AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್ ರೋಣ’ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್

ಅನೀಶ್ ನಟನೆ ಮಾಡಿದ್ದ ‘ಮಾಯಾನಗರಿ’ ಚಿತ್ರದ ಸಂಬಂಧ ಕೇಸ್ ದಾಖಲಾಗಿದೆ. ಈ ಚಿತ್ರಕ್ಕೆ ಸಿದ್ದೇಶ್ ಎಂಬುವವರು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ನೇಮಕ ಮಾಡಲಾಗಿತ್ತು. ಈ ಚಿತ್ರದ ನಿರ್ಮಾಪಕ ಶಿವಶಂಕರ್​ಗೆ ಜಾಕ್ ಮಂಜುನ ಪರಿಚಯ ಮಾಡಿದ್ದು ಇದೇ ಸಿದ್ದೇಶ್.

‘ವಿಕ್ರಾಂತ್ ರೋಣ’ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್
ಜಾಕ್ ಮಂಜು
Jagadisha B
| Edited By: |

Updated on:Aug 18, 2024 | 2:18 PM

Share

‘ವಿಕ್ರಾಂತ್ ರೋಣ’, ‘ಡೆಡ್ಲಿ ಸೋಮ’ ನಿರ್ಮಾಪಕನ ಜಾಕ್ ಮಂಜು ವಿರುದ್ಧ ಬೆಂಗಳೂರಿನ ಉಪ್ಪಾರ್​ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕೊರ್ಟ್​ನ ಪಿಸಿಆರ್ ಆಧರಿಸಿ ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಕನ್ನಡದ ಮತ್ತೋರ್ವ ನಿರ್ಮಾಪಕ ಶಿವಶಂಕರ್ ಎಂಬುವವರು ಮಂಜು ವಿರುದ್ಧ ದೂರು ದಾಖಲು ಮಾಡಿದ್ದರು. ಮೋಸ ಮಾಡಿದ ಆರೋಪ ಜಾಕ್ ಮಂಜು ವಿರುದ್ಧ ಕೇಳಿ ಬಂದಿದೆ. ಜಾಕ್ ಮಂಜು ಜೊತೆ ಸಿದ್ದೇಶ್, ಮುರುಳಿ ಎಂಬುವವರ ವಿರುದ್ಧವೂ ಎಫ್​ಐಆರ್ ದಾಖಲಾಗಿದೆ.

ಅನೀಶ್ ನಟನೆ ಮಾಡಿದ್ದ ‘ಮಾಯಾನಗರಿ’ ಚಿತ್ರದ ಸಂಬಂಧ ಕೇಸ್ ದಾಖಲಾಗಿದೆ. ಈ ಚಿತ್ರಕ್ಕೆ ಸಿದ್ದೇಶ್ ಎಂಬುವವರು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ನೇಮಕ ಮಾಡಲಾಗಿತ್ತು. ಅವರು ಈ ಚಿತ್ರಕ್ಕೆ 8 ಲಕ್ಷ ರೂಪಾಯಿ ಬಂಡವಾಳ ಹೂಡಿದ್ದರು. ಚಿತ್ರೀಕರಣಕ್ಕೆ ಹಣ ಒದಗಿಸಿಕೊಡು ಎಂದು ನಿರ್ಮಾಪಕ ಶಿವಶಂಕರ್‌ ಅವರು ಸಿದ್ದೇಶ ಬಳಿ ಕೇಳಿಕೊಂಡಿದ್ದರು. ಈ ವೇಳೆ ‘ಶಾಲಿನಿ ಆರ್ಟ್ಸ್​​’ನ ಮೇಲ್ವಿಚಾರಕ ಮುರುಳಿ ಎಂಬುವವರನ್ನು ಶಿವಶಂಕರ್​ಗೆ ಸಿದ್ದೇಶ್ ಭೇಟಿ ಮಾಡಿಸಿದರು. ಸಿನಿಮಾ ನೋಡಿದ ಬಳಿಕ ಹಣ ಕೊಡಿಸುವುದಾಗಿ ಅವರು ಭರವಸೆ ನೀಡಿದ್ದರು.

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಅಪಪ್ರಚಾರ; ಗರಂ ಆದ ಜಾಕ್ ಮಂಜು

ಆ ಬಳಿಕ ‘ಶಾಲಿನಿ ಆರ್ಟ್ಸ್​​’ನ ಮಾಲೀಕ ಜಾಕ್ ಮಂಜುವಿನ ಪರಿಚಯ ಕೂಡ ಶಿವಶಂಕರ್​ಗೆ ಬೆಳೆಯಿತು. ಮೂರ್ನಾಲ್ಕು ದಿನಗಳ ಬಳಿಕ ಹಣ ಕೊಡೋದಾಗಿ ಮುರುಳಿ ಅವರು ಶಿವಶಂಕರ್​ಗೆ ಭರವಸೆ ನೀಡಿದ್ದರು. ಆದರೆ ಹಣ ಮಾತ್ರ ನೀಡಿಲ್ಲ. ಅಲ್ಲದೆ, ಚಿತ್ರ ಬಿಡುಗಡೆಗೆ ತೊಂದರೆ ಮಾಡುವ ಬೆದರಿಕೆ ಕೂಡ ಹಾಕಲಾಗಿದೆ. ಅಷ್ಟೇ ಅಲ್ಲದೆ, ಚಿತ್ರದ ವ್ಯಾಪಾರ ಆಗಬಾರದು ಎನ್ನುವ ಕಾರಣಕ್ಕೆ ಸಿನಿಮಾ ಆಗಲೇ ಸೇಲ್ ಆಗಿದೆ ಎಂದು ಪ್ರಚಾರ ಮಾಡಿದ್ದರು. ಈ ವಿಚಾರದ ಬಗ್ಗೆ ಜಾಕ್ ಮಂಜು ಅವರ ಸಂಪರ್ಕಿಸಿದರೂ ಅವರು ಸ್ಪಂದಿಸಿಲ್ಲ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:18 pm, Sun, 18 August 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ