AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ
ಯಶ್-ವಿಜಯ್
TV9 Web
| Edited By: |

Updated on: Apr 14, 2022 | 9:40 PM

Share

‘ಕೆಜಿಎಫ್ ಚಾಪ್ಟರ್​ 2’ ಚಿತ್ರದ (KGF Chapter 2) ಎದುರು ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ (Beast Movie) ಮಂಕಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ಸುಮಾರು 900 ಶೋಗಳನ್ನು ‘ಬೀಸ್ಟ್​’ಗೆ ನೀಡಲಾಗಿತ್ತು. ಅದು ಈಗ 250ಕ್ಕೆ ಇಳಿಕೆ ಆಗಿದೆ. ಮುಂದಿನ ದಿನಗಳಲ್ಲಿ ವಿಜಯ್ ಸಿನಿಮಾದ ಶೋ ಸಂಖ್ಯೆ ಕುಸಿಯಬಹುದು. ಈ ಮಧ್ಯೆ, ತಮಿಳುಮಂದಿ ಕೂಡ ‘ಕೆಜಿಎಫ್ 2’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ವಿಶೇಷ ಎಂದರೆ, ಯಶ್ (Yash) ಚಿತ್ರಕ್ಕಾಗಿ ‘ಬೀಸ್ಟ್’ ಸಿನಿಮಾ ಕಡೆಗಣಿಸಿದ್ದಾರೆ. ಪ್ರಶಾಂತ್ ನೀಲ್​ ನಿರ್ದೇಶನದ ಈ ಸಿನಿಮಾನ ಮೊದಲು ನೋಡಿ ಎಂದು ಕೋರುತ್ತಿದ್ದಾರೆ.

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎಂದು ಅಭಿಮಾನಿಯೋರ್ವ ಥಿಯೇಟರ್​ನ ಸ್ಕ್ರೀನ್​ಗೆ ಬೆಂಕಿ ಹಚ್ಚಿದ ಬಗ್ಗೆ ವರದಿ ಆಗಿತ್ತು. ಇದಾದ ಮರುದಿನ (ಏಪ್ರಿಲ್ 14) ‘ಕೆಜಿಎಫ್​ ಚಾಪ್ಟರ್​ 2’ ತೆರೆಗೆ ಬಂದಿದೆ. ಈ ಸಿನಿಮಾಗೆ ಧನಾತ್ಮಕ ಪ್ರತಿಕ್ರಿಯೆ ಬಂದಿದೆ.

ತಮಿಳುನಾಡಿನಲ್ಲಿ 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಕೆಜಿಎಫ್​ 2’ ತೆರೆಗೆ ಬಂದಿದೆ. ಕೆಲ ಯೂಟ್ಯೂಬ್​ ಚಾನೆಲ್​ಗಳು ಸಿನಿಮಾ ನೋಡಿದವರನ್ನು ಮಾತನಾಡಿಸಿದ್ದಾರೆ. ಎಲ್ಲರೂ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕೆಲವರು ಯಶ್ ಅವರ ನಟನೆಯನ್ನು ಹೊಗಳಿದರೆ, ಇನ್ನೂ ಕೆಲವರು ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ವಿಶೇಷ ಎಂದರೆ, ತಮಿಳುನಾಡಿನಲ್ಲಿ ಕೆಲವರು ‘ಮೊದಲು ಕೆಜಿಎಫ್ ಎರಡನೇ ಚಾಪ್ಟರ್​ ನೋಡಿ. ಆಮೇಲೆ ಬೇಕಿದ್ದರೆ ಬೀಸ್ಟ್​ ನೋಡುವಿರಂತೆ’ ಎಂದಿದ್ದಾರೆ. ಇನ್ನೂ ಕೆಲವರು, ‘ಯಶ್ ನಟನೆಯ ‘ಕೆಜಿಎಫ್ 2’ ನಿಜವಾದ ಬೀಸ್ಟ್​’ ಎಂದು ಬಾಯ್ತುಂಬ ಹೊಗಳಿದ್ದಾರೆ. ತಮಿಳುನಾಡಿನಲ್ಲಿ ಈ ಸಿನಿಮಾಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ, ತಮಿಳುನಾಡಿನ ಹಲವು ಚಿತ್ರಮಂದಿರಗಳಲ್ಲಿ ‘ಬೀಸ್ಟ್’​ ಬದಲು ‘ಕೆಜಿಎಫ್ 2’ ಕಂಡರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​

ಬೆಂಗಳೂರಲ್ಲಿ ‘ಬೀಸ್ಟ್​’ ನೋಡಿ ಜನ ಏನಂದ್ರು? ಫ್ಯಾನ್ಸ್​ ಸೂಪರ್​ ಅಂದ್ರು, ಕೆಲವರು ಮುಖ ಹಿಂಡಿದ್ರು

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು