AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಸ್ಟ್ ರೋಲ್, ವಿಲನ್ ಆಗೋದು ಇಷ್ಟವಿಲ್ಲ ಪರಭಾಷೆಯಲ್ಲಿ ನಟಿಸಬೇಡಿ ಅಂತಾ ಕಿಚ್ಚನ ಫ್ಯಾನ್ಸ್ ಪಟ್ಟು

ಸ್ಯಾಂಡಲ್​ವುಡ್​ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆ ಅಭಿಮಾನಿಗಳಲ್ಲಿ ಆತಂಕ ಹುಟ್ಟು ಹಾಕಿದೆ. ಕಿಚ್ಚನ ನಿರ್ಧಾರ ಬದಲಿಸುವಂತೆ ಅಭಿಮಾನಿಗಳು ಒತ್ತಾಯಿಸ್ತಿದ್ದಾರೆ. ಅದಕ್ಕಾಗಿ ದೊಡ್ಡ ಅಭಿಯಾನವನ್ನೇ ಶುರು ಮಾಡಿದ್ದಾರೆ. ಅಷ್ಟಕ್ಕೂ ಕಿಚ್ಚನ ಆ ನಿರ್ಧಾರ ಏನೂ ಗೊತ್ತಾ? ಕಿಚ್ಚ ಸುದೀಪ್. ಸ್ಯಾಂಡಲ್‌ವುಡ್‌ನಲ್ಲಿ ಕಿಚ್ಚ ಅನ್ನೋ ಪದಕ್ಕೆ ಒಂದು ತೂಕವಿದೆ. ಸದೀಪ್‌ ಸಿನಿಮಾ, ತಮ್ಮ ವಿಭಿನ್ನ ವ್ಯಕ್ತಿತ್ವದ ಮೂಲಕ ಅಭಿಮಾನವನ್ನ ಗಳಿಸಿಕೊಂಡಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಮಾತ್ರ ಸುದೀಪ್‌ ಕಿಚ್ಚು ಹರಿಸಿಲ್ಲ, ಪರಭಾಷೆಗಳಲ್ಲೂ ಕಿಚ್ಚ ತಮ್ಮ ಖದರ್ ತೋರಿಸಿದ್ದಾರೆ. ಆದ್ರೀಗ ಕಿಚ್ಚನ ಅಭಿಮಾನಿಗಳಿಗೆ […]

ಗೆಸ್ಟ್ ರೋಲ್, ವಿಲನ್ ಆಗೋದು ಇಷ್ಟವಿಲ್ಲ ಪರಭಾಷೆಯಲ್ಲಿ ನಟಿಸಬೇಡಿ ಅಂತಾ ಕಿಚ್ಚನ ಫ್ಯಾನ್ಸ್ ಪಟ್ಟು
ಸಾಧು ಶ್ರೀನಾಥ್​
|

Updated on:Jan 20, 2020 | 12:53 PM

Share

ಸ್ಯಾಂಡಲ್​ವುಡ್​ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡೆ ಅಭಿಮಾನಿಗಳಲ್ಲಿ ಆತಂಕ ಹುಟ್ಟು ಹಾಕಿದೆ. ಕಿಚ್ಚನ ನಿರ್ಧಾರ ಬದಲಿಸುವಂತೆ ಅಭಿಮಾನಿಗಳು ಒತ್ತಾಯಿಸ್ತಿದ್ದಾರೆ. ಅದಕ್ಕಾಗಿ ದೊಡ್ಡ ಅಭಿಯಾನವನ್ನೇ ಶುರು ಮಾಡಿದ್ದಾರೆ. ಅಷ್ಟಕ್ಕೂ ಕಿಚ್ಚನ ಆ ನಿರ್ಧಾರ ಏನೂ ಗೊತ್ತಾ?

ಕಿಚ್ಚ ಸುದೀಪ್. ಸ್ಯಾಂಡಲ್‌ವುಡ್‌ನಲ್ಲಿ ಕಿಚ್ಚ ಅನ್ನೋ ಪದಕ್ಕೆ ಒಂದು ತೂಕವಿದೆ. ಸದೀಪ್‌ ಸಿನಿಮಾ, ತಮ್ಮ ವಿಭಿನ್ನ ವ್ಯಕ್ತಿತ್ವದ ಮೂಲಕ ಅಭಿಮಾನವನ್ನ ಗಳಿಸಿಕೊಂಡಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಮಾತ್ರ ಸುದೀಪ್‌ ಕಿಚ್ಚು ಹರಿಸಿಲ್ಲ, ಪರಭಾಷೆಗಳಲ್ಲೂ ಕಿಚ್ಚ ತಮ್ಮ ಖದರ್ ತೋರಿಸಿದ್ದಾರೆ. ಆದ್ರೀಗ ಕಿಚ್ಚನ ಅಭಿಮಾನಿಗಳಿಗೆ ಕಿಚ್ಚನ ನಡೆ ಇಷ್ಟವಾಗ್ತಿಲ್ಲ.

ಕಿಚ್ಚ ಸುದೀಪ್​ಗೆ ಅಪಾರವಾದ ಅಭಿಮಾನಿ ಬಳಗ ಇದೆ. ಆದ್ರೆ ಅವ್ರಿಗೆ ಕಿಚ್ಚ ಪರಭಾಷೆ ಸಿನಿಮಾಗಳಲ್ಲಿ ನಟಿಸೋದು ಇಷ್ಟವಿಲ್ಲ. ಈಗಾಗ್ಲೆೇ ತಮಿಳು, ತೆಲುಗು, ಬಾಲಿವುಡ್​ನಲ್ಲಿ ಕಿಚ್ಚ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಆದ್ರೆ ಹೆಚ್ಚಾಗಿ ಸುದೀಪ್ ಅಥಿತಿ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದಾರೆ. ಅಲ್ಲದೆ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಅದ್ರೆ ಇದು ಸುದೀಪ್ ಅಭಿಮಾನಿಗಳಿಗೆ ಕಿರಿಕಿರಿ ಉಂಟು ಮಾಡಿದೆಯಂತೆ. ಹೀಗಾಗಿ ಬೇರೆ ಭಾಷೆ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಡಿ ಅಂತ ಕಿಚ್ಚನ ಅಭಿಮಾನಿಗಳು ಅಭಿಮಾನದಿಂದಲೇ ಪಟ್ಟು ಹಿಡಿದ್ದಾರೆ.

ಅಂದಹಾಗೇ ನಟ ಸುದೀಪ್ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಅಂತ ಹೇಳಲಾಗಿತ್ತು. ಆದ್ರೆ ಈ ಸುದ್ದಿಗೆ ಕಿಚ್ಚು ಫುಲ್ ಸ್ಟಾಪ್ ಇಟ್ಟಿದ್ದಾರೆ. ರಾಜಮೌಳಿಯಿಂದ ಕರೆ ಬಂದಿಲ್ಲ. ಮತ್ತು ಆರ್‌ಆರ್‌ಆರ್ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ ಅನ್ನೋದನ್ನ ಟ್ವಿಟ್ಟರ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಕಿಚ್ಚನ ಈ ಟ್ವೀಟ್‌ ನೋಡಿದ ಅಭಿಮಾನಿಗಳು ಫುಲ್​ ಖುಷಿಯಲ್ಲಿದ್ದಾರೆ. ಕಾರಣ ಸುದೀಪ್​ ಮತ್ತೊಂದು ಪರಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ ಅನ್ನೋದು. ಯಾಕಂದ್ರೆ ತಮ್ಮ ನೆಚ್ಚಿನ ನಾಯಕ ಪರಭಾಷೆಗಳಲ್ಲಿ ವಿಲನ್​ ಆಗೋದು ಕಿಚ್ಚನ ಅಭಿಮಾನಿಗಳಿಗೆ ಬಿಲ್​ಖುಲ್ ಇಷ್ಟ ಇಲ್ಲವಂತೆ.

ತೆಲುಗಿನ ಈಗ, ತಮಿಳಿನ ಪುಲಿ, ಬಾಲಿವುಡ್​ನ ದಬಾಂಗ್ 3, ಸೈರಾ ಸಿನಿಮಾಗಳಲ್ಲಿ ಸುದೀಪ್​ ನೆಗೆಟಿವ್​ ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗೆ ವಿಲನ್​ ಆಗಿ ಪರಭಾಷಾ ನಟರ ಕೈಯಲ್ಲಿ ಒದೆ ತಿನ್ನೋದನ್ನ ನೋಡಲು ಕಿಚ್ಚನ ಫ್ಯಾನ್ಸ್​ಗೆ ಇಷ್ಟವಿಲ್ಲವಂತೆ. ಹಾಗಾಗಿ ಇನ್ಮುಂದೆ ಪರಭಾಷಾ ಚಿತ್ರಗಳಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸಬೇಡಿ. ಹಾಲಿವುಡ್​ ಸಿನಿಮಾಗಳಲ್ಲಿ ಅಭಿನಯಿಸಿ ಕಾಲರ್​ ಎತ್ತಿಕೊಂಡು ತಿರುಗಾಡುತ್ತೇವೆ ಅಂತ ಕಿಚ್ಚನ ಫ್ಯಾನ್ಸ್ ಪಟ್ಟು ಹಿಡಿದಿದ್ದಾರೆ.

ಅಷ್ಟೇ ಅಲ್ಲ ಸೋಷಿಯಲ್​ ಮಿಡಿಯಾದಲ್ಲಿ ಸಾಲು ಸಾಲು ಟ್ಟೀಟ್​ಗಳನ್ನ ಮಾಡಿ ಕಿಚ್ಚನಿಗೆ ಟ್ಯಾಗ್ ಮಾಡಿದ್ದಾರೆ. ಆದ್ರೆ ಅಭಿಮಾನಿಗಳ ಈ ಆಸೆಗೆ ಕಿಚ್ಚ ಸುದೀಪ್ ತಲೆಬಾಗ್ತಾರಾ? ಪರಭಾಷೆಗಳಲ್ಲಿ ಕಿಚ್ಚ ಅತಿಥಿ ಪಾತ್ರದಲ್ಲಿ ಅಭಿನಯಿಸೋದಿಲ್ವಾ? ಅನ್ನೋದನ್ನ ಕಾದು ನೋಡ್ಬೇಕಿದೆ.

Published On - 12:52 pm, Mon, 20 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ