AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ಫಿಲಂ ಚೇಂಬರ್​ಗೆ ತಿರುಗೇಟು ನೀಡಿದ ಇಂದ್ರಜಿತ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಮಾಡಿ ಧ್ವನಿ ಎತ್ತಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ನಶೆಯ ವಿಚಾರಕ್ಕೆ ಸಂಬಂಧಿಸಿ ಮಾದಕ ಲೋಕದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ನನ್ನ ಹೇಳಿಕೆಗಳಿಗೆ ನಾನು ಬದ್ಧನಾಗಿದ್ದೇನೆ. ಸಿಸಿಬಿಗೆ ಏನು ದಾಖಲೆ ನೀಡಿದ್ದೇನೆಂದು ನನ್ನನ್ನು ಕೇಳಬೇಡಿ. ಸಿಸಿಬಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ. ಆದ್ರೆ ನಾನು ಏನು ದಾಖಲೆ ಕೊಟ್ಟಿದ್ದೇನೆಂಬುದರ ಬಗ್ಗೆ ಹೇಳಲ್ಲ. ನನಗೆ ಗೊತ್ತಿರುವ ಮಾಹಿತಿಯನ್ನು ಸಿಸಿಬಿಗೆ ಹೇಳಿದ್ದೇನೆ. ನನ್ನ ಬ್ಯಾಗ್‌ನಲ್ಲಿ ಹಾರ್ಡ್‌ಡಿಸ್ಕ್, ಐಪ್ಯಾಡ್ ಮಾತ್ರ […]

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ಫಿಲಂ ಚೇಂಬರ್​ಗೆ ತಿರುಗೇಟು ನೀಡಿದ ಇಂದ್ರಜಿತ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Sep 03, 2020 | 11:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಮಾಡಿ ಧ್ವನಿ ಎತ್ತಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ನಶೆಯ ವಿಚಾರಕ್ಕೆ ಸಂಬಂಧಿಸಿ ಮಾದಕ ಲೋಕದ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ.

ನನ್ನ ಹೇಳಿಕೆಗಳಿಗೆ ನಾನು ಬದ್ಧನಾಗಿದ್ದೇನೆ. ಸಿಸಿಬಿಗೆ ಏನು ದಾಖಲೆ ನೀಡಿದ್ದೇನೆಂದು ನನ್ನನ್ನು ಕೇಳಬೇಡಿ. ಸಿಸಿಬಿ ವಿಚಾರಣೆಗೆ ನಾನು ಸಹಕಾರ ನೀಡುತ್ತೇನೆ. ಆದ್ರೆ ನಾನು ಏನು ದಾಖಲೆ ಕೊಟ್ಟಿದ್ದೇನೆಂಬುದರ ಬಗ್ಗೆ ಹೇಳಲ್ಲ. ನನಗೆ ಗೊತ್ತಿರುವ ಮಾಹಿತಿಯನ್ನು ಸಿಸಿಬಿಗೆ ಹೇಳಿದ್ದೇನೆ. ನನ್ನ ಬ್ಯಾಗ್‌ನಲ್ಲಿ ಹಾರ್ಡ್‌ಡಿಸ್ಕ್, ಐಪ್ಯಾಡ್ ಮಾತ್ರ ಇದೆ.ಅದರೊಳಗೆ ಏನಿದೆ ಎಂಬುದನ್ನು ನಾನು ಹೇಳುವುದಿಲ್ಲ. ದಾಖಲೆ ನೀಡಿಲ್ಲ ಎಂದರೆ ಸಿಸಿಬಿಯವರನ್ನೇ ಕೇಳಬೇಕು ಎಂದಿದ್ದಾರೆ,

ಶೇಕಡಾ 95ರಷ್ಟು ಕನ್ನಡ ಚಿತ್ರರಂಗ ಕ್ಲೀನ್ ಆಗಿದೆ: ಆರೋಪಗಳು ಸುರಿ ಮಳೆ ಸುರಿಸಿದ್ದ ಇಂದ್ರಜಿತ್ ಶೇಕಡಾ 95ರಷ್ಟು ಕನ್ನಡ ಚಿತ್ರರಂಗ ಕ್ಲೀನ್ ಆಗಿದೆ. ಕೇವಲ ಶೇ.5ರಷ್ಟು ಕನ್ನಡ ಚಿತ್ರರಂಗದವರು ಜಾಲದಲ್ಲಿದ್ದಾರೆ ಎಂದಿದ್ದಾರೆ. ಅಲ್ಲದೆ ಈಗ ಬಂದಿರುವ 3ನೇ ಪೀಳಿಗೆಯ ಕೆಲವರು ಮಾತ್ರ ಇದರಲ್ಲಿ ಸಕ್ರಿಯರಾಗಿದ್ದಾರೆ. ಕಿಂಗ್‌ಪಿನ್ ಅನಿಕಾ 4 ಪುಟಗಳ ಹೇಳಿಕೆಯನ್ನು ನೀಡಿದ್ದಾರೆ. ಡ್ರಗ್ಸ್ ಜಾಲದಲ್ಲಿ ಭಾಗಿಯಾದವರ ಮಾಹಿತಿ ನೀಡಿದ್ದಾರೆ. ನಾನು ಕೂಡ ನನಗೆ ತಿಳಿದಿರುವ ಮಾಹಿತಿಯನ್ನು ನೀಡಿದ್ದೇನೆ. ನಾನು ಕೂಡ ಈಗ ಮುಂದೆ ಬರುತ್ತಿರಲಿಲ್ಲ. 3-4 ಪ್ರಕರಣಗಳು ಮರುಕಳಿಸಿದಾಗ ನಾನು ಮುಂದೆ ಬಂದೆ. ಕನ್ನಡ ಚಿತ್ರರಂಗದವರೇ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಮಾಡುವುದಕ್ಕೆ ಸಿಸಿಬಿಗೆ ಸಹಕಾರ ನೀಡಿದರೆ ಒಳ್ಳೆಯದು.

ಕ್ರೈಂ ಪ್ರಕರಣಗಳು ಚೇಂಬರ್​ ವ್ಯಾಪ್ತಿಗೆ ಬರೋಲ್ಲ: ನಮ್ಮ ಫಿಲ್ಮ್ ಚೇಂಬರ್ ಕನ್ನಡ ಸಿನಿಮಾಗಳು, ನಿರ್ಮಾಪಕರು, ನಟರ ಬಗ್ಗೆ ಮಾತ್ರ ನೋಡಿಕೊಳ್ತಾರೆ. ಕ್ರೈಂ ಅಂತ ಬಂದಾಗ ಅವರ ವ್ಯಾಪ್ತಿಗೆ ಇದು ಬರುವುದಿಲ್ಲ ಎಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿ ವೇಳೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರಸ್ಥಾಪಿಸಿದ್ರು.

Published On - 11:10 am, Thu, 3 September 20

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ