AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ಫಿಲಂ ಚೇಂಬರ್​ಗೆ ತಿರುಗೇಟು ನೀಡಿದ ಇಂದ್ರಜಿತ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಮಾಡಿ ಧ್ವನಿ ಎತ್ತಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ನಶೆಯ ವಿಚಾರಕ್ಕೆ ಸಂಬಂಧಿಸಿ ಮಾದಕ ಲೋಕದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ನನ್ನ ಹೇಳಿಕೆಗಳಿಗೆ ನಾನು ಬದ್ಧನಾಗಿದ್ದೇನೆ. ಸಿಸಿಬಿಗೆ ಏನು ದಾಖಲೆ ನೀಡಿದ್ದೇನೆಂದು ನನ್ನನ್ನು ಕೇಳಬೇಡಿ. ಸಿಸಿಬಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ. ಆದ್ರೆ ನಾನು ಏನು ದಾಖಲೆ ಕೊಟ್ಟಿದ್ದೇನೆಂಬುದರ ಬಗ್ಗೆ ಹೇಳಲ್ಲ. ನನಗೆ ಗೊತ್ತಿರುವ ಮಾಹಿತಿಯನ್ನು ಸಿಸಿಬಿಗೆ ಹೇಳಿದ್ದೇನೆ. ನನ್ನ ಬ್ಯಾಗ್‌ನಲ್ಲಿ ಹಾರ್ಡ್‌ಡಿಸ್ಕ್, ಐಪ್ಯಾಡ್ ಮಾತ್ರ […]

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ಫಿಲಂ ಚೇಂಬರ್​ಗೆ ತಿರುಗೇಟು ನೀಡಿದ ಇಂದ್ರಜಿತ್
ಆಯೇಷಾ ಬಾನು
| Edited By: |

Updated on:Sep 03, 2020 | 11:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಮಾಡಿ ಧ್ವನಿ ಎತ್ತಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ನಶೆಯ ವಿಚಾರಕ್ಕೆ ಸಂಬಂಧಿಸಿ ಮಾದಕ ಲೋಕದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ.

ನನ್ನ ಹೇಳಿಕೆಗಳಿಗೆ ನಾನು ಬದ್ಧನಾಗಿದ್ದೇನೆ. ಸಿಸಿಬಿಗೆ ಏನು ದಾಖಲೆ ನೀಡಿದ್ದೇನೆಂದು ನನ್ನನ್ನು ಕೇಳಬೇಡಿ. ಸಿಸಿಬಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ. ಆದ್ರೆ ನಾನು ಏನು ದಾಖಲೆ ಕೊಟ್ಟಿದ್ದೇನೆಂಬುದರ ಬಗ್ಗೆ ಹೇಳಲ್ಲ. ನನಗೆ ಗೊತ್ತಿರುವ ಮಾಹಿತಿಯನ್ನು ಸಿಸಿಬಿಗೆ ಹೇಳಿದ್ದೇನೆ. ನನ್ನ ಬ್ಯಾಗ್‌ನಲ್ಲಿ ಹಾರ್ಡ್‌ಡಿಸ್ಕ್, ಐಪ್ಯಾಡ್ ಮಾತ್ರ ಇದೆ.ಅದರೊಳಗೆ ಏನಿದೆ ಎಂಬುದನ್ನು ನಾನು ಹೇಳುವುದಿಲ್ಲ. ದಾಖಲೆ ನೀಡಿಲ್ಲ ಎಂದರೆ ಸಿಸಿಬಿಯವರನ್ನೇ ಕೇಳಬೇಕು ಎಂದಿದ್ದಾರೆ,

ಶೇಕಡಾ 95ರಷ್ಟು ಕನ್ನಡ ಚಿತ್ರರಂಗ ಕ್ಲೀನ್ ಆಗಿದೆ: ಆರೋಪಗಳು ಸುರಿ ಮಳೆ ಸುರಿಸಿದ್ದ ಇಂದ್ರಜಿತ್ ಶೇಕಡಾ 95ರಷ್ಟು ಕನ್ನಡ ಚಿತ್ರರಂಗ ಕ್ಲೀನ್ ಆಗಿದೆ. ಕೇವಲ ಶೇ.5ರಷ್ಟು ಕನ್ನಡ ಚಿತ್ರರಂಗದವರು ಜಾಲದಲ್ಲಿದ್ದಾರೆ ಎಂದಿದ್ದಾರೆ. ಅಲ್ಲದೆ ಈಗ ಬಂದಿರುವ 3ನೇ ಪೀಳಿಗೆಯ ಕೆಲವರು ಮಾತ್ರ ಇದರಲ್ಲಿ ಸಕ್ರಿಯರಾಗಿದ್ದಾರೆ. ಕಿಂಗ್‌ಪಿನ್ ಅನಿಕಾ 4 ಪುಟಗಳ ಹೇಳಿಕೆಯನ್ನು ನೀಡಿದ್ದಾರೆ. ಡ್ರಗ್ಸ್ ಜಾಲದಲ್ಲಿ ಭಾಗಿಯಾದವರ ಮಾಹಿತಿ ನೀಡಿದ್ದಾರೆ. ನಾನು ಕೂಡ ನನಗೆ ತಿಳಿದಿರುವ ಮಾಹಿತಿಯನ್ನು ನೀಡಿದ್ದೇನೆ. ನಾನು ಕೂಡ ಈಗ ಮುಂದೆ ಬರುತ್ತಿರಲಿಲ್ಲ. 3-4 ಪ್ರಕರಣಗಳು ಮರುಕಳಿಸಿದಾಗ ನಾನು ಮುಂದೆ ಬಂದೆ. ಕನ್ನಡ ಚಿತ್ರರಂಗದವರೇ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಮಾಡುವುದಕ್ಕೆ ಸಿಸಿಬಿಗೆ ಸಹಕಾರ ನೀಡಿದರೆ ಒಳ್ಳೆಯದು.

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ನಮ್ಮ ಫಿಲ್ಮ್ ಚೇಂಬರ್ ಕನ್ನಡ ಸಿನಿಮಾಗಳು, ನಿರ್ಮಾಪಕರು, ನಟರ ಬಗ್ಗೆ ಮಾತ್ರ ನೋಡಿಕೊಳ್ತಾರೆ. ಕ್ರೈಂ ಅಂತ ಬಂದಾಗ ಅವರ ವ್ಯಾಪ್ತಿಗೆ ಇದು ಬರುವುದಿಲ್ಲ ಎಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿ ವೇಳೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರಸ್ಥಾಪಿಸಿದ್ರು.

Published On - 11:10 am, Thu, 3 September 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ