AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಆಗುತ್ತಾ ದರ್ಶನ್ ತೂಗುದೀಪ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್​, ಪವಿತ್ರಾ ಹಾಗೂ ಅವರ ಸಹಚರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ ಅವರಿಗೆ 6106 ನಂಬರ್​ ಕೊಡಲಾಗಿದೆ. ಇದನ್ನೇ ಹೊಸ ಸಿನಿಮಾಗೆ ಶೀರ್ಷಿಕೆಯಾಗಿಸಲು ‘ಭದ್ರಾವತಿ ಮೂವೀ ಮೇಕರ್ಸ್’ ನಿರ್ಮಾಪಕರು ಬೇಡಿಕೆ ಇಟ್ಟಿದ್ದಾರೆ. ಆದರೆ ಈ ಕೇಸ್​ ಈಗ ತನಿಖೆ ಹಂತದಲ್ಲಿ ಇರುವುದರಿಂದ ಅದಕ್ಕೆ ಸಂಬಂಧಿಸಿದ ಟೈಟಲ್​ಗಳನ್ನು ನೀಡದಿರಲು ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.

ಸಿನಿಮಾ ಆಗುತ್ತಾ ದರ್ಶನ್ ತೂಗುದೀಪ ‘ಖೈದಿ ನಂಬರ್​ 6106’? ಶೀರ್ಷಿಕೆಗೆ ನಿರ್ಮಾಪಕರಿಂದ ಬೇಡಿಕೆ
ದರ್ಶನ್​
Mangala RR
| Edited By: |

Updated on:Jun 27, 2024 | 10:57 AM

Share

ನಟ ದರ್ಶನ್​ (Darshan) ಬಗ್ಗೆ ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಸದ್ಯ ದರ್ಶನ್ ತೂಗುದೀಪ ಗೆ ಕಷ್ಟ ಕಾಲ ಎದುರಾಗಿದೆ. ಕೊಲೆ ಕೇಸ್​ನಲ್ಲಿ ಆರೋಪಿ ಆಗಿರುವ ಅವರು ಪರಪ್ಪನ ಅಗ್ರಹಾರ ಸೇರಿಕೊಂಡಿದ್ದಾರೆ. ಜೈಲು ವಾಸದಲ್ಲಿ ಇರುವ ಅವರನ್ನು ನೋಡಲು ಆಪ್ತರು ಆಗಮಿಸುತ್ತಿದ್ದಾರೆ. ಹೀಗಿರುವಾಗ, ದರ್ಶನ್​ ಕೇಸ್​ಗೆ ಸಂಬಂಧಿಸಿದ ವಿಷಯಗಳನ್ನೇ ಇಟ್ಟುಕೊಂಡು ಸಿನಿಮಾ (Kannada Cinema) ಟೈಟಲ್​ ನೋಂದಣಿ ಮಾಡಿಸಲು ಕೆಲವರು ಆಸಕ್ತಿ ತೋರಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ‘ಡಿ ಗ್ಯಾಂಗ್​’ ಎಂಬ ಶೀರ್ಷಿಕೆಗೆ ಬೇಡಿಕೆ ಬಂದಿತ್ತು. ಈಗ ದರ್ಶನ್​ ಅವರಿಗೆ ನೀಡಿದ ಖೈದಿ ನಂಬರ್​ (Darshan Jail Number) ಕೂಡ ಬೇಡಿಕೆಯಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ 6106 ನಂಬರ್​ ನೀಡಲಾಗಿದೆ. ಇದೇ ನಂಬರ್​ನಲ್ಲಿ ಶೀರ್ಷಿಕೆ ಇಟ್ಟುಕೊಂಡು ಸಿನಿಮಾ ಮಾಡಲು ಕೆಲವರು ಮುಂದಾಗಿದ್ದಾರೆ. ಯಾವುದೇ ಸಿನಿಮಾ ಆಗಬೇಕು ಎಂದರೆ ಅದರ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈಗ ‘ಖೈದಿ ನಂಬರ್​ 6106’ ಟೈಟಲ್​ಗೆ ಬೇಡಿಕೆ ಬಂದಿದೆ.

ಚಿತ್ರತಂಡಕ್ಕೆ ಶೀರ್ಷಿಕೆ ಬಳಸಲು ಅನುಮತಿ ನೀಡುವುದಕ್ಕೂ ಮುನ್ನ ವಾಣಿಜ್ಯ ಮಂಡಳಿಯವರು ಕೆಲವು ಮಾನದಂಡಗಳನ್ನು ಪಾಲಿಸುತ್ತಾರೆ. ಹಾಗಾಗಿ ‘ಖೈದಿ ನಂಬರ್​ 6106’ ಟೈಟಲ್​ಗೆ ಅನುಮತಿ ನೀಡಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ, ಈ ಹಂತದಲ್ಲಿ ಈ ಟೈಟಲ್​ ನೀಡಲು ಸಾಧ್ಯವಿಲ್ಲ ಎಂದು ವಾಣಿಜ್ಯ ಮಂಡಳಿ ಹೇಳಿದೆ.

‘ಖೈದಿ ನಂಬರ್​ 6106’ ಶೀರ್ಷಿಕೆ ಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ‘ಭದ್ರಾವತಿ ಮೂವೀ ಮೇಕರ್ಸ್​’ ಸಂಸ್ಥೆಯು ಅರ್ಜಿ ಸಲ್ಲಿಸಿರುವ ಫೋಟೋ ಲಭ್ಯವಾಗಿದೆ. ನಿರ್ಮಾಪಕರ ಬೇಡಿಕೆಯನ್ನು ‘ಶೀರ್ಷಿಕೆ ಸಮಿತಿ’ಯಲ್ಲಿ ಪರಿಶೀಲಿಸಲಾಗಿದೆ. ಲಭ್ಯವಾಗಿರುವ ಫೋಟೋದಲ್ಲಿ ‘ಸದ್ಯಕ್ಕೆ ಪೆಂಡಿಂಗ್​ ಇಡಲಾಗಿದೆ’ ಎಂದು ನಮೂದಿಸಲಾಗಿದೆ.

ಇದನ್ನೂ ಓದಿ: ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ

ಇತ್ತೀಚೆಗೆ ಕೆಲವು ಅಭಿಮಾನಿಗಳ ತಮ್ಮ ವಾಹನ ಮೇಲೆ ‘ಖೈದಿ ನಂಬರ್​ 6106’ ಎಂದು ಸ್ಟಿಕ್ಕರ್ ಅಂಟಿಸಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ಇನ್ಮುಂದೆ ಇದು ತಮ್ಮ ಲಕ್ಕಿ ನಂಬರ್​ ಎಂದು ಕೂಡ ಅಂಥವರು ಹೇಳುತ್ತಿದ್ದಾರೆ. ಹೊಸ ವಾಹನಗಳ ನೋಂದಣಿಗೆ ಈ ನಂಬರ್​ ಬೇಕು ಎಂದು ದರ್ಶನ್​ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ ಎಂಬ ಮಾಹಿತಿ ಕೂಡ ಕೇಳಿಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Wed, 26 June 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ