AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ‘ಕಾಂತಾರ 2’ ಚಿತ್ರದಲ್ಲಿ ರಜನಿಕಾಂತ್​ ನಟಿಸ್ತಾರಾ? ರಿಷಬ್​ ಶೆಟ್ಟಿ ಸಿನಿಮಾ ಬಗ್ಗೆ ಹೊಸ ಚರ್ಚೆ ಶುರು

Superstar Rajinikanth | Kantara 2 Cast: ‘ಕಾಂತಾರ 2’ ಸಿನಿಮಾದ ಪಾತ್ರವರ್ಗದ ಬಗ್ಗೆ ಸಿನಿಪ್ರಿಯರಲ್ಲಿ ಭಾರಿ ಕೌತುಕ ಮೂಡಿದೆ. ರಿಷಬ್​ ಶೆಟ್ಟಿ ಜೊತೆಗೆ ಯಾರೆಲ್ಲ ನಟಿಸಬಹುದು ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

Rajinikanth: ‘ಕಾಂತಾರ 2’ ಚಿತ್ರದಲ್ಲಿ ರಜನಿಕಾಂತ್​ ನಟಿಸ್ತಾರಾ? ರಿಷಬ್​ ಶೆಟ್ಟಿ ಸಿನಿಮಾ ಬಗ್ಗೆ ಹೊಸ ಚರ್ಚೆ ಶುರು
ರಜನಿಕಾಂತ್, ರಿಷಬ್ ಶೆಟ್ಟಿ
ಮದನ್​ ಕುಮಾರ್​
|

Updated on: Feb 20, 2023 | 7:23 PM

Share

ಗಲ್ಲಾ ಪೆಟ್ಟಿಗೆಯಲ್ಲಿ ಮ್ಯಾಜಿಕ್​ ಮಾಡಿದ ‘ಕಾಂತಾರ’ (Kantara) ಸಿನಿಮಾ ಬಗ್ಗೆ ಈಗಲೂ ಚರ್ಚೆಗಳು ನಡೆಯುತ್ತಲೇ ಇವೆ. ಭಾರತೀಯ ಚಿತ್ರರಂಗದಲ್ಲಿ ಈ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಪರಭಾಷೆ ಮಂದಿ ಕೂಡ ‘ಕಾಂತಾರ’ ಚಿತ್ರವನ್ನು ಸಿಕ್ಕಾಪಟ್ಟೆ ಮೆಚ್ಚಿಕೊಂಡರು. ಅನೇಕ ಸೆಲೆಬ್ರಿಟಿಗಳು ಕೂಡ ಮಾತನಾಡಿದರು. ರಿಷಬ್​ ಶೆಟ್ಟಿ ಅವರ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿಬಂತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ತಯಾರಿಸುವ ಕಾರ್ಯ ನಡೆಯುತ್ತಿದೆ. ರಿಷಬ್​ ಶೆಟ್ಟಿ (Rishab Shetty) ಮತ್ತು ಅವರ ತಂಡದವರು ಸ್ಕ್ರಿಪ್ಟ್​ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಅದರ ಜೊತೆ ಲೊಕೇಷನ್​ ಹುಡುಕಾಟವೂ ನಡೆಯುತ್ತಿದೆ. ಈ ನಡುವೆ ‘ಕಾಂತಾರ 2’ ಬಗ್ಗೆ ಹಲವು ಬಗೆಯ ಗುಸುಗುಸು ಕೇಳಿಬರುತ್ತಿವೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಬಹುದು ಎಂಬ ಪ್ರಶ್ನೆ ಮೂಡಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ (Rajinikanth) ಕೂಡ ಅಭಿನಯಿಸಲಿದ್ದಾರೆ ಎಂಬ ಅನುಮಾನ ಕೆಲವರಿಗಿದೆ. ಆದರೆ ಅದಕ್ಕೆ ಚಿತ್ರತಂಡದಿಂದ ಇನ್ನಷ್ಟೇ ಪ್ರತಿಕ್ರಿಯೆ ಸಿಗಬೇಕಿದೆ.

‘ಕಾಂತಾರ’ ಸಿನಿಮಾ ಸೂಪರ್​ ಹಿಟ್​ ಆದಾಗ ರಜನಿಕಾಂತ್​ ಅವರು ಮನಸಾರೆ ಹೊಗಳಿದ್ದರು. ರಿಷಬ್​ ಶೆಟ್ಟಿ ಅವರನ್ನು ಮನೆಗೆ ಕರೆಸಿಕೊಂಡು ಒಂದಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದರು. ಈ ಭೇಟಿ ಸುಮ್ಮನೆ ಆಗಿದ್ದಲ್ಲ ಎಂಬುದು ಕೆಲವರ ವಾದ. ‘ಕಾಂತಾರ 2’ ಚಿತ್ರದ ಬಗ್ಗೆ ಈ ಭೇಟಿಯ ಸಂದರ್ಭದಲ್ಲಿ ಮಾತುಕಥೆ ನಡೆದಿರಬಹುದು ಎಂದು ಒಂದಷ್ಟು ಮಂದಿ ಊಹಿಸುತ್ತಿದ್ದಾರೆ. ಆ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಅಂತೆ-ಕಂತೆಗಳು ಹರಿದಾಡುತ್ತಿವೆ.

ಇದನ್ನೂ ಓದಿ: Urvashi Rautela: ‘ಕಾಂತಾರ 2’ ಚಿತ್ರದಲ್ಲಿ ಊರ್ವಶಿ ರೌಟೇಲಾ ನಟಿಸೋದು ನಿಜವಲ್ಲ; ಫೋಟೋ ಹಿಂದಿನ ಸತ್ಯ ಇಲ್ಲಿದೆ

ಇದನ್ನೂ ಓದಿ
Image
Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
Image
ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
Image
ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

ರಿಷಬ್​ ಶೆಟ್ಟಿ ಅವರು ಪ್ರತಿ ಬಾರಿಯೂ ಹೊಸ ಹೊಸ ಪ್ರಕಾರದಲ್ಲಿ ಸಿನಿಮಾ ಮಾಡುತ್ತಾ ಬಂದಿದ್ದಾರೆ. ‘ಕಾಂತಾರ’ ಬ್ಲಾಕ್​ ಬಸ್ಟರ್​ ಹಿಟ್​ ಆಗಿದ್ದರಿಂದ ಈಗ ಅವರು ‘ಕಾಂತಾರ 2’ ಚಿತ್ರವನ್ನು ಯಾವ ರೀತಿ ಕಟ್ಟಿಕೊಡಬಹುದು ಎಂಬ ಕೌತುಕ ಮೂಡಿದೆ. ಒಂದಷ್ಟು ಅಚ್ಚರಿಯ ವಿಚಾರಗಳಂತೂ ಖಂಡಿತ ಇರಲಿವೆ. ಇದು ಪ್ರೀಕ್ವೆಲ್​ ಆಗಿರುವುದರಿಂದ ಹೆಚ್ಚಿನ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Kantara 2 Shooting: ‘ಕಾಂತಾರ 2’ ಆರಂಭಿಸಲು ಮಳೆಗಾಲಕ್ಕೆ ಕಾದಿರುವ ರಿಷಬ್​ ಶೆಟ್ಟಿ; ಮಾಹಿತಿ ನೀಡಿದ ವಿಜಯ್​ ಕಿರಗಂದೂರು

ಮೊದಲ ಪಾರ್ಟ್​ 400 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಈಗ ಎರಡನೇ ಪಾರ್ಟ್​ ಅದಕ್ಕಿಂತಲೂ ದೊಡ್ಡ ಹಿಟ್​ ಆಗಬೇಕು ಎಂಬ ಬಯಕೆ ಅಭಿಮಾನಿಗಳಿಗೆ ಇರುತ್ತದೆ. ಅದಕ್ಕೆ ತಕ್ಕಂತೆಯೇ ನಿರ್ಮಾಣ ಸಂಸ್ಥೆ ಕೂಡ ಯೋಚಿಸುತ್ತದೆ. ಈ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್​’​ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಿದೆ.

ಇದನ್ನೂ ಓದಿ: Kantara 2: ಅಣ್ಣಪ್ಪ ಪಂಜುರ್ಲಿ ಬಳಿ ‘ಕಾಂತಾರ 2’ ಬಗ್ಗೆ ರಿಷಬ್​ ಶೆಟ್ಟಿ ಕೇಳಿದ್ದೇನು? ಎಲ್ಲವನ್ನೂ ವಿವರಿಸಿದ ದೈವ ನರ್ತಕರು

ಈ ವರ್ಷ ಮಳೆಗಾಲದಲ್ಲಿ ‘ಕಾಂತಾರ 2’ ಸೆಟ್ಟೇರಲಿದೆ. ಕಾಡಿನಲ್ಲಿ ಹೆಚ್ಚಿನ ದೃಶ್ಯಗಳ ಶೂಟಿಂಗ್​ ನಡೆಯುವ ಸಾಧ್ಯತೆ ಇದೆ. ಪಾತ್ರವರ್ಗದ ಬಗ್ಗೆ ಆದಷ್ಟು ಬೇಗ ಅಪ್​ಡೇಟ್​ ಸಿಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ