AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ದೌರ್ಜನ್ಯ ತಡೆಗೆ ಸಮಿತಿ, ಫಿಲಂ ಚೇಂಬರ್​ನಲ್ಲಿ ಚರ್ಚಿಸಲು ನಿರ್ಧಾರ

ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಒಂದು ಸಮಿತಿ ಮಾಡಿ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗತ್ತಿರುವ ದೌರ್ಜನ್ಯ ತಡೆಯಬೇಕೆಂದು ನಟಿಯರು ಒತ್ತಾಯಿಸಿದ್ದು, ಈ ಬಗ್ಗೆ ಮೌನವಾಗಿದ್ದ ಫಿಲಂ ಚೇಂಬರ್, ಈಗ ಈ ಬಗ್ಗೆ ಸ್ಪಷ್ಟ ನಿರ್ಧಾರ ತಳೆಯುವ ಇಕ್ಕಟ್ಟಿಗೆ ಸಿಲುಕಿದೆ. ಇಂದು ಈ ಬಗ್ಗೆ ಚರ್ಚಿಸಲು ನಿರ್ಧರಿಸಿದೆ.

ಸ್ಯಾಂಡಲ್​ವುಡ್​ನಲ್ಲಿ ದೌರ್ಜನ್ಯ ತಡೆಗೆ ಸಮಿತಿ, ಫಿಲಂ ಚೇಂಬರ್​ನಲ್ಲಿ ಚರ್ಚಿಸಲು ನಿರ್ಧಾರ
ಫಿಲಂ ಚೇಂಬರ್
ಮಂಜುನಾಥ ಸಿ.
|

Updated on: Sep 06, 2024 | 10:34 AM

Share

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಹಾಗೂ ಇತರೆ ದೌರ್ಜನ್ಯಗಳನ್ನು ಗುರುತಿಸಿ ಅವುಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಬೇಕೆಂಬ ಒತ್ತಾಯ ಇತ್ತೀಚೆಗೆ ಕೇಳಿ ಬಂದಿದೆ. ನಟ ಚೇತನ್ ಅಹಿಂಸಾ ಹಾಗೂ ಇತರೆ ಕೆಲವು ನಟ-ನಟಿಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ಆಡಿದ್ದು, ಸಮಿತಿಯೊಂದರ ರಚನೆಗೆ ಒತ್ತಾಯಿಸಿದ್ದಾರೆ. ಮನವಿ ಪತ್ರಕ್ಕೆ ಕನ್ನಡ ಚಿತ್ರರಂಗದ ಸುಮಾರು 150ಕ್ಕೂ ಹೆಚ್ಚು ಕಲಾವಿದರು, ಪತ್ರಕರ್ತರು, ಬರಹಗಾರರು ಸಹಿ ಹಾಕಿದ್ದಾರೆ.

ಈ ಬಗ್ಗೆ ಫಿಲಂ ಚೇಂಬರ್ ಆಫ್ ಕಾಮರ್ಸ್​ ಯಾವುದೇ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ. ಚೇತನ್ ಯಾರು ಎಂದು ನನಗೆ ಗೊತ್ತಿಲ್ಲವೆಂದು ನಿನ್ನೆ ಅಧ್ಯಕ್ಷ ಎನ್​ಎಂ ಸುರೇಶ್ ಹೇಳಿದ್ದರು. ಆದರೆ ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹ ಈ ವಿಷಯವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದೆ. ಮಹಿಳಾ ಆಯೋಗದಿಂದ, ಫಿಲಂ ಚೇಂಬರ್​ಗೆ ಪತ್ರ ಬಂದಿರುವ ಕಾರಣ ಸಭೆಯನ್ನು ಕರೆಯಲು ಫಿಲಂ ಚೇಂಬರ್ ಮುಂದಾಗಿದೆ.

ಚಿತ್ರರಂಗದ ನಟಿಯರನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಸಭೆ ನಡೆಸಿ, ಸಮಿತಿ ರಚಿಸಲು ಒತ್ತಾಯಿಸುವಂತೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಸಭೆಯನ್ನು ಸೆಪ್ಟೆಂಬರ್ 13ರ ಒಳಗೆ ನಡೆಸುವಂತೆ ಮಹಿಳಾ ಆಯೋಗ ಸೂಚಿಸಿರುವ ಕಾರಣದಿಂದಾಗಿ ಇಂದು ಫಿಲಂ ಚೇಂಬರ್ ಪದಾಧಿಕಾರಿಗಳು ಸಭೆ ಕರೆದಿದ್ದು ಆಂತರಿಕ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ಇನ್ನು ಕೆಲವೇ ದಿನಗಳಲ್ಲಿ ನಟಿಯರನ್ನು ಕರೆದು ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ:‘ಆನಂದ್​ ಆಡಿಯೋ’ ಪಾಲಾದ ‘ಫೈರ್ ಫ್ಲೈ’ ಹಾಡುಗಳು; ಚರಣ್ ರಾಜ್​ಗೆ ಹೆಚ್ಚಿದ ಬೇಡಿಕೆ

ನಿನ್ನೆಯಷ್ಟೆ ಈ ಬಗ್ಗೆ ಮಾತನಾಡಿದ್ದ ಅಧ್ಯಕ್ಷ ಎನ್​ಎಂ ಸುರೇಶ್, ‘ನಮಗೆ ಯಾವುದೇ ದೌರ್ಜನ್ಯದ ದೂರು ಬಂದಿಲ್ಲ, ದೂರು ಬಂದರೆ ನಾವು ಪರಿಶೀಲನೆ ನಡೆಸುತ್ತೇವೆ’ ಎಂದಿದ್ದರು. ಅಲ್ಲದೆ ಸಮಿತಿ ರಚನೆಗೆ ಒತ್ತಾಯಿಸುವ ಪರ ಹೇಳಿಕೆ ನೀಡಿರಲಿಲ್ಲ. ಈಗ ಮಹಿಳಾ ಆಯೋಗದ ಸೂಚನೆಯಿಂದಾಗಿ ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ಇಕ್ಕಟ್ಟಿಗೆ ಫಿಲಂ ಚೇಂಬರ್ ಸಿಲುಕಿದಂತಿದೆ.

ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಾಗುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ಅಧ್ಯಯನಕ್ಕೆ ಹೇಮಾ ಸಮಿತಿ ರಚಿಸಿತ್ತು, ಈ ಸಮಿತಿ ನೀಡಿರುವ ವರದಿ ಚಿತ್ರರಂಗದಲ್ಲಿ ಅಲ್ಲೋಕ ಕಲ್ಲೋಲ ಎಬ್ಬಿಸಿದೆ. ಕೆಲವು ಹೆಸರಾಂತ ನಟ, ನಿರ್ದೇಶಕರು, ನಿರ್ಮಾಪಕರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ದಾಖಲಾಗಿವೆ. ಈಗ ಇದೇ ಮಾದರಿಯ ಸಮಿತಿಯೊಂದನ್ನು ಕನ್ನಡ ಚಿತ್ರರಂಗದಲ್ಲಿಯೂ ರಚಿಸಬೇಕೆಂದು ಸ್ಥಳೀಯ ನಟ-ನಟಿಯರು ಒತ್ತಾಯಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?