AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾಗೆ ವಂಚನೆ ಪ್ರಕರಣ; ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್​ಐಆರ್​ ದಾಖಲು

Sanjjana Galrani: ಸ್ಯಾಂಡಲ್​ವುಡ್ ನಟಿ ಸಂಜನಾ ಗಲ್ರಾನಿಗೆ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಹುಲ್ ತೋನ್ಸೆ ಸೇರಿ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ನಟಿ ಸಂಜನಾಗೆ ವಂಚನೆ ಪ್ರಕರಣ; ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್​ಐಆರ್​ ದಾಖಲು
ಸಂಜನಾ ಗಲ್ರಾನಿ, ರಾಹುಲ್ ಥೋನ್ಸೆ
TV9 Web
| Edited By: |

Updated on:Oct 20, 2021 | 9:21 AM

Share

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿಗೆ ವಂಚನೆ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ರಾಹುಲ್ ಥೋನ್ಸೆ ಸೇರಿದಂತೆ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಸಂಜನಾ ಈ ಕುರಿತು ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದರು. ಅದರಲ್ಲಿ ಅವರು ‘ತಾವು ಕೊಟ್ಟ ಹಣ ಬಳಸಿಕೊಂಡು ಲಾಭ ಗಳಿಸಿದ್ದಾರೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಹಣ ತೊಡಗಿಸಿದ್ದಾರೆ. ಇದರಿಂದ ತನ್ನ ಘನತೆಗೆ ಧಕ್ಕೆ ಬರುವಂತಾಗಿದೆ. ಇದಲ್ಲದೇ ರಾಹುಲ್ ಥೋನ್ಸೆ ಸುಳ್ಳು ಆರೋಪ ಮಾಡಿದ್ದಾರೆ. ಆದ್ದರಿಂದ ರಾಹುಲ್ ವಿರುದ್ಧ ದೂರು ದಾಖಲಿಸಬೇಕು’ ಎಂದು ಸಂಜನಾ ಮನವಿ ಮಾಡಿದ್ದರು.

ಸಂಜನಾ ದಾಖಲಿಸಿದ್ದ ಪಿಸಿಆರ್ ಅನ್ನು ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ನ್ಯಾಯಾಲಯ ತನಿಖೆಗೆ ಆದೇಶ ನೀಡಿತ್ತು. ಕೋರ್ಟ್ ಆದೇಶದಂತೆ ಇಂದಿರಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪ್ರಸ್ತುತ ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜನಾ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ, ರಾಹುಲ್ ಥೋನ್ಸೆ ಸೇರಿ ಮೂವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ, 107, 354, 406, 420, 506, ಕಲಂ 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ  ಆರಂಭಿಸಿದ್ದಾರೆ.

ಸಂಜನಾ ಆರೋಪವೇನು? ಗೋವಾ ಮತ್ತು ಕೊಲಂಬೊದಲ್ಲಿ ತಾನು ಕ್ಯಾಸಿನೊಗಳ ಮ್ಯಾನೇಜಿಂಗ್ ಡೈರೆಕ್ಟರ್. ಅವುಗಳಲ್ಲಿ ಹಣ ವಿನಿಯೋಗಿಸಿದರೆ ಹೆಚ್ಚಿನ ಲಾಭಗಳಿಸಬಹುದು ಎಂದು ರಾಹುಲ್ ಥೋನ್ಸೆ ಸಂಜನಾಗೆ ಆಮಿಷ ಒಡ್ಡಿದ್ದರಂತೆ. ಇದರಂತೆ ಕಳೆದ ಮೂರು ವರ್ಷಗಳಿಂದ ಥೋನ್ಸೆ ಸೇರಿದಂತೆ ಮೂವರ ಬ್ಯಾಂಕ್ ಖಾತೆಗಳಿಗೆ ನಟಿ ಸಂಜನಾ ಹಣ ಹಾಕಿದ್ದರು. ಬಳಿಕ ಯಾವುದೇ ಲಾಭಾಂಶ ನೀಡದೆ, ಹಣ ವಾಪಸ್ ಕೇಳಿದರೂ ಹಿಂದಿರುಗಿಸಿಲ್ಲ. ಜೊತೆಗೆ ತಾವು ಕೊಟ್ಟ ಹಣವನ್ನು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ ಲಾಭ ಗಳಿಸಿರುವುದಲ್ಲದೇ, ತಮ್ಮ ಘನತೆಗೆ ಧಕ್ಕೆ ತರುವಂತೆ ಸುಳ್ಳು ಆರೋಪಗಳನ್ನ ಮಾಡಿದ್ದಾರೆ ಎಂದು ಸಂಜನಾ ನ್ಯಾಯಾಲಯದಲ್ಲಿ ಪಿಸಿಆರ್ ದಾಖಲಿಸಿದ್ದರು.

ಇದನ್ನೂ ಓದಿ:

‘ಟಿಕ್​ಟಾಕ್ ಬ್ಯಾನ್ ಆದಾಗ ಇದ್ದ ಒಂದು ಕೆಲಸವೂ ಹೋಯ್ತು’- ಕಷ್ಟದ ಕತೆ ತೆರೆದಿಟ್ಟ ಖ್ಯಾತ ನಟ; ಮುಂದೇನಾಯ್ತು? 

ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್​

Published On - 8:58 am, Wed, 20 October 21

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್