AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದರ್ಜೆ ಫಿಲಂ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಭರವಸೆ, ಬಜೆಟ್ ಎಷ್ಟು?

CM Siddaramaiah: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋವ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣದ ಬಗ್ಗೆ ಮತ್ತೊಮ್ಮೆ ಭರವಸೆ ನೀಡಿದರು. ಮಾತ್ರವಲ್ಲದೆ ಸಿನಿಮಾ ರಂಗದವರಿಗೆ ಕೆಲವು ಸಲಹೆಗಳನ್ನು ಸಹ ಸಿಎಂ ನೀಡಿದರು. ಡಿಸಿಎಂ ಡಿಕೆ ಶಿವಕುಮಾರ್ ಸಹ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದರು.

ವಿಶ್ವದರ್ಜೆ ಫಿಲಂ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಭರವಸೆ, ಬಜೆಟ್ ಎಷ್ಟು?
Cm Siddaramaiah
ಮಂಜುನಾಥ ಸಿ.
|

Updated on: Mar 02, 2025 | 7:35 AM

Share

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರ ಉತ್ಸವ ಉದ್ಘಾಟನೆಯನ್ನು ಸಿದ್ದರಾಮಯ್ಯ ನಿನ್ನೆ (ಮಾರ್ಚ್ 01) ಸಂಜೆ ನೆರವೇರಿಸಿದರು. ವಿಧಾನಸೌಧದ ಮುಂದೆ ನಡೆದ ಅದ್ಧೂರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫಿಲಂ ಸಿಟಿ ನಿರ್ಮಾಣ ಮಾಡಿಕೊಡುವ ಭರವಸೆಯನ್ನು ಮತ್ತೊಮ್ಮೆ ನೀಡಿದರು. ಅದು ಮಾತ್ರವೇ ಅಲ್ಲದೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದರು.

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ಗುರುತಿಸಿ, ನಿಯೋಜಿಸಲಾಗಿದೆ. ಫಿಲಂ ಸಿಟಿ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೂ ಸಹ ಮೀಸಲಿಡಲಾಗಿದೆ’ ಎಂದರು ಸಿಎಂ ಸಿದ್ದರಾಮಯ್ಯ, ಬಳಿಕ ‘ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು’ ಎಂದರು.

‘ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು’ ಎಂದರು.

ಇದನ್ನೂ ಓದಿ:‘ನಿಮ್ಮ ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್

ಹಳೆಯ ಸಿನಿಮಾಗಳನ್ನು ನೆನಪು ಮಾಡಿಕೊಂಡ ಸಿದ್ದರಾಮಯ್ಯ, ‘ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು, ಈಗ ಮತ್ತೊಮ್ಮೆ ಸಿನಿಮಾಗಳಲ್ಲಿ ಮೌಲ್ಯಗಳನ್ನು ತರಬೇಕಿದೆ’ ಎಂದರು.

‘ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು. ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ’ ಎಂದು ಸಲಹೆ ನೀಡಿದರು.

‘ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ’ ಎಂದು ಸಿದ್ದರಾಮಯ್ಯ ಹಾರೈಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?