AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್ ರೋಣ’ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್

ಅನೀಶ್ ನಟನೆ ಮಾಡಿದ್ದ ‘ಮಾಯಾನಗರಿ’ ಚಿತ್ರದ ಸಂಬಂಧ ಕೇಸ್ ದಾಖಲಾಗಿದೆ. ಈ ಚಿತ್ರಕ್ಕೆ ಸಿದ್ದೇಶ್ ಎಂಬುವವರು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ನೇಮಕ ಮಾಡಲಾಗಿತ್ತು. ಈ ಚಿತ್ರದ ನಿರ್ಮಾಪಕ ಶಿವಶಂಕರ್​ಗೆ ಜಾಕ್ ಮಂಜುನ ಪರಿಚಯ ಮಾಡಿದ್ದು ಇದೇ ಸಿದ್ದೇಶ್.

‘ವಿಕ್ರಾಂತ್ ರೋಣ’ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್
ಜಾಕ್ ಮಂಜು
ಜಗದೀಶ ಬಿ.
| Edited By: |

Updated on:Aug 18, 2024 | 2:18 PM

Share

‘ವಿಕ್ರಾಂತ್ ರೋಣ’, ‘ಡೆಡ್ಲಿ ಸೋಮ’ ನಿರ್ಮಾಪಕನ ಜಾಕ್ ಮಂಜು ವಿರುದ್ಧ ಬೆಂಗಳೂರಿನ ಉಪ್ಪಾರ್​ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕೊರ್ಟ್​ನ ಪಿಸಿಆರ್ ಆಧರಿಸಿ ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಕನ್ನಡದ ಮತ್ತೋರ್ವ ನಿರ್ಮಾಪಕ ಶಿವಶಂಕರ್ ಎಂಬುವವರು ಮಂಜು ವಿರುದ್ಧ ದೂರು ದಾಖಲು ಮಾಡಿದ್ದರು. ಮೋಸ ಮಾಡಿದ ಆರೋಪ ಜಾಕ್ ಮಂಜು ವಿರುದ್ಧ ಕೇಳಿ ಬಂದಿದೆ. ಜಾಕ್ ಮಂಜು ಜೊತೆ ಸಿದ್ದೇಶ್, ಮುರುಳಿ ಎಂಬುವವರ ವಿರುದ್ಧವೂ ಎಫ್​ಐಆರ್ ದಾಖಲಾಗಿದೆ.

ಅನೀಶ್ ನಟನೆ ಮಾಡಿದ್ದ ‘ಮಾಯಾನಗರಿ’ ಚಿತ್ರದ ಸಂಬಂಧ ಕೇಸ್ ದಾಖಲಾಗಿದೆ. ಈ ಚಿತ್ರಕ್ಕೆ ಸಿದ್ದೇಶ್ ಎಂಬುವವರು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ನೇಮಕ ಮಾಡಲಾಗಿತ್ತು. ಅವರು ಈ ಚಿತ್ರಕ್ಕೆ 8 ಲಕ್ಷ ರೂಪಾಯಿ ಬಂಡವಾಳ ಹೂಡಿದ್ದರು. ಚಿತ್ರೀಕರಣಕ್ಕೆ ಹಣ ಒದಗಿಸಿಕೊಡು ಎಂದು ನಿರ್ಮಾಪಕ ಶಿವಶಂಕರ್‌ ಅವರು ಸಿದ್ದೇಶ ಬಳಿ ಕೇಳಿಕೊಂಡಿದ್ದರು. ಈ ವೇಳೆ ‘ಶಾಲಿನಿ ಆರ್ಟ್ಸ್​​’ನ ಮೇಲ್ವಿಚಾರಕ ಮುರುಳಿ ಎಂಬುವವರನ್ನು ಶಿವಶಂಕರ್​ಗೆ ಸಿದ್ದೇಶ್ ಭೇಟಿ ಮಾಡಿಸಿದರು. ಸಿನಿಮಾ ನೋಡಿದ ಬಳಿಕ ಹಣ ಕೊಡಿಸುವುದಾಗಿ ಅವರು ಭರವಸೆ ನೀಡಿದ್ದರು.

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಅಪಪ್ರಚಾರ; ಗರಂ ಆದ ಜಾಕ್ ಮಂಜು

ಆ ಬಳಿಕ ‘ಶಾಲಿನಿ ಆರ್ಟ್ಸ್​​’ನ ಮಾಲೀಕ ಜಾಕ್ ಮಂಜುವಿನ ಪರಿಚಯ ಕೂಡ ಶಿವಶಂಕರ್​ಗೆ ಬೆಳೆಯಿತು. ಮೂರ್ನಾಲ್ಕು ದಿನಗಳ ಬಳಿಕ ಹಣ ಕೊಡೋದಾಗಿ ಮುರುಳಿ ಅವರು ಶಿವಶಂಕರ್​ಗೆ ಭರವಸೆ ನೀಡಿದ್ದರು. ಆದರೆ ಹಣ ಮಾತ್ರ ನೀಡಿಲ್ಲ. ಅಲ್ಲದೆ, ಚಿತ್ರ ಬಿಡುಗಡೆಗೆ ತೊಂದರೆ ಮಾಡುವ ಬೆದರಿಕೆ ಕೂಡ ಹಾಕಲಾಗಿದೆ. ಅಷ್ಟೇ ಅಲ್ಲದೆ, ಚಿತ್ರದ ವ್ಯಾಪಾರ ಆಗಬಾರದು ಎನ್ನುವ ಕಾರಣಕ್ಕೆ ಸಿನಿಮಾ ಆಗಲೇ ಸೇಲ್ ಆಗಿದೆ ಎಂದು ಪ್ರಚಾರ ಮಾಡಿದ್ದರು. ಈ ವಿಚಾರದ ಬಗ್ಗೆ ಜಾಕ್ ಮಂಜು ಅವರ ಸಂಪರ್ಕಿಸಿದರೂ ಅವರು ಸ್ಪಂದಿಸಿಲ್ಲ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:18 pm, Sun, 18 August 24

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್