AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು;  ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ
ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ
TV9 Web
| Edited By: |

Updated on:Aug 09, 2021 | 3:57 PM

Share

ಸಿನಿಮಾ ಶೂಟಿಂಗ್​ ವೇಳೆ ಸಾಕಷ್ಟು ಮುಂಜಾಗೃತ ಕ್ರಮ ಕೈಗೊಂಡರೂ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈ ರೀತಿ ಸಾಕಷ್ಟು ದುರಂತಗಳು ಈ ಮೊದಲು ನಡೆದಿವೆ. ಈಗ ಸ್ಯಾಂಡಲ್​ವುಡ್​ ಫೈಟರ್​ ಕೂಡ ಇದೇ ರೀತಿಯ ಅವಘಡಕ್ಕೆ ಬಲಿಯಾಗಿದ್ದಾರೆ. ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್ ವೇಳೆ ದುರಂತ ನಡೆದಿದೆ. ಫೈಟರ್​ ವಿವೇಕ್​ ಎಂಬುವವರು ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.​ ವಿದ್ಯುತ್​ ತಂತಿಗೆ ರೋಪ್ ಸ್ಪಷಿಟಿಸಿದ್ದುಇದಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಅಜಯ್​ ರಾವ್​, ಮೆಟಲ್​ ರೋಪ್​ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ಜಾಕೇಟ್​ ಹಾಕಿದ್ದವನಿಗೂ ಶಾಕ್​ ಹೊಡೆದಿದೆ’ ಎಂದಿದ್ದಾರೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ನವೆಂಬರ್​ ತಿಂಗಳಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ಸಕಲೇಶಪುರದಲ್ಲಿ ಪ್ರಾರಂಭ; ಫುಲ್​ ಹ್ಯಾಪಿ ಮೂಡ್​ನಲ್ಲಿದ್ದಾರೆ ಅಜಯ್​ ರಾವ್, ರಚಿತಾ ರಾಮ್​

 ಕಮರ್ಷಿಯಲ್​ ಸ್ಟ್ರೀಟ್​ನಲ್ಲಿ ಮಾರುವೇಷದಲ್ಲಿ ಸುತ್ತಾಡಿ, ಅಂಗಡಿಗಳಿಗೆ ಭೇಟಿ ನೀಡಿದ ನಟಿ ರಚಿತಾ ರಾಮ್​..

Published On - 2:52 pm, Mon, 9 August 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!