AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​, ಪ್ರಶಾಂತ್​ ಅವರನ್ನು ಸಂದರ್ಶನ ಮಾಡಿದ ಬಾಲಿವುಡ್​ ಸ್ಟಾರ್​ ನಟ; ಇಲ್ಲಿದೆ ವಿಡಿಯೋ

ಯಶ್ ಅವರು ‘ಕೆಜಿಎಫ್​ 2’ ತಂಡದ ಜತೆಗೆ ದೆಹಲಿಗೆ ತೆರಳಿದ್ದರು. ಅಲ್ಲಿ ಸಿನಿಮಾ ಪ್ರಚಾರ ಮಾಡಲಾಗಿತ್ತು. ಆದರೆ, ಯಶ್​ ಜತೆ ಪ್ರಶಾಂತ್​ ನೀಲ್ ಅವರು ಕಾಣಿಸಿಕೊಂಡಿರಲಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ.

ಯಶ್​, ಪ್ರಶಾಂತ್​ ಅವರನ್ನು ಸಂದರ್ಶನ ಮಾಡಿದ ಬಾಲಿವುಡ್​ ಸ್ಟಾರ್​ ನಟ; ಇಲ್ಲಿದೆ ವಿಡಿಯೋ
ಪ್ರಶಾಂತ್​, ಯಶ್​, ಫರ್ಹಾನ್
TV9 Web
| Edited By: |

Updated on:Apr 09, 2022 | 8:20 PM

Share

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾ (KGF Chapter 2 Movie) ತೆರೆಗೆ ಬರೋಕೆ ರೆಡಿ ಆಗಿದೆ. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಹಿಂದಿಯಲ್ಲಿ ಈ ಸಿನಿಮಾಗೆ ದೊಡ್ಡ ಮಾರುಕಟ್ಟೆ ಸಿಕ್ಕಿದೆ. ಈ ಕಾರಣಕ್ಕೆ ಆ ಭಾಗದಲ್ಲಿ ಹೆಚ್ಚು ಪ್ರಚಾರ ಮಾಡಲಾಗುತ್ತಿದೆ. ಯಶ್ ಅವರು ನಾನಾ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈಗ ಯಶ್​ ಹಾಗೂ ಪ್ರಶಾಂತ್​ ನೀಲ್ (Praashanth Neel)​ ಅವರನ್ನು ಬಾಲಿವುಡ್​ನ ಸ್ಟಾರ್ ನಟ ಫರ್ಹಾನ್​ ಅಖ್ತರ್ ಅವರು ಸಂದರ್ಶನ ಮಾಡಿದ್ದಾರೆ. ಈ ವಿಡಿಯೋವನ್ನು ‘ಹೊಂಬಾಳೆ ಫಿಲ್ಮ್ಸ್​’ನ (Hombale Films) ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಲಾಗಿದ್ದು, ಅಭಿಮಾನಿಗಳು ಮುಗಿಬಿದ್ದು ನೋಡುತ್ತಿದ್ದಾರೆ.

ಇತ್ತೀಚೆಗೆ ಯಶ್ ಅವರು ‘ಕೆಜಿಎಫ್​ 2’ ತಂಡದ ಜತೆಗೆ ದೆಹಲಿಗೆ ತೆರಳಿದ್ದರು. ಅಲ್ಲಿ ಸಿನಿಮಾ ಪ್ರಚಾರ ಮಾಡಲಾಗಿತ್ತು. ಆದರೆ, ಯಶ್​ ಜತೆ ಪ್ರಶಾಂತ್​ ನೀಲ್ ಅವರು ಕಾಣಿಸಿಕೊಂಡಿರಲಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಯಶ್ ಅವರು ಸಂದರ್ಶನದಲ್ಲಿ ಈ ವಿಚಾರವನ್ನು ಬಿಟ್ಟುಕೊಟ್ಟಿದ್ದಾರೆ. ಪ್ರಶಾಂತ್​ ನೀಲ್​ ಅವರು ಪರ್ಫೆಕ್ಷನ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ‘ಕೆಜಿಎಫ್​ 2’ ಅಚ್ಚುಕಟ್ಟಾಗಿ ಮೂಡಿಬರಬೇಕು ಎಂಬುದು ಅವರ ಉದ್ದೇಶ. ಈ ಕಾರಣಕ್ಕೆ, ಕೊನೆಯ ಕ್ಷಣದವರೆಗೂ ಅವರು ‘ಕೆಜಿಎಫ್ 2’ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈ ಕಾರಣಕ್ಕೆ ಪ್ರಶಾಂತ್ ನೀಲ್ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿರಲಿಲ್ಲ.

‘ಆರಂಭದಲ್ಲಿ ಇದನ್ನು ಕನ್ನಡ ಸಿನಿಮಾ ಮಾಡಲು ಮಾತ್ರ ಆಲೋಚಿಸಲಾಗಿತ್ತು. ಆದರೆ, ಸ್ಕ್ರಿಪ್ಟ್​ನಲ್ಲಿ ಬರೆದ ರೀತಿಯಲ್ಲೇ ಸಿನಿಮಾ ಮೂಡಿ ಬರಲು ಯಶ್ ಸಹಕಾರಿ ಆದರು. ಈ ಸಿನಿಮಾ ರಿಲೀಸ್​ಗೆ ಬಂದು ನಿಂತಿದೆ. ನಾನು ನನ್ನ ಮಗಳನ್ನು ಮದುವೆ ಮಾಡಿ ಕೊಡುತ್ತಿರುವಂತೆ ಭಾಸವಾಗುತ್ತಿದೆ’ ಎಂದರು ಪ್ರಶಾಂತ್ ನೀಲ್. ಈ ಮೂಲಕ ಸಿನಿಮಾ ಬಗ್ಗೆ ಅವರಿಗೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸಿದರು.

‘ಗೂಗ್ಲಿ ಸಿನಿಮಾ ನೋಡಿ ಯಶ್ ನಟನೆಯನ್ನು ಮೆಚ್ಚಿಕೊಂಡೆ. ಯಶ್ ಅವರು ನನ್ನ ನಿರ್ದೇಶನದ ‘ಉಗ್ರಂ’ ಸಿನಿಮಾ ನೋಡಿದ್ದರು. ನಾನು ನನ್ನ ನಿರ್ಮಾಪಕರಿಗೆ ‘ಕೆಜಿಎಫ್​’ ಚಿತ್ರದ ಒಂದು ದೃಶ್ಯವನ್ನು ಮಾತ್ರ ವಿವರಿಸಿದ್ದೆ. ನಿರ್ಮಾಪಕರಿಗೆ ಇಷ್ಟವಾಯ್ತು. ಅವರಿಗೆ ನಾನು ಕಥೆಯನ್ನು ವಿವರಿಸಿರಲಿಲ್ಲ. ಈ ಚಿತ್ರದಲ್ಲಿ ಯಾರು ನಟಿಸಬೇಕು ಎನ್ನುವ ಚರ್ಚೆ ಬಂದಾಗ ಮೊದಲ ಹೆಸರು ಬಂದಿದ್ದು ಯಶ್​ ಅವರದ್ದು’ ಎಂದಿದ್ದಾರೆ ಪ್ರಶಾಂತ್ ನೀಲ್.

ಇದನ್ನೂ ಓದಿ:  ‘ಕೆಜಿಎಫ್​ 2’ ಹಾಗೂ ‘ಬೀಸ್ಟ್​’ ಚಿತ್ರಗಳಿಗೆ ತಮಿಳುನಾಡಿನಲ್ಲಿ ಸಿಗುತ್ತಿರುವ ಚಿತ್ರಮಂದಿರಗಳೆಷ್ಟು? ಇಲ್ಲಿದೆ ವಿವರ

ಭಾನುವಾರದಿಂದ ಕರ್ನಾಟಕದಲ್ಲಿ ‘ಕೆಜಿಎಫ್​ ಚಾಪ್ಟರ್ 2’ ಟಿಕೆಟ್ ಬುಕಿಂಗ್​ ಓಪನ್​; ಎಷ್ಟು ಗಂಟೆಗೆ ಶೋ ಶುರು?

Published On - 8:11 pm, Sat, 9 April 22

ಆಂಧ್ರಪ್ರದೇಶದಲ್ಲಿ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, ಟೆಕ್ಕಿ ಸಾವು
ಆಂಧ್ರಪ್ರದೇಶದಲ್ಲಿ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, ಟೆಕ್ಕಿ ಸಾವು
ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​