೆ ಇಳಿಕೆ ಆಗಿದೆ. ಮುಂದಿನ ದಿನಗಳಲ್ಲಿ ವಿಜಯ್ ಸಿನಿಮಾದ ಶೋ ಸಂಖ್ಯೆ ಕುಸಿಯಬಹುದು. ಈ ಮಧ್ಯೆ, ತಮಿಳುಮಂದಿ ಕೂಡ ‘ಕೆಜಿಎಫ್ 2’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ವಿಶೇಷ ಎಂದರೆ, ಯಶ್ (Yash) ಚಿತ್ರಕ್ಕಾಗಿ ‘ಬೀಸ್ಟ್’ ಸಿನಿಮಾ ಕಡೆಗಣಿಸಿದ್ದಾರೆ. ಪ್ರಶಾಂತ್ ನೀಲ್​ ನಿರ್ದೇಶನದ ಈ ಸಿನಿಮಾನ ಮೊದಲು ನೋಡಿ ಎಂದು ಕೋರುತ್ತಿದ್ದಾರೆ.

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎಂದು ಅಭಿಮಾನಿಯೋರ್ವ ಥಿಯೇಟರ್​ನ ಸ್ಕ್ರೀನ್​ಗೆ ಬೆಂಕಿ ಹಚ್ಚಿದ ಬಗ್ಗೆ ವರದಿ ಆಗಿತ್ತು. ಇದಾದ ಮರುದಿನ (ಏಪ್ರಿಲ್ 14) ‘ಕೆಜಿಎಫ್​ ಚಾಪ್ಟರ್​ 2’ ತೆರೆಗೆ ಬಂದಿದೆ. ಈ ಸಿನಿಮಾಗೆ ಧನಾತ್ಮಕ ಪ್ರತಿಕ್ರಿಯೆ ಬಂದಿದೆ.

ತಮಿಳುನಾಡಿನಲ್ಲಿ 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಕೆಜಿಎಫ್​ 2’ ತೆರೆಗೆ ಬಂದಿದೆ. ಕೆಲ ಯೂಟ್ಯೂಬ್​ ಚಾನೆಲ್​ಗಳು ಸಿನಿಮಾ ನೋಡಿದವರನ್ನು ಮಾತನಾಡಿಸಿದ್ದಾರೆ. ಎಲ್ಲರೂ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕೆಲವರು ಯಶ್ ಅವರ ನಟನೆಯನ್ನು ಹೊಗಳಿದರೆ, ಇನ್ನೂ ಕೆಲವರು ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ವಿಶೇಷ ಎಂದರೆ, ತಮಿಳುನಾಡಿನಲ್ಲಿ ಕೆಲವರು ‘ಮೊದಲು ಕೆಜಿಎಫ್ ಎರಡನೇ ಚಾಪ್ಟರ್​ ನೋಡಿ. ಆಮೇಲೆ ಬೇಕಿದ್ದರೆ ಬೀಸ್ಟ್​ ನೋಡುವಿರಂತೆ’ ಎಂದಿದ್ದಾರೆ. ಇನ್ನೂ ಕೆಲವರು, ‘ಯಶ್ ನಟನೆಯ ‘ಕೆಜಿಎಫ್ 2’ ನಿಜವಾದ ಬೀಸ್ಟ್​’ ಎಂದು ಬಾಯ್ತುಂಬ ಹೊಗಳಿದ್ದಾರೆ. ತಮಿಳುನಾಡಿನಲ್ಲಿ ಈ ಸಿನಿಮಾಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ, ತಮಿಳುನಾಡಿನ ಹಲವು ಚಿತ್ರಮಂದಿರಗಳಲ್ಲಿ ‘ಬೀಸ್ಟ್’​ ಬದಲು ‘ಕೆಜಿಎಫ್ 2’ ಕಂಡರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​

ಬೆಂಗಳೂರಲ್ಲಿ ‘ಬೀಸ್ಟ್​’ ನೋಡಿ ಜನ ಏನಂದ್ರು? ಫ್ಯಾನ್ಸ್​ ಸೂಪರ್​ ಅಂದ್ರು, ಕೆಲವರು ಮುಖ ಹಿಂಡಿದ್ರು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!