AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ‘ಮೂಕನ ಮಕ್ಕಳು’ ಬೆಳ್ಳಿತೆರೆ ಮೇಲೆ.. ಅತಿ ಶೀಘ್ರದಲ್ಲಿ!

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್​ರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ಮೂಕನ ಮಕ್ಕಳು ಸಹ ಒಂದು. ಈ ಕೃತಿಯನ್ನು ಅನೇಕರು ಓದಿರುತ್ತಾರೆ. ಈಗ, ಮಾಸ್ತಿಯವರ ಕೃತಿ ಸಿನಿಮಾ ರೂಪದಲ್ಲಿ ಸಿದ್ಧಗೊಂಡಿದ್ದು ಅತಿ ಶೀಘ್ರದಲ್ಲಿ ತೆರೆಮೇಲೆ ಬರಲಿದೆ. ಕರಿಗಿರಿ ಪ್ರೊಡಕ್ಷನ್ಸ್ ಬ್ಯಾನರ್​ ಅಡಿಯಲ್ಲಿ ಸಜ್ಜಾಗುತ್ತಿರುವ ಚಿತ್ರಕ್ಕೆ ಪವಿತ್ರಾ ಕ್ರಿಷ್ ಗೌರಿಬಿದನೂರು ನಿರ್ಮಾಪಕಿ. ರಂಗಭೂಮಿ ಕಲಾವಿದರಾದ ಹಾಗೂ ಈ ಹಿಂದೆ ಶಂಭೋ ಮಹಾದೇವ ಸಿನಿಮಾ ನಿರ್ದೇಶಿಸಿದ್ದ ಮೈಸೂರು ಮಂಜು ಸದ್ಯ ಸಿನಿಮಾಗೆ ಌಕ್ಷನ್​ಕಟ್​ ಹೇಳಿದ್ದಾರೆ. […]

ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ‘ಮೂಕನ ಮಕ್ಕಳು’ ಬೆಳ್ಳಿತೆರೆ ಮೇಲೆ.. ಅತಿ ಶೀಘ್ರದಲ್ಲಿ!
KUSHAL V
| Edited By: ಆಯೇಷಾ ಬಾನು|

Updated on:Nov 24, 2020 | 6:39 AM

Share

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್​ರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ಮೂಕನ ಮಕ್ಕಳು ಸಹ ಒಂದು. ಈ ಕೃತಿಯನ್ನು ಅನೇಕರು ಓದಿರುತ್ತಾರೆ. ಈಗ, ಮಾಸ್ತಿಯವರ ಕೃತಿ ಸಿನಿಮಾ ರೂಪದಲ್ಲಿ ಸಿದ್ಧಗೊಂಡಿದ್ದು ಅತಿ ಶೀಘ್ರದಲ್ಲಿ ತೆರೆಮೇಲೆ ಬರಲಿದೆ.

ಕರಿಗಿರಿ ಪ್ರೊಡಕ್ಷನ್ಸ್ ಬ್ಯಾನರ್​ ಅಡಿಯಲ್ಲಿ ಸಜ್ಜಾಗುತ್ತಿರುವ ಚಿತ್ರಕ್ಕೆ ಪವಿತ್ರಾ ಕ್ರಿಷ್ ಗೌರಿಬಿದನೂರು ನಿರ್ಮಾಪಕಿ. ರಂಗಭೂಮಿ ಕಲಾವಿದರಾದ ಹಾಗೂ ಈ ಹಿಂದೆ ಶಂಭೋ ಮಹಾದೇವ ಸಿನಿಮಾ ನಿರ್ದೇಶಿಸಿದ್ದ ಮೈಸೂರು ಮಂಜು ಸದ್ಯ ಸಿನಿಮಾಗೆ ಌಕ್ಷನ್​ಕಟ್​ ಹೇಳಿದ್ದಾರೆ. ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ಸಹ ನಿರ್ದೇಶನವನ್ನು ಮಂಜು ಕ್ರಿಷ್ ಗೌರಿಬಿದನೂರು ಮಾಡಿದ್ದಾರೆ. ಪರಿಸರದಲ್ಲಿ ನಡೆಯುವ ಭಾವನಾತ್ಮಕ ಸಂಕೋಲೆಯ ಕಥಾಹಂದರವುಳ್ಳ ಈ ಸಿನಿಮಾದಲ್ಲಿ, ಮೊದಲ ಬಾರಿಗೆ ವಿಶೇಷ ಚೇತನನ ಪಾತ್ರದಲ್ಲಿ ಮಂಜು ಕ್ರಿಷ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ನಾಗರಾಜ ಶೆಟ್ಟಿ ಮಳಗಿ ಛಾಯಾಗ್ರಹಣವಿದ್ದು ಗಣೇಶ್ ಭಟ್ ಸಂಗೀತ ಸಂಯೋಜನೆಯಿದೆ. ಜೊತೆಗೆ, ಸಿನಿಮಾದ ಸಂಕಲನವನ್ನು ಸಂಜೀವ ರೆಡ್ಡಿ ಮಾಡಿದ್ದಾರೆ.

ಈಗಾಗಲೇ, ಮೂಕನ ಮಕ್ಕಳು ಕೊಲ್ಕತ್ತ ಇಂಟರ್​ನ್ಯಾಷನಲ್ ಫಿಲಂ ಫೆಸ್ಟಿವಲ್​ನಲ್ಲಿ ಪ್ರದರ್ಶನಗೊಂಡು ಉತ್ತಮ ಚಿತ್ರವೆಂಬ ಖ್ಯಾತಿ ಪಡೆದಿದೆ. ಇದಲ್ಲದೆ, ಅಮೆರಿಕದ ಎರಡು ಇಂಟರ್​ ನ್ಯಾಷನಲ್ ಫೆಸ್ಟಿವಲ್​ಗೆ ಈ ಚಿತ್ರ ಆಯ್ಕೆಯಾಗಿದೆ. ಜೊತೆಗೆ, ಪನೋರಮಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಸಜ್ಜಾಗಿದೆ.

ಚಿತ್ರರಂಗದ ಹಲವರಿಂದ ಬಹಳಷ್ಟು ಮೆಚ್ಚುಗೆ ಪಡೆದಿರುವ ಈ ಚಿತ್ರ ಮುಂದಿನ ವರ್ಷ ತೆರೆಗೆ ಬರುವ ಸಿದ್ಧತೆಯಲ್ಲಿದೆ. ಮಾಸ್ತಿ ಅವರ ಮೂಕನ ಮಕ್ಕಳು ಕೃತಿ ಬಹಳಷ್ಟು ಜನಪ್ರಿಯತೆಯನ್ನು ಪಡೆದಿತ್ತು. ಅದೇ ರೀತಿ ಸಿನಿಮಾ ಕೂಡ ಪ್ರಸಿದ್ಧತೆಯನ್ನು ಪಡೆಯುತ್ತದೆಯೇ ಎಂದು ಕಾದು ನೋಡಬೇಕಿದೆ.

Published On - 7:56 pm, Sun, 15 November 20

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ