AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Fighter Vivek Death: ಸದ್ಯ ಗುರು ದೇಶಪಾಂಡೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅದರ ನಡುವೆಯೇ ಸ್ನೇಹಿತರೊಬ್ಬರ ಮೂಲಕ ಕಾನ್ಫರೆನ್ಸ್​ ಕಾಲ್​ ಮಾಡಿರುವ ಅವರು ವಿವೇಕ್​ ಕುಟುಂಬದವರ ಜೊತೆಗೆ ಮಾತನಾಡಿದ್ದಾರೆ.

ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ
ನಿರ್ಮಾಪಕ ಗುರು ದೇಶಪಾಂಡೆ, ಮೃತ ಫೈಟರ್​ ವಿವೇಕ್​
TV9 Web
| Edited By: |

Updated on: Aug 10, 2021 | 2:23 PM

Share

ಅಜಯ್​ ರಾವ್ (Ajay Rao)​ ಮತ್ತು ರಚಿತಾ ರಾಮ್ (Rachita Ram)​ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದ ‘ಲವ್​ ಯೂ ರಚ್ಚು’ (Love You Racchu) ಸಿನಿಮಾ ಶೂಟಿಂಗ್​ ವೇಳೆ ಫೈಟರ್​ ವಿವೇಕ್​ (Fighter Vivek) ಮೃತಪಟ್ಟ ಬಳಿಕ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ (Guru Deshpande) ಪರಾರಿ ಆಗಿದ್ದಾರೆ. ಪ್ರಕರಣದಲ್ಲಿ ಅವರನ್ನು 2ನೇ ಆರೋಪಿ ಎಂದು ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಗುರು ದೇಶಪಾಂಡೆಗಾಗಿ ಶೋಧ ನಡೆಸಲಾಗುತ್ತಿದೆ. ಸದ್ಯ ಯಾರಿಗೂ ಕಾಣಿಸಿಕೊಳ್ಳದ ಅವರು ವಿವೇಕ್​ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವಿವೇಕ್ ಸಂಬಂಧಿಕರು ಹೇಳಿಕೆ ನೀಡಿದ್ದಾರೆ.

ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಘಟನೆ ಬಳಿಕ ನಿರ್ಮಾಪಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಗುರು ದೇಶಪಾಂಡೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅದರ ನಡುವೆಯೇ ಸ್ನೇಹಿತರೊಬ್ಬರ ಮೂಲಕ ಕಾನ್ಫರೆನ್ಸ್​ ಕಾಲ್​ ಮಾಡಿರುವ ಅವರು ವಿವೇಕ್​ ಕುಟುಂಬದವರ ಜೊತೆಗೆ ಮಾತನಾಡಿದ್ದಾರೆ. ಕುಟುಂಬವರಿಗೆ 10 ಲಕ್ಷ ರೂ. ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಫೈಟರ್​ ರಂಜಿತ್​ ಅವರಿಗೆ ರಾಜರಾಜೇಶ್ವರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಬಳಿ ಚಿತ್ರತಂಡದ ಯಾರೂ ಸುಳಿದಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಅದಕ್ಕೆ ಅಜಯ್​ ರಾವ್​ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಬರಬೇಕಿತ್ತು ಎಂದು ಭಾವುಕನಾಗಿ ರಂಜಿತ್​ ನಿರೀಕ್ಷಿಸಿದ್ದರಲ್ಲಿ ತಪ್ಪಿಲ್ಲ. ರಂಜಿತ್​ ಅವರನ್ನು ಭೇಟಿ ಮಾಡೋಕೆ ನಾನು ಆಸ್ಪತ್ರೆಗೆ ಹೋಗಿದ್ದೆ. ಆದರೆ ಅಲ್ಲಿ ನಮ್ಮನ್ನು ಐಯುಸಿ ಒಳಗೆ ಬಿಡಲಿಲ್ಲ. ನಿನ್ನೆಯಿಂದಲೂ ನಾನು ಎಲ್ಲರಿಗೂ ಉತ್ತರ ನೀಡುತ್ತಿದ್ದೇನೆ. ಮೃತ ವಿವೇಕ್ ಅವರ​ ಚಿಕ್ಕಪ್ಪನ ಬಳಿಕ ನಾನು ಮಾತನಾಡಿದ್ದೇನೆ. ಅವರ ಜೊತೆಗೆ ನಾನಿದ್ದೇನೆ’ ಎಂದು ಅಜಯ್​ ರಾವ್​ ಹೇಳಿದ್ದಾರೆ.

ಘಟನೆ ನಡೆದು ಒಂದು ದಿನ ಕಳೆದ ಬಳಿಕ ರಚಿತಾ ರಾಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿವೇಕ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ‘ವಿದ್ಯುತ್​ ಅವಘಡದಿಂದ ಸಾವನ್ನಪಿದ ಫೈಟರ್​ ವಿವೇಕ್​ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ’ ಎಂದು ರಚಿತಾ ಪೋಸ್ಟ್​ ಮಾಡಿದ್ದಾರೆ. ಆದರೆ ಇಷ್ಟು ಮಾತ್ರದಿಂದ ಜನರು ಸಮಾಧಾನ ಆಗಿಲ್ಲ. ಮೃತ ವಿವೇಕ್​ ಕುಟುಂಬಕ್ಕೆ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ರಂಜಿತ್​ ಅವರಿಗೆ ಹಣದ ಸಹಾಯ ಮಾಡಿ ಎಂದು ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಮುಂಜಾಗ್ರತ ಕ್ರಮ ಕೈಗೊಂಡಿರಲಿಲ್ಲ, ವಿವೇಕ್​ಗೆ ನ್ಯಾಯ ಸಿಗುವವರೆಗೆ ಶೂಟಿಂಗ್​ಗೆ​ ಬರಲ್ಲ’; ಅಜಯ್​ ರಾವ್

Fighter Vivek Death: ‘ಲವ್​ ಯೂ ರಚ್ಚು’ ಚಿತ್ರದ ನಿರ್ದೇಶಕ ಸೇರಿದಂತೆ ಮೂವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್