AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ‘ಮೂಕನ ಮಕ್ಕಳು’ ಬೆಳ್ಳಿತೆರೆ ಮೇಲೆ.. ಅತಿ ಶೀಘ್ರದಲ್ಲಿ!

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್​ರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ಮೂಕನ ಮಕ್ಕಳು ಸಹ ಒಂದು. ಈ ಕೃತಿಯನ್ನು ಅನೇಕರು ಓದಿರುತ್ತಾರೆ. ಈಗ, ಮಾಸ್ತಿಯವರ ಕೃತಿ ಸಿನಿಮಾ ರೂಪದಲ್ಲಿ ಸಿದ್ಧಗೊಂಡಿದ್ದು ಅತಿ ಶೀಘ್ರದಲ್ಲಿ ತೆರೆಮೇಲೆ ಬರಲಿದೆ. ಕರಿಗಿರಿ ಪ್ರೊಡಕ್ಷನ್ಸ್ ಬ್ಯಾನರ್​ ಅಡಿಯಲ್ಲಿ ಸಜ್ಜಾಗುತ್ತಿರುವ ಚಿತ್ರಕ್ಕೆ ಪವಿತ್ರಾ ಕ್ರಿಷ್ ಗೌರಿಬಿದನೂರು ನಿರ್ಮಾಪಕಿ. ರಂಗಭೂಮಿ ಕಲಾವಿದರಾದ ಹಾಗೂ ಈ ಹಿಂದೆ ಶಂಭೋ ಮಹಾದೇವ ಸಿನಿಮಾ ನಿರ್ದೇಶಿಸಿದ್ದ ಮೈಸೂರು ಮಂಜು ಸದ್ಯ ಸಿನಿಮಾಗೆ ಌಕ್ಷನ್​ಕಟ್​ ಹೇಳಿದ್ದಾರೆ. […]

ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ‘ಮೂಕನ ಮಕ್ಕಳು’ ಬೆಳ್ಳಿತೆರೆ ಮೇಲೆ.. ಅತಿ ಶೀಘ್ರದಲ್ಲಿ!
KUSHAL V
| Edited By: ಆಯೇಷಾ ಬಾನು|

Updated on:Nov 24, 2020 | 6:39 AM

Share

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್​ರ ಅತ್ಯಂತ ಪ್ರಸಿದ್ಧ ಕೃತಿಗಳಲ್ಲಿ ಮೂಕನ ಮಕ್ಕಳು ಸಹ ಒಂದು. ಈ ಕೃತಿಯನ್ನು ಅನೇಕರು ಓದಿರುತ್ತಾರೆ. ಈಗ, ಮಾಸ್ತಿಯವರ ಕೃತಿ ಸಿನಿಮಾ ರೂಪದಲ್ಲಿ ಸಿದ್ಧಗೊಂಡಿದ್ದು ಅತಿ ಶೀಘ್ರದಲ್ಲಿ ತೆರೆಮೇಲೆ ಬರಲಿದೆ.

ಕರಿಗಿರಿ ಪ್ರೊಡಕ್ಷನ್ಸ್ ಬ್ಯಾನರ್​ ಅಡಿಯಲ್ಲಿ ಸಜ್ಜಾಗುತ್ತಿರುವ ಚಿತ್ರಕ್ಕೆ ಪವಿತ್ರಾ ಕ್ರಿಷ್ ಗೌರಿಬಿದನೂರು ನಿರ್ಮಾಪಕಿ. ರಂಗಭೂಮಿ ಕಲಾವಿದರಾದ ಹಾಗೂ ಈ ಹಿಂದೆ ಶಂಭೋ ಮಹಾದೇವ ಸಿನಿಮಾ ನಿರ್ದೇಶಿಸಿದ್ದ ಮೈಸೂರು ಮಂಜು ಸದ್ಯ ಸಿನಿಮಾಗೆ ಌಕ್ಷನ್​ಕಟ್​ ಹೇಳಿದ್ದಾರೆ. ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ಸಹ ನಿರ್ದೇಶನವನ್ನು ಮಂಜು ಕ್ರಿಷ್ ಗೌರಿಬಿದನೂರು ಮಾಡಿದ್ದಾರೆ. ಪರಿಸರದಲ್ಲಿ ನಡೆಯುವ ಭಾವನಾತ್ಮಕ ಸಂಕೋಲೆಯ ಕಥಾಹಂದರವುಳ್ಳ ಈ ಸಿನಿಮಾದಲ್ಲಿ, ಮೊದಲ ಬಾರಿಗೆ ವಿಶೇಷ ಚೇತನನ ಪಾತ್ರದಲ್ಲಿ ಮಂಜು ಕ್ರಿಷ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ನಾಗರಾಜ ಶೆಟ್ಟಿ ಮಳಗಿ ಛಾಯಾಗ್ರಹಣವಿದ್ದು ಗಣೇಶ್ ಭಟ್ ಸಂಗೀತ ಸಂಯೋಜನೆಯಿದೆ. ಜೊತೆಗೆ, ಸಿನಿಮಾದ ಸಂಕಲನವನ್ನು ಸಂಜೀವ ರೆಡ್ಡಿ ಮಾಡಿದ್ದಾರೆ.

ಈಗಾಗಲೇ, ಮೂಕನ ಮಕ್ಕಳು ಕೊಲ್ಕತ್ತ ಇಂಟರ್​ನ್ಯಾಷನಲ್ ಫಿಲಂ ಫೆಸ್ಟಿವಲ್​ನಲ್ಲಿ ಪ್ರದರ್ಶನಗೊಂಡು ಉತ್ತಮ ಚಿತ್ರವೆಂಬ ಖ್ಯಾತಿ ಪಡೆದಿದೆ. ಇದಲ್ಲದೆ, ಅಮೆರಿಕದ ಎರಡು ಇಂಟರ್​ ನ್ಯಾಷನಲ್ ಫೆಸ್ಟಿವಲ್​ಗೆ ಈ ಚಿತ್ರ ಆಯ್ಕೆಯಾಗಿದೆ. ಜೊತೆಗೆ, ಪನೋರಮಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಸಜ್ಜಾಗಿದೆ.

ಚಿತ್ರರಂಗದ ಹಲವರಿಂದ ಬಹಳಷ್ಟು ಮೆಚ್ಚುಗೆ ಪಡೆದಿರುವ ಈ ಚಿತ್ರ ಮುಂದಿನ ವರ್ಷ ತೆರೆಗೆ ಬರುವ ಸಿದ್ಧತೆಯಲ್ಲಿದೆ. ಮಾಸ್ತಿ ಅವರ ಮೂಕನ ಮಕ್ಕಳು ಕೃತಿ ಬಹಳಷ್ಟು ಜನಪ್ರಿಯತೆಯನ್ನು ಪಡೆದಿತ್ತು. ಅದೇ ರೀತಿ ಸಿನಿಮಾ ಕೂಡ ಪ್ರಸಿದ್ಧತೆಯನ್ನು ಪಡೆಯುತ್ತದೆಯೇ ಎಂದು ಕಾದು ನೋಡಬೇಕಿದೆ.

Published On - 7:56 pm, Sun, 15 November 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್