AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanveer: ಅಭಿಮಾನಿ ಮೇಲೆ ಹಲ್ಲೆ ಆರೋಪ; ನಟ ಧನ್ವೀರ್ ವಿರುದ್ಧ ಎಫ್​ಐಆರ್​ ದಾಖಲು

ಸ್ಯಾಂಡಲ್​ವುಡ್ ನಟ ಧನ್ವೀರ್​ಗೆ ಸಂಕಷ್ಟ ಎದುರಾಗಿದೆ. ಅಭಿಮಾನಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಅವರ ಮೇಲೆ ಎಫ್​ಐಆರ್ ದಾಖಲಾಗಿದೆ.

Dhanveer: ಅಭಿಮಾನಿ ಮೇಲೆ ಹಲ್ಲೆ ಆರೋಪ; ನಟ ಧನ್ವೀರ್ ವಿರುದ್ಧ ಎಫ್​ಐಆರ್​ ದಾಖಲು
ಧನ್ವೀರ್​-ಚಂದ್ರಶೇಖರ್
TV9 Web
| Edited By: |

Updated on:Feb 19, 2022 | 9:19 AM

Share

ಬೆಂಗಳೂರು: ಸೆಲ್ಫಿ ವಿಚಾರಕ್ಕೆ ಅಭಿಮಾನಿಯನ್ನು ಹೊಡೆದ ಆರೋಪದ ಮೇಲೆ ನಟ ಧನ್ವೀರ್ (Dhanveer) ಹಾಗೂ ಸ್ನೇಹಿತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಭಿಮಾನಿ ಚಂದ್ರಶೇಖರ್‌ಗೆ ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದರ ಆಧಾರದಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಫೆಬ್ರವರಿ 18ರ ಶುಕ್ರವಾರ ಧನ್ವೀರ್ ಅವರ ‘ಬೈ ಟೂ ಲವ್’ (By Two Love) ಚಿತ್ರ ತೆರೆಗೆ ಬಂದಿತ್ತು. ಇದರ ಸಂತಸದಲ್ಲಿದ್ದ ನಟನ ವಿರುದ್ಧ ಈಗ ಎಫ್​ಐಆರ್ ದಾಖಲಾಗಿದೆ. ಪ್ರಕರಣದ ಕುರಿತು ಧನ್ವೀರ್ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ. ಮೊನ್ನೆ ರಾತ್ರಿ (ಫೆಬ್ರವರಿ 17) ಅನುಪಮ ಠಾಕಿಸ್ ಬಳಿ‌ ಘಟನೆ ನಡೆದಿತ್ತು. ಅನುಪಮ ಚಿತ್ರಮಂದಿರದ ಬಳಿ ಚಂದ್ರಶೇಖರ್ ಮತ್ತು ಸ್ನೇಹಿತರು ತೆರಳಿದ್ದರು. ಧನ್ವೀರ್ ಅವರನ್ನು ನೋಡುತ್ತಿದ್ದಂತೆ ಚಂದ್ರಶೇಖರ್ ಸ್ನೇಹಿತ ಸೆಲ್ಫಿ ಕೇಳಲು ಹೋಗಿದ್ದರು. ಸ್ನೇಹಿತನಿಗೆ ಚಂದ್ರಶೇಖರ್, ‘ಊರಿಗೆ ಹೋಗಲು ತಡವಾಗುತ್ತದೆ, ಬೆಳಗ್ಗೆ ಫೋಟೊ ತೆಗೆಸಿಕೊಳ್ಳುವಂತೆ ಬಾ’ ಎಂದು ಹೇಳಿದ್ದರು. ಆಗ ಧನ್ವೀರ್ ಚಂದ್ರಶೇಖರ್​ಗೆ ‘ನೀವು ಕನ್ನಡ ಬೆಳೆಸುವುದಿಲ್ಲ’ ಎಂದು ಹೇಳಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸದ್ಯ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚಂದ್ರಶೇಖರ್ ತೆರಳಿದ್ದಾರೆ.

ಈ ವಾರ ತೆರೆಕಂಡಿದ್ದ ‘ಬೈ ಟೂ ಲವ್’:

ನಟ ಧನ್ವೀರ್ ಮತ್ತು ಶ್ರೀಲೀಲಾ ‘ಬೈ ಟೂ ಲವ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಪ್ರೀತಿ-ಪ್ರೇಮದ ಕಥೆ ಸಿನಿಮಾದ ಹೈಲೈಟ್​ ಎಂಬುದಕ್ಕೆ ಟ್ರೇಲರ್​ ಸಾಕ್ಷಿ ಒದಗಿಸಿದೆ. ‘ಬಜಾರ್​’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟವರು ಧನ್ವೀರ್. ‘ಕಿಸ್​’ ಚಿತ್ರದ ಮೂಲಕ ಶ್ರೀಲೀಲಾ ಬೇಡಿಕೆ ಹೆಚ್ಚಿಸಿಕೊಂಡರು. ಇಬ್ಬರೂ ‘ಬೈ ಟೂ ಲವ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಹರಿ ಸಂತೋಷ್​ ನಿರ್ದೇಶನವಿದೆ. ಸಾಧು ಕೋಕಿಲ, ರಂಗಾಯಣ ರಘು, ಅಚ್ಯುತ್​ ಕುಮಾರ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

ಅಭಿಮಾನಿ ಮೇಲೆ ಹಲ್ಲೆ ಆರೋಪ; ನಟ ಧನ್ವೀರ್ ವಿರುದ್ಧ ದೂರು ದಾಖಲು  

Actor Rajesh: 150ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ರಾಜೇಶ್; ಅಪರೂಪದ ಫೋಟೋಗಳು ಇಲ್ಲಿವೆ

Published On - 9:09 am, Sat, 19 February 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!