AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಸಿನಿಮಾದ ನಿರ್ಮಾಣ ಸಂಸ್ಥೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು
ಮಂಜುನಾಥ ಸಿ.
|

Updated on: Nov 12, 2024 | 1:06 PM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕೆ ಕಾನೂನು ತೊಡಕು ಎದುರಾಗಿದೆ. ಬೆಂಗಳೂರಿನ ಎಚ್​ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಇತ್ತೀಚೆಗೆ ‘ಟಾಕ್ಸಿಕ್’ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ವಕೀಲರೊಬ್ಬರು ಮೊದಲಿಗೆ ಈ ಬಗ್ಗೆ ದೂರು ಸಲ್ಲಿಸಿದ್ದರು. ಇತ್ತೀಚೆಗೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಲ್ಲದೆ, ಎಚ್​ಎಂಟಿ ಕೆಲ ನಿಯಮಗಳನ್ನು ಮುರಿದಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದೀಗ ‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್​ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್​​ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್​ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಇದನ್ನೂ ಓದಿ:ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಬ್ಬರಿಸುತ್ತಾ ವಾದ ಮಾಡಿದ ಯಶ್

ಕಳೆದ ಕೆಲ ತಿಂಗಳಿಂದಲೂ ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣವಾಗಿರುವ ಜಾಗ ಮತ್ತು ಮರ ಕಡಿದಿರುವ ಕುರಿತು ವಿವಾದಗಳು ಚಾಲ್ತಿಯಲ್ಲಿವೆ. ಅರಣ್ಯ ಸಚಿವ ಈಶ್ವರ ಖಂಡ್ರೆಯವರು, ಎಚ್​ಎಂಟಿ ತನಗೆ ನೀಡಲಾಗಿದ್ದ ಜಾಗವನ್ನು ಸಿನಿಮಾಗಳಿಗೆ ಬಾಡಿಗೆ ನೀಡಿ ಹಣ ಮಾಡುತ್ತಿದೆ ಎಂದು ಆರೋಪಿಸಿತ್ತು. ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಿದ ಜಾಗದಲ್ಲಿ ಮುಂಚೆ ಇದ್ದ ಮರಗಳು ಆ ನಂತರ ನಾಶವಾದ ಮರಗಳ ಮಾಹಿತಿ ಒದಗಿಸುವ ಸ್ಯಾಟಲೈಟ್ ಚಿತ್ರವನ್ನು ಸಹ ಬಿಡುಗಡೆ ಮಾಡಲಾಗಿತ್ತು.

ಬಳಿಕ ಈ ಆರೋಪಗಳಿಗೆ ಸ್ಪಂದಿಸಿದ್ದ ಎಚ್​ಎಂಟಿ, ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಆಗಿರುವ ಸ್ಥಳ ನಮ್ಮದಲ್ಲ, ಅದು ಕೆನರಾ ಬ್ಯಾಂಕ್​ಗೆ ಸೇರಿದ್ದು, ಕೆನರಾ ಬ್ಯಾಂಕ್​ಗೆ ಸೇರಿದ ಸ್ಥಳವನ್ನು ನಾವು ಬಾಡಿಗೆಗೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದಿತ್ತು. ಚಿತ್ರತಂಡ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮರ ಕಡಿದಿರುವ ಆರೋಪಗಳನ್ನು ತಳ್ಳಿ ಹಾಕಿತ್ತು. ಈ ಎಲ್ಲ ಘಟನೆ ತುಸು ರಾಜಕೀಯ ಕೋನವನ್ನು ಸಹ ಪಡೆದುಕೊಂಡಿವೆ. ಈಗ ಎಫ್​ಐಆರ್ ಸಹ ದಾಖಲಾಗಿದ್ದು, ಚಿತ್ರದ ನಿರ್ಮಾಣ ಸಂಸ್ಥೆ ಏನು ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!