ಫೈಟರ್​ ಸಾವು: ರಚಿತಾ ರಾಮ್​, ಅಜಯ್​ ರಾವ್​ ಬಂಧನಕ್ಕೆ ಎಐಸಿಸಿ ಹ್ಯುಮನ್ ರೈಟ್ಸ್ ಸಂಘಟನೆ ಒತ್ತಾಯ

Fighter Vivek Death: ಫೈಟರ್​ ವಿವೇಕ್​ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಐಸಿಸಿ ಹ್ಯುಮನ್ ರೈಟ್ಸ್ ಸಂಘಟನೆ ದೂರು ನೀಡಿದೆ. ‘ದುರ್ಘಟನೆ ನಡೆದಾಗ ಆ ಸ್ಥಳದಲ್ಲಿ ಅಜಯ್​ ರಾವ್​ ಇದ್ದರು. ರಚಿತಾ ರಾಮ್​ ಜೊತೆ ಕ್ಯಾಮೆರಾಮ್ಯಾನ್​ ಕೂಡ ಬಂಧನವಾಗಬೇಕು’ ಎಂದು ಮನವಿ ಮಾಡಿಕೊಳ್ಳಲಾಗಿದೆ.

ಫೈಟರ್​ ಸಾವು: ರಚಿತಾ ರಾಮ್​, ಅಜಯ್​ ರಾವ್​ ಬಂಧನಕ್ಕೆ ಎಐಸಿಸಿ ಹ್ಯುಮನ್ ರೈಟ್ಸ್ ಸಂಘಟನೆ ಒತ್ತಾಯ
ಅಜಯ್​ ರಾವ್​, ರಚಿತಾ ರಾಮ್​
Follow us
| Updated By: ಮದನ್​ ಕುಮಾರ್​

Updated on: Aug 10, 2021 | 3:32 PM

‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ಸಂದರ್ಭದಲ್ಲಿ ಸೋಮವಾರ (ಆ.9) ವಿದ್ಯುತ್​ ತಗುಲಿ ಫೈಟರ್​ ವಿವೇಕ್​ ನಿಧನರಾದ ಘಟನೆಗೆ ಹಲವರಿಂದ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕ ಅಜಯ್​ ರಾವ್​, ನಾಯಕಿ ರಚಿತಾ ರಾಮ್​ ಅವರನ್ನೂ ಬಂಧಿಸುವಂತೆ ಎಐಸಿಸಿ ಹ್ಯುಮನ್ ರೈಟ್ಸ್ ಸಂಘಟನೆ (AICC Human Rights) ದೂರು ನೀಡಿದೆ. ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್​ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ‘ದುರ್ಘಟನೆ ನಡೆದಾಗ ಆ ಸ್ಥಳದಲ್ಲಿ ಅಜಯ್​ ರಾವ್​ ( Ajay Rao) ಇದ್ದರು. ರಚಿತಾ ರಾಮ್​ (Rachita Ram) ಜೊತೆ ಕ್ಯಾಮೆರಾಮ್ಯಾನ್​ ಕೂಡ ಬಂಧನವಾಗಬೇಕು. ಇವರನ್ನೆಲ್ಲ ಬಿಟ್ಟು ಉಳಿದವರನ್ನು ಬಂಧಿಸಲಾಗಿದೆ’ ಎಂದು ಎಐಸಿಸಿ ಹ್ಯುಮನ್ ರೈಟ್ಸ್ ಸಂಘಟನೆ ಹೇಳಿದೆ. ಇದಕ್ಕೂ ಮುನ್ನ ಬಿಡದಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ನಿರ್ದೇಶಕ ಶಂಕರ್​ ರಾಜ್​ ಎ1, ನಿರ್ಮಾಪಕ ಗುರು ದೇಶಪಾಂಡೆ (Guru Deshpande) ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಹಾಗೂ ಕ್ರೇನ್ ಆಪರೇಟರ್ ಮಹದೇವ್ ಎ5 ಎಂದು ಬಿಡದಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಗುರು ದೇಶಪಾಂಡೆ ಮತ್ತು ಫರ್ನಾಂಡಿಸ್​ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಇನ್ನುಳಿದವರನ್ನು ಇಂದು (ಆ.10) ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.

ಮೂವರು ಆರೋಪಿಗಳಿಗೆ ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿರ್ದೇಶಕ ಶಂಕರಯ್ಯ, ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಆದೇಶ ನೀಡಿದ್ದಾರೆ. ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್​​ನ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಈ ಆದೇಶವನ್ನು ನೀಡಿದ್ದಾರೆ. ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಮೂವರನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ರವಾನಿಸಿದ್ದಾರೆ.

ಮೃತ ವಿವೇಕ್​ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ನಿರ್ಮಾಪಕ ಗುರು ದೇಶಪಾಂಡೆ ಅವರು ಭರವಸೆ ನೀಡಿದ್ದಾರೆ. ಕಾನ್ಫರೆನ್ಸ್​ ಕಾಲ್​ ಮೂಲಕ ಮೃತರ ಸಂಬಂಧಿಕರ ಜೊತೆ ಅವರು ಮಾತನಾಡಿದ್ದಾರೆ. ಇನ್ನೋರ್ವ ಗಾಯಾಳು ರಂಜಿತ್​ ಅವರು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

ಮುಂಜಾಗ್ರತ ಕ್ರಮ ಕೈಗೊಂಡಿರಲಿಲ್ಲ, ವಿವೇಕ್​ಗೆ ನ್ಯಾಯ ಸಿಗುವವರೆಗೆ ಶೂಟಿಂಗ್​ಗೆ​ ಬರಲ್ಲ’; ಅಜಯ್​ ರಾವ್

ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು