AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಸಿನಿಮಾದ ನಿರ್ಮಾಣ ಸಂಸ್ಥೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು
ಮಂಜುನಾಥ ಸಿ.
|

Updated on: Nov 12, 2024 | 1:06 PM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕೆ ಕಾನೂನು ತೊಡಕು ಎದುರಾಗಿದೆ. ಬೆಂಗಳೂರಿನ ಎಚ್​ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಇತ್ತೀಚೆಗೆ ‘ಟಾಕ್ಸಿಕ್’ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ವಕೀಲರೊಬ್ಬರು ಮೊದಲಿಗೆ ಈ ಬಗ್ಗೆ ದೂರು ಸಲ್ಲಿಸಿದ್ದರು. ಇತ್ತೀಚೆಗೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಲ್ಲದೆ, ಎಚ್​ಎಂಟಿ ಕೆಲ ನಿಯಮಗಳನ್ನು ಮುರಿದಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದೀಗ ‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್​ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್​​ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್​ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಇದನ್ನೂ ಓದಿ:ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಬ್ಬರಿಸುತ್ತಾ ವಾದ ಮಾಡಿದ ಯಶ್

ಕಳೆದ ಕೆಲ ತಿಂಗಳಿಂದಲೂ ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣವಾಗಿರುವ ಜಾಗ ಮತ್ತು ಮರ ಕಡಿದಿರುವ ಕುರಿತು ವಿವಾದಗಳು ಚಾಲ್ತಿಯಲ್ಲಿವೆ. ಅರಣ್ಯ ಸಚಿವ ಈಶ್ವರ ಖಂಡ್ರೆಯವರು, ಎಚ್​ಎಂಟಿ ತನಗೆ ನೀಡಲಾಗಿದ್ದ ಜಾಗವನ್ನು ಸಿನಿಮಾಗಳಿಗೆ ಬಾಡಿಗೆ ನೀಡಿ ಹಣ ಮಾಡುತ್ತಿದೆ ಎಂದು ಆರೋಪಿಸಿತ್ತು. ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಿದ ಜಾಗದಲ್ಲಿ ಮುಂಚೆ ಇದ್ದ ಮರಗಳು ಆ ನಂತರ ನಾಶವಾದ ಮರಗಳ ಮಾಹಿತಿ ಒದಗಿಸುವ ಸ್ಯಾಟಲೈಟ್ ಚಿತ್ರವನ್ನು ಸಹ ಬಿಡುಗಡೆ ಮಾಡಲಾಗಿತ್ತು.

ಬಳಿಕ ಈ ಆರೋಪಗಳಿಗೆ ಸ್ಪಂದಿಸಿದ್ದ ಎಚ್​ಎಂಟಿ, ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಆಗಿರುವ ಸ್ಥಳ ನಮ್ಮದಲ್ಲ, ಅದು ಕೆನರಾ ಬ್ಯಾಂಕ್​ಗೆ ಸೇರಿದ್ದು, ಕೆನರಾ ಬ್ಯಾಂಕ್​ಗೆ ಸೇರಿದ ಸ್ಥಳವನ್ನು ನಾವು ಬಾಡಿಗೆಗೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದಿತ್ತು. ಚಿತ್ರತಂಡ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮರ ಕಡಿದಿರುವ ಆರೋಪಗಳನ್ನು ತಳ್ಳಿ ಹಾಕಿತ್ತು. ಈ ಎಲ್ಲ ಘಟನೆ ತುಸು ರಾಜಕೀಯ ಕೋನವನ್ನು ಸಹ ಪಡೆದುಕೊಂಡಿವೆ. ಈಗ ಎಫ್​ಐಆರ್ ಸಹ ದಾಖಲಾಗಿದ್ದು, ಚಿತ್ರದ ನಿರ್ಮಾಣ ಸಂಸ್ಥೆ ಏನು ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್