ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ […]

ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ
ಸಾಧು ಶ್ರೀನಾಥ್​

Updated on: Mar 02, 2020 | 10:28 AM

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ ಮತ್ತೆ ನಗ್ನ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡೋದಾಗಿ ಹೇಳಿ ಗೋವಾಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನಿರ್ಮಾಪಕನ ವಿರುದ್ಧ ಕಿರುತೆರೆ ನಟಿ ಆರೋಪಿಸಿದ್ದಾರೆ.

ಅಲ್ಲದೆ ಮದುವೆಯಾಗುವುದಾಗಿ ಭರವಸೆ ನೀಡಿ ನಿರಂತರವಾಗಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿಗೆ ಈಗಾಗ್ಲೇ ಮದುವೆಯಾಗಿದ್ದು, ಮಕ್ಕಳಿದ್ದನ್ನ ಪ್ರಶ್ನಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿರೋ ಆರೋಪ ಕೇಳಿ ಬಂದಿದೆ. ರಾಜಿ ಮಾಡೋದಾಗಿ ಕರೆಸಿದ ಸಂಗಮೇಶ್ ಪತ್ನಿ ತನ್ನ ವಿರುದ್ದವೇ ಸ್ಥಳೀಯ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿರೋದಾಗಿ ದೂರಿನಲ್ಲಿ ಯುವತಿ ಮಾಹಿತಿ ನೀಡಿದ್ದಾರೆ. ವಂಚನೆ ಮತ್ತು ಬ್ಲಾಕ್ ಮೇಲ್ ಮಾಡ್ತಿದ್ದ ನಿರ್ಮಾಪಕನ ವಿರುದ್ದ ಸಂತ್ರಸ್ಥೆ ಕಿರುತೆರೆ ನಟಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದ ಸೂಚನೆ ಹಿನ್ನಲೆ ಅಮೃತಹಳ್ಳಿ ಪೊಲೀಸ್ರು ಎಫ್​ಐಆರ್ ದಾಖಲಿಸಿದ್ದಾರೆ.

Published On - 9:02 am, Mon, 2 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us