Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್

Vismaya Gowda: ಸಿನಿಮಾ ನಿರ್ದೇಶಕಿ, ಮೋಟಿವೇಷನಲ್ ಸ್ಪೀಕರ್, ಮ್ಯಾನಿಫೆಸ್ಟೇಷನ್ ಕೋಚ್ ಎಂದೆಲ್ಲ ತಮ್ಮನ್ನು ತಾವು ಪರಿಚಯಿಸಿಕೊಂಡಿದ್ದ ವಿಸ್ಮಯ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಹಿಮಾನ್ವಿ ಎಂಬುವರು ನ್ಯಾಯಾಲಯದಲ್ಲಿ ದಾಖಲಿಸಿದ್ದ ಖಾಸಗಿ ದೂರಿನ ಮೇರೆಗೆ ನಟಿಯ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್
Vismaya Gowda
Follow us
ಮಂಜುನಾಥ ಸಿ.
|

Updated on:Mar 06, 2025 | 11:35 AM

ನಿರ್ದೇಶಕಿ, ಮೋಟಿವೇಷನಲ್ ಸ್ಪೀಕರ್, ಮ್ಯಾನಿಫೆಸ್ಟೇಷನ್ ಕೋಚ್, ಲೈಫ್ ಕೋಚ್ ಎಂದೆಲ್ಲ ತಮ್ಮನ್ನು ಪರಿಚಯಿಸಿಕೊಳ್ಳುವ ವಿಸ್ಮಯ ಗೌಡ (Vismaya Gowda) ವಿರುದ್ಧ ಎಫ್​ಐಆರ್ ದಾಖಲಾಗಿದೆ. ವಿಸ್ಮಯಾ ಗೌಡ ವಿರುದ್ಧ ಹಿಮಾನ್ವಿ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ₹6.5 ಲಕ್ಷ ಸಾಲ ಪಡೆದು ಹಿಂದಿರುಗಿಸದೇ ವಂಚನೆ (Cheating) ಮಾಡಿದ್ದಾರೆ, ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ವಿಸ್ಮಯ ವಿರುದ್ಧ ಎಫ್​ಐಆರ್ (FIR) ದಾಖಲಿಸುವಂತೆ ಆದೇಶಿಸಿದೆ. ಅದರಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿಸ್ಮಯ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ದೂರಿನ ಸಾರಾಂಶದಂತೆ, 2019 ರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಹಿಮಾನ್ವಿಗೆ, ವಿಸ್ಮಯ ಗೌಡ ಪರಿಚಯವಾಗಿದ್ದರು. ತಾನು ಸಿನಿಮಾ ನಿರ್ದೇಶಕಿ ಹಾಗೂ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂ ನಲ್ಲಿ ಲೈಫ್ ಕೋಚರ್ ಆಗಿರುವುದಾಗಿ ಹೇಳಿಕೊಂಡಿದ್ದರು. ಪಿರ್ಯಾದುದಾರರು ಈಕೆಯ ಬಗ್ಗೆ ತಿಳಿದುಕೊಂಡು ಆರೋಪಿತೆಯ ಬಳಿ ಕೆಲವು ಬಾರಿ ಮ್ಯಾನಿಫೆಸ್ಟೇಶನ್ ಕ್ಲಾಸಸ್ ತೆಗೆದುಕೊಂಡಿದ್ದು ಆರೋಪಿತೆ ಕೆಲವು ಬಾರಿ ನಮ್ಮ ಕ್ಲಿನಿಕ್ಕೆ ಭೇಟಿ ನೀಡುತ್ತಿದ್ದು ಫೆಬ್ರವರಿ 2024 ರಲ್ಲಿ ವಿಸ್ಮಯಗೌಡ, ಹಿಮಾನ್ವಿ ಮನೆಗೆ ಭೇಟಿ ನೀಡಿದಾಗ ತನಗೆ ಹಣಕಾಸಿನ ತೊಂದರೆ ಇದ್ದು ಹಣ ನೀಡುವಂತೆ ಕೇಳಿಕೊಂಡಿದ್ದರು. ಆಗ ಹಿಮಾನ್ವಿ ಆರೋಪಿತೆಗೆ ತಮ್ಮ ತಾಯಿಯ ಖಾತೆಯಿಂದ ಪಡೆದ 5,00,000 ರೂ ಹಣವನ್ನು ಮತ್ತು ತನ್ನ ಉಳಿತಾಯ ಖಾತೆಯಲ್ಲಿದ್ದ 1,50,000 ರೂಗಳನ್ನು ಸೇರಿ ಒಟ್ಟು 6,50,000 ರೂ ಗಳನ್ನು ನೀಡಿದ್ದರು. ಆ ನಂತರ ಆರೋಪಿತೆ ಶ್ರೀಮತಿ ವಿಸ್ಮಯಗೌಡ ರವರು ಪೋಸ್ಟ್ ಡೆಟೆಡ್ ಚೆಕ್ ನಂ-080118 ರ ಮೂಲಕ 6,50,000 ರೂ ಗಳನ್ನು ವಿಸ್ಮಯ ಗೌಡ, ಹಿಮಾನ್ವಿಗೆ ನೀಡಿದ್ದರು.

ಇದನ್ನೂ ಓದಿ:ಪ್ರೆಗ್ನೆಂಟ್ ಆದ ಬಳಿಕ ಮಹತ್ವದ ಸಿನಿಮಾದಿಂದ ಹೊರಬಿದ್ದ ಟಾಕ್ಸಿಕ್ ನಟಿ ಕಿಯಾರಾ?

ಇದನ್ನೂ ಓದಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಕನ್ನಡ ಸಿನಿಮಾ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪುಷ್ಪ ಚಿತ್ರದ ಸಂಗೀತ ಸಂಯೋಜಕ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಆದರೆ ಆ ಚೆಕ್, ಸಹಿ ಸರಿ ಇಲ್ಲ ಎಂಬ ಕಾರಣಕ್ಕೆ ಬ್ಯಾಂಕ್​ನಲ್ಲಿ ನಗದು ಆಗಿರಲಿಲ್ಲ. ಅದಾದ ಬಳಿಕ ಹಿಮಾನ್ವಿ, ವಿಸ್ಮಯ ಬಳಿ ಸಾಲ ಮರುಪಾವತಿ ಮಾಡುವಂತೆ ಕೇಳಿದಾಗ ವಿಸ್ಮಯ ಗೌಡ, ಅವಾಚ್ಯ ಶದ್ಬಗಳಿಂದ ನಿಂದಿಸಿ, ಬೆದರಿಕೆ ಹಾಕಿರುವುದಲ್ಲದೆ, ಬೇಕೆಂದೇ ಚೆಕ್​ಗೆ ತಪ್ಪಾಗಿ ಸಹಿ ಹಾಕಿರುವುದಾಗಿ ಹೇಳಿದ್ದಾರೆ. ಇದೀಗ ಹಿಮಾನ್ವಿ, ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದು, ನ್ಯಾಯಾಲಯದ ನಿರ್ದೇಶನದಂತೆ ಪೊಲೀಸರು ವಿಸ್ಮಯ ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ವಿಸ್ಮಯ ಗೌಡ, ಇನ್​ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದವರು. ಈ ಹಿಂದೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದರು. ‘ಡಿಯರ್ ಕಣ್ಮಣಿ’ ಸಿನಿಮಾ ಮಾಡಲು ಮುಂದಾಗಿದ್ದರು. ಕಿಶನ್ ಬೆಳಗಲಿ, ಸಾತ್ವಿಕಾ, ಪ್ರವೀಣ್ ಅವರನ್ನು ಹಾಕಿಕೊಂಡು ಸಿನಿಮಾ ಮಾಡಲು ಮುಂದಾಗಿದ್ದರು. ಸಿನಿಮಾದ ಮುಹೂರ್ತಕ್ಕೆ ನಟ ಕಿಚ್ಚ ಸುದೀಪ್ ಅತಿಥಿಯಾಗಿ ಆಗಮಿಸಿದ್ದರು. ಇನ್​ಸ್ಟಾಗ್ರಾಂನಲ್ಲಿ ತಮ್ಮ ಐಶಾರಾಮಿ ಜೀವನದ ಚಿತ್ರ, ವಿಡಿಯೋಗಳನ್ನು ಆಗಾಗ್ಗೆ ಅಪ್​ಲೋಡ್ ಮಾಡುತ್ತಲೇ ಇರುತ್ತಿದ್ದರು ವಿಸ್ಮಯ. ಜೊತೆಗೆ ಮ್ಯಾನಿಫೆಸ್ಟೇಷನ್ ಬಗ್ಗೆ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ವಂಚನೆ ಪ್ರಕರಣದ ಆರೋಪಿ ಆಗಿದ್ದಾರೆ.

ಇದೇ ಸಮಯದಲ್ಲಿ ಇನ್​ಸ್ಟಾಗ್ರಾಂ ನಲ್ಲಿ ಹಿಮಾನ್ವಿ ವಿರುದ್ಧ ಪೋಸ್ಟ್ ಹಂಚಿಕೊಂಡಿರುವ ವಿಸ್ಮಯ ಗೌಡ, ಹಿಮಾನ್ವಿ ಒಬ್ಬ ವಂಚಕಿ, ಆಕೆಯ ವಿರುದ್ಧ ನಾನು ಕೇಸು ದಾಖಲಿಸಿದ್ದೆ. ಕೇಸಿನಲ್ಲಿ ನನಗೆ ಜಯ ದೊರೆತಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಹಿಮಾನ್ವಿ ನಡೆಸುತ್ತಿದ್ದ ಕಾಸ್ಮೆಟಿಕ್ ಕ್ಲೀನಿಕ್ ವಿರುದ್ಧ ತಾವು ಕೇಸು ದಾಖಲಿಸಿದ್ದಾಗಿ ಹೇಳಿರುವ ವಿಸ್ಮಯ ಗೌಡ, ಇಲಾಖೆಯು ಹಿಮಾನ್ವಿಗೆ ನೊಟೀಸ್ ನೀಡಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Thu, 6 March 25

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್