AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ

Fighter Vivek Death: ಸದ್ಯ ಗುರು ದೇಶಪಾಂಡೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅದರ ನಡುವೆಯೇ ಸ್ನೇಹಿತರೊಬ್ಬರ ಮೂಲಕ ಕಾನ್ಫರೆನ್ಸ್​ ಕಾಲ್​ ಮಾಡಿರುವ ಅವರು ವಿವೇಕ್​ ಕುಟುಂಬದವರ ಜೊತೆಗೆ ಮಾತನಾಡಿದ್ದಾರೆ.

ಪೊಲೀಸರ ಕೈಗೆ ಸಿಗದ ಗುರು ದೇಶಪಾಂಡೆ; ಮೃತನ ಕುಟುಂಬಕ್ಕೆ 10 ಲಕ್ಷ ಪರಿಹಾರದ ಭರವಸೆ
ನಿರ್ಮಾಪಕ ಗುರು ದೇಶಪಾಂಡೆ, ಮೃತ ಫೈಟರ್​ ವಿವೇಕ್​
TV9 Web
| Edited By: |

Updated on: Aug 10, 2021 | 2:23 PM

Share

ಅಜಯ್​ ರಾವ್ (Ajay Rao)​ ಮತ್ತು ರಚಿತಾ ರಾಮ್ (Rachita Ram)​ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದ ‘ಲವ್​ ಯೂ ರಚ್ಚು’ (Love You Racchu) ಸಿನಿಮಾ ಶೂಟಿಂಗ್​ ವೇಳೆ ಫೈಟರ್​ ವಿವೇಕ್​ (Fighter Vivek) ಮೃತಪಟ್ಟ ಬಳಿಕ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ (Guru Deshpande) ಪರಾರಿ ಆಗಿದ್ದಾರೆ. ಪ್ರಕರಣದಲ್ಲಿ ಅವರನ್ನು 2ನೇ ಆರೋಪಿ ಎಂದು ಪೊಲೀಸರು ಎಫ್​ಐಆರ್​ ದಾಖಲು ಮಾಡಿದ್ದಾರೆ. ಗುರು ದೇಶಪಾಂಡೆಗಾಗಿ ಶೋಧ ನಡೆಸಲಾಗುತ್ತಿದೆ. ಸದ್ಯ ಯಾರಿಗೂ ಕಾಣಿಸಿಕೊಳ್ಳದ ಅವರು ವಿವೇಕ್​ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವಿವೇಕ್ ಸಂಬಂಧಿಕರು ಹೇಳಿಕೆ ನೀಡಿದ್ದಾರೆ.

ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಘಟನೆ ಬಳಿಕ ನಿರ್ಮಾಪಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಗುರು ದೇಶಪಾಂಡೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅದರ ನಡುವೆಯೇ ಸ್ನೇಹಿತರೊಬ್ಬರ ಮೂಲಕ ಕಾನ್ಫರೆನ್ಸ್​ ಕಾಲ್​ ಮಾಡಿರುವ ಅವರು ವಿವೇಕ್​ ಕುಟುಂಬದವರ ಜೊತೆಗೆ ಮಾತನಾಡಿದ್ದಾರೆ. ಕುಟುಂಬವರಿಗೆ 10 ಲಕ್ಷ ರೂ. ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಫೈಟರ್​ ರಂಜಿತ್​ ಅವರಿಗೆ ರಾಜರಾಜೇಶ್ವರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಬಳಿ ಚಿತ್ರತಂಡದ ಯಾರೂ ಸುಳಿದಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಅದಕ್ಕೆ ಅಜಯ್​ ರಾವ್​ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಬರಬೇಕಿತ್ತು ಎಂದು ಭಾವುಕನಾಗಿ ರಂಜಿತ್​ ನಿರೀಕ್ಷಿಸಿದ್ದರಲ್ಲಿ ತಪ್ಪಿಲ್ಲ. ರಂಜಿತ್​ ಅವರನ್ನು ಭೇಟಿ ಮಾಡೋಕೆ ನಾನು ಆಸ್ಪತ್ರೆಗೆ ಹೋಗಿದ್ದೆ. ಆದರೆ ಅಲ್ಲಿ ನಮ್ಮನ್ನು ಐಯುಸಿ ಒಳಗೆ ಬಿಡಲಿಲ್ಲ. ನಿನ್ನೆಯಿಂದಲೂ ನಾನು ಎಲ್ಲರಿಗೂ ಉತ್ತರ ನೀಡುತ್ತಿದ್ದೇನೆ. ಮೃತ ವಿವೇಕ್ ಅವರ​ ಚಿಕ್ಕಪ್ಪನ ಬಳಿಕ ನಾನು ಮಾತನಾಡಿದ್ದೇನೆ. ಅವರ ಜೊತೆಗೆ ನಾನಿದ್ದೇನೆ’ ಎಂದು ಅಜಯ್​ ರಾವ್​ ಹೇಳಿದ್ದಾರೆ.

ಘಟನೆ ನಡೆದು ಒಂದು ದಿನ ಕಳೆದ ಬಳಿಕ ರಚಿತಾ ರಾಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿವೇಕ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ‘ವಿದ್ಯುತ್​ ಅವಘಡದಿಂದ ಸಾವನ್ನಪಿದ ಫೈಟರ್​ ವಿವೇಕ್​ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ’ ಎಂದು ರಚಿತಾ ಪೋಸ್ಟ್​ ಮಾಡಿದ್ದಾರೆ. ಆದರೆ ಇಷ್ಟು ಮಾತ್ರದಿಂದ ಜನರು ಸಮಾಧಾನ ಆಗಿಲ್ಲ. ಮೃತ ವಿವೇಕ್​ ಕುಟುಂಬಕ್ಕೆ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ರಂಜಿತ್​ ಅವರಿಗೆ ಹಣದ ಸಹಾಯ ಮಾಡಿ ಎಂದು ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಮುಂಜಾಗ್ರತ ಕ್ರಮ ಕೈಗೊಂಡಿರಲಿಲ್ಲ, ವಿವೇಕ್​ಗೆ ನ್ಯಾಯ ಸಿಗುವವರೆಗೆ ಶೂಟಿಂಗ್​ಗೆ​ ಬರಲ್ಲ’; ಅಜಯ್​ ರಾವ್

Fighter Vivek Death: ‘ಲವ್​ ಯೂ ರಚ್ಚು’ ಚಿತ್ರದ ನಿರ್ದೇಶಕ ಸೇರಿದಂತೆ ಮೂವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?