AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

‘ಕೆಜಿಎಫ್ 2’ ಎದುರು ‘ಬೀಸ್ಟ್’ ಚಿತ್ರ ಕಡೆಗಣಿಸಿದ ತಮಿಳು ಮಂದಿ; ವೈರಲ್ ಆಯ್ತು ವಿಡಿಯೋ
ಯಶ್-ವಿಜಯ್
TV9 Web
| Edited By: |

Updated on: Apr 14, 2022 | 9:40 PM

Share

‘ಕೆಜಿಎಫ್ ಚಾಪ್ಟರ್​ 2’ ಚಿತ್ರದ (KGF Chapter 2) ಎದುರು ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ (Beast Movie) ಮಂಕಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ಸುಮಾರು 900 ಶೋಗಳನ್ನು ‘ಬೀಸ್ಟ್​’ಗೆ ನೀಡಲಾಗಿತ್ತು. ಅದು ಈಗ 250ಕ್ಕೆ ಇಳಿಕೆ ಆಗಿದೆ. ಮುಂದಿನ ದಿನಗಳಲ್ಲಿ ವಿಜಯ್ ಸಿನಿಮಾದ ಶೋ ಸಂಖ್ಯೆ ಕುಸಿಯಬಹುದು. ಈ ಮಧ್ಯೆ, ತಮಿಳುಮಂದಿ ಕೂಡ ‘ಕೆಜಿಎಫ್ 2’ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ವಿಶೇಷ ಎಂದರೆ, ಯಶ್ (Yash) ಚಿತ್ರಕ್ಕಾಗಿ ‘ಬೀಸ್ಟ್’ ಸಿನಿಮಾ ಕಡೆಗಣಿಸಿದ್ದಾರೆ. ಪ್ರಶಾಂತ್ ನೀಲ್​ ನಿರ್ದೇಶನದ ಈ ಸಿನಿಮಾನ ಮೊದಲು ನೋಡಿ ಎಂದು ಕೋರುತ್ತಿದ್ದಾರೆ.

‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿದೆ. ಸಿನಿಮಾದಲ್ಲಿ ಹೊಸತನ, ಮನರಂಜನೆ ಎರಡೂ ಇಲ್ಲ ಎಂದು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎಂದು ಅಭಿಮಾನಿಯೋರ್ವ ಥಿಯೇಟರ್​ನ ಸ್ಕ್ರೀನ್​ಗೆ ಬೆಂಕಿ ಹಚ್ಚಿದ ಬಗ್ಗೆ ವರದಿ ಆಗಿತ್ತು. ಇದಾದ ಮರುದಿನ (ಏಪ್ರಿಲ್ 14) ‘ಕೆಜಿಎಫ್​ ಚಾಪ್ಟರ್​ 2’ ತೆರೆಗೆ ಬಂದಿದೆ. ಈ ಸಿನಿಮಾಗೆ ಧನಾತ್ಮಕ ಪ್ರತಿಕ್ರಿಯೆ ಬಂದಿದೆ.

ತಮಿಳುನಾಡಿನಲ್ಲಿ 250ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಕೆಜಿಎಫ್​ 2’ ತೆರೆಗೆ ಬಂದಿದೆ. ಕೆಲ ಯೂಟ್ಯೂಬ್​ ಚಾನೆಲ್​ಗಳು ಸಿನಿಮಾ ನೋಡಿದವರನ್ನು ಮಾತನಾಡಿಸಿದ್ದಾರೆ. ಎಲ್ಲರೂ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕೆಲವರು ಯಶ್ ಅವರ ನಟನೆಯನ್ನು ಹೊಗಳಿದರೆ, ಇನ್ನೂ ಕೆಲವರು ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ವಿಶೇಷ ಎಂದರೆ, ತಮಿಳುನಾಡಿನಲ್ಲಿ ಕೆಲವರು ‘ಮೊದಲು ಕೆಜಿಎಫ್ ಎರಡನೇ ಚಾಪ್ಟರ್​ ನೋಡಿ. ಆಮೇಲೆ ಬೇಕಿದ್ದರೆ ಬೀಸ್ಟ್​ ನೋಡುವಿರಂತೆ’ ಎಂದಿದ್ದಾರೆ. ಇನ್ನೂ ಕೆಲವರು, ‘ಯಶ್ ನಟನೆಯ ‘ಕೆಜಿಎಫ್ 2’ ನಿಜವಾದ ಬೀಸ್ಟ್​’ ಎಂದು ಬಾಯ್ತುಂಬ ಹೊಗಳಿದ್ದಾರೆ. ತಮಿಳುನಾಡಿನಲ್ಲಿ ಈ ಸಿನಿಮಾಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ, ತಮಿಳುನಾಡಿನ ಹಲವು ಚಿತ್ರಮಂದಿರಗಳಲ್ಲಿ ‘ಬೀಸ್ಟ್’​ ಬದಲು ‘ಕೆಜಿಎಫ್ 2’ ಕಂಡರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ‘ಬೀಸ್ಟ್​’ ಚೆನ್ನಾಗಿಲ್ಲ ಎಂಬ ಹತಾಶೆಯಿಂದ​ ಥಿಯೇಟರ್​ ಪರದೆಗೆ ಬೆಂಕಿ ಹಚ್ಚಿದ ವಿಜಯ್​ ಫ್ಯಾನ್ಸ್​? ವಿಡಿಯೋ ವೈರಲ್​

ಬೆಂಗಳೂರಲ್ಲಿ ‘ಬೀಸ್ಟ್​’ ನೋಡಿ ಜನ ಏನಂದ್ರು? ಫ್ಯಾನ್ಸ್​ ಸೂಪರ್​ ಅಂದ್ರು, ಕೆಲವರು ಮುಖ ಹಿಂಡಿದ್ರು

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?