AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಗುತ್ತಾ ದರ್ಶನ್ ತೂಗುದೀಪ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​, ಪವಿತ್ರಾ ಹಾಗೂ ಅವರ ಸಹಚರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ ಅವರಿಗೆ 6106 ನಂಬರ್​ ಕೊಡಲಾಗಿದೆ. ಇದನ್ನೇ ಹೊಸ ಸಿನಿಮಾಗೆ ಶೀರ್ಷಿಕೆಯಾಗಿಸಲು ‘ಭದ್ರಾವತಿ ಮೂವೀ ಮೇಕರ್ಸ್’ ನಿರ್ಮಾಪಕರು ಬೇಡಿಕೆ ಇಟ್ಟಿದ್ದಾರೆ. ಆದರೆ ಈ ಕೇಸ್​ ಈಗ ತನಿಖೆ ಹಂತದಲ್ಲಿ ಇರುವುದರಿಂದ ಅದಕ್ಕೆ ಸಂಬಂಧಿಸಿದ ಟೈಟಲ್​ಗಳನ್ನು ನೀಡದಿರಲು ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.

ಸಿನಿಮಾ ಆಗುತ್ತಾ ದರ್ಶನ್ ತೂಗುದೀಪ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ
ದರ್ಶನ್​
ಮಂಗಳ ರಾಜಗೋಪಾಲ್​
| Edited By: |

Updated on:Jun 27, 2024 | 10:57 AM

Share

ನಟ ದರ್ಶನ್​ (Darshan) ಬಗ್ಗೆ ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಸದ್ಯ ದರ್ಶನ್ ತೂಗುದೀಪ ಗೆ ಕಷ್ಟ ಕಾಲ ಎದುರಾಗಿದೆ. ಕೊಲೆ ಕೇಸ್​ನಲ್ಲಿ ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಸೇರಿಕೊಂಡಿದ್ದಾರೆ. ಜೈಲು ವಾಸದಲ್ಲಿ ಇರುವ ಅವರನ್ನು ನೋಡಲು ಆಪ್ತರು ಆಗಮಿಸುತ್ತಿದ್ದಾರೆ. ಹೀಗಿರುವಾಗ, ದರ್ಶನ್​ ಕೇಸ್​ಗೆ ಸಂಬಂಧಿಸಿದ ವಿಷಯಗಳನ್ನೇ ಇಟ್ಟುಕೊಂಡು ಸಿನಿಮಾ (Kannada Cinema) ಟೈಟಲ್​ ನೋಂದಣಿ ಮಾಡಿಸಲು ಕೆಲವರು ಆಸಕ್ತಿ ತೋರಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ‘ಡಿ ಗ್ಯಾಂಗ್​’ ಎಂಬ ಶೀರ್ಷಿಕೆಗೆ ಬೇಡಿಕೆ ಬಂದಿತ್ತು. ಈಗ ದರ್ಶನ್​ ಅವರಿಗೆ ನೀಡಿದ ಖೈದಿ ನಂಬರ್​ (Darshan Jail Number) ಕೂಡ ಬೇಡಿಕೆಯಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ 6106 ನಂಬರ್​ ನೀಡಲಾಗಿದೆ. ಇದೇ ನಂಬರ್​ನಲ್ಲಿ ಶೀರ್ಷಿಕೆ ಇಟ್ಟುಕೊಂಡು ಸಿನಿಮಾ ಮಾಡಲು ಕೆಲವರು ಮುಂದಾಗಿದ್ದಾರೆ. ಯಾವುದೇ ಸಿನಿಮಾ ಆಗಬೇಕು ಎಂದರೆ ಅದರ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈಗ ‘ಖೈದಿ ನಂಬರ್​ 6106’ ಟೈಟಲ್​ಗೆ ಬೇಡಿಕೆ ಬಂದಿದೆ.

ಚಿತ್ರತಂಡಕ್ಕೆ ಶೀರ್ಷಿಕೆ ಬಳಸಲು ಅನುಮತಿ ನೀಡುವುದಕ್ಕೂ ಮುನ್ನ ವಾಣಿಜ್ಯ ಮಂಡಳಿಯವರು ಕೆಲವು ಮಾನದಂಡಗಳನ್ನು ಪಾಲಿಸುತ್ತಾರೆ. ಹಾಗಾಗಿ ‘ಖೈದಿ ನಂಬರ್​ 6106’ ಟೈಟಲ್​ಗೆ ಅನುಮತಿ ನೀಡಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ, ಈ ಹಂತದಲ್ಲಿ ಈ ಟೈಟಲ್​ ನೀಡಲು ಸಾಧ್ಯವಿಲ್ಲ ಎಂದು ವಾಣಿಜ್ಯ ಮಂಡಳಿ ಹೇಳಿದೆ.

‘ಖೈದಿ ನಂಬರ್​ 6106’ ಶೀರ್ಷಿಕೆ ಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ‘ಭದ್ರಾವತಿ ಮೂವೀ ಮೇಕರ್ಸ್​’ ಸಂಸ್ಥೆಯು ಅರ್ಜಿ ಸಲ್ಲಿಸಿರುವ ಫೋಟೋ ಲಭ್ಯವಾಗಿದೆ. ನಿರ್ಮಾಪಕರ ಬೇಡಿಕೆಯನ್ನು ‘ಶೀರ್ಷಿಕೆ ಸಮಿತಿ’ಯಲ್ಲಿ ಪರಿಶೀಲಿಸಲಾಗಿದೆ. ಲಭ್ಯವಾಗಿರುವ ಫೋಟೋದಲ್ಲಿ ‘ಸದ್ಯಕ್ಕೆ ಪೆಂಡಿಂಗ್​ ಇಡಲಾಗಿದೆ’ ಎಂದು ನಮೂದಿಸಲಾಗಿದೆ.

ಇದನ್ನೂ ಓದಿ: ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ

ಇತ್ತೀಚೆಗೆ ಕೆಲವು ಅಭಿಮಾನಿಗಳ ತಮ್ಮ ವಾಹನ ಮೇಲೆ ‘ಖೈದಿ ನಂಬರ್​ 6106’ ಎಂದು ಸ್ಟಿಕ್ಕರ್ ಅಂಟಿಸಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ಇನ್ಮುಂದೆ ಇದು ತಮ್ಮ ಲಕ್ಕಿ ನಂಬರ್​ ಎಂದು ಕೂಡ ಅಂಥವರು ಹೇಳುತ್ತಿದ್ದಾರೆ. ಹೊಸ ವಾಹನಗಳ ನೋಂದಣಿಗೆ ಈ ನಂಬರ್​ ಬೇಕು ಎಂದು ದರ್ಶನ್​ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ ಎಂಬ ಮಾಹಿತಿ ಕೂಡ ಕೇಳಿಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Wed, 26 June 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ