AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾಸ್ತಿ ಮಾತಾಡಿದರೆ ಹೊಡಿತೀನಿ, ಮುಗಿಸಿ ಬಿಡ್ತೀನಿ’; ಮತ್ತೆ ಶುರುವಾಯ್ತು ಖ್ಯಾತ ನಿರ್ಮಾಪಕನ ಮಗನ ಕಿರಿಕ್

‘ಜಾಸ್ತಿ ಮಾತಾಡಿದರೆ ಸೀರಿ ಬಿಚ್ಚಿ ಹೊಡಿತೀನಿ. ಇನ್ನೂ ಜಾಸ್ತಿ ಮಾತನಾಡಿದರೆ ಮುಗಿಸಿ ಬಿಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ’ ಎಂಬುದಾಗಿ ರಜತ್ ಗೌಡ ಪತ್ನಿ ಅನ್ನಪೂರ್ಣ ಅವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

‘ಜಾಸ್ತಿ ಮಾತಾಡಿದರೆ ಹೊಡಿತೀನಿ, ಮುಗಿಸಿ ಬಿಡ್ತೀನಿ’; ಮತ್ತೆ ಶುರುವಾಯ್ತು ಖ್ಯಾತ ನಿರ್ಮಾಪಕನ ಮಗನ ಕಿರಿಕ್
TV9 Web
| Edited By: |

Updated on: Sep 30, 2022 | 3:03 PM

Share

ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಪುತ್ರ ಸ್ನೇಹಿತ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಆದರೆ, ಅದು ಒಳ್ಳೆಯ ಕಾರಣಕ್ಕೆ ಅಲ್ಲ. ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ (Rajat) ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿದ ಆರೋಪ ಇವರ ವಿರುದ್ಧ ಕೇಳಿ ಬಂದಿತ್ತು. ಈ ಪ್ರಕರಣ ತಣ್ಣಗಾಯಿತು ಎನ್ನುವಾಗಲೇ ಮತ್ತೊಂದು ಕಿರಿಕ್ ನಡೆದಿದೆ. ಸ್ನೇಹಿತ್ (Snehit) ಕಾರು ಚಾಲಕ ರಕ್ಷಿತ್ ಅವರು ರಜತ್ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಈ ಪ್ರಕರಣ ನಡೆದ ಬೆನ್ನಲ್ಲೇ ರಜತ್ ಪತ್ನಿ, ಸ್ನೇಹಿತ್ ವಿರುದ್ಧ ದೂರು ದಾಖಲು ಮಾಡಿದ್ದಾರೆ.

ಜಗದೀಶ್ ಮನೆ ಕಾರು ಚಾಲಕ ರಕ್ಷಿತ್​​ಗೆ ರಜತ್ ಅವರು ಜಾತಿ ನಿಂದನೆ ಮಾಡಿರುವ ಆರೋಪ ಇದೆ. ಈ ಸಂಬಂಧ ಕಾರು ಚಾಲಕ ರಕ್ಷಿತ್​ ಅವರು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಕೊಲೆ ಬೆದರಿಕೆ ಇರುವ ಬಗ್ಗೆ ಜಗದೀಶ್ ಮನೆ ಕಾರು ಚಾಲಕ ದೂರು ದಾಖಲು ಮಾಡಿದ ಕೆಲವೇ ದಿನಗಳಲ್ಲಿ ರಜತ್ ಕುಟುಂಬದವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ! ಸ್ನೇಹಿತ್ ಅವರು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲು ಮಾಡಿದ್ದಾರೆ.

ಜಾಗ್ವಾರ್ ಕಾರಿನಲ್ಲಿ ಬಂದ ಸ್ನೇಹಿತ್ ಅವರು ರಜತ್ ಹಾಗೂ ಅವರ ಪತ್ನಿ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬುದು ದೂರಿನಲ್ಲಿದೆ. ‘ಜಾಸ್ತಿ ಮಾತಾಡಿದರೆ ಸೀರಿ ಬಿಚ್ಚಿ ಹೊಡಿತೀನಿ. ಇನ್ನೂ ಜಾಸ್ತಿ ಮಾತನಾಡಿದರೆ ಮುಗಿಸಿ ಬಿಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ’ ಎಂಬುದಾಗಿ ರಜತ್ ಗೌಡ ಪತ್ನಿ ಅನ್ನಪೂರ್ಣ ಅವರು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಇಬ್ಬರ ದೂರುಗಳ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಮಹಾಲಕ್ಷ್ಮಿ ಲೇಔಟ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ
Image
Snehith: ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ತಂಡದ ಪುಂಡಾಟ ಪ್ರಕರಣಕ್ಕೆ ಮಹತ್ವದ ತಿರುವು
Image
ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?
Image
Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

ಇದನ್ನೂ ಓದಿ: ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?

ಈ ಮೊದಲೂ ಆಗಿತ್ತು ಕಿರಿಕ್

ಸ್ನೇಹಿತ್ ವಿರುದ್ಧ ಈ ಮೊದಲೂ ಕೇಸ್ ದಾಖಲಾಗಿತ್ತು. ‘ರಜತ್ ಮನೆಗೆ ನುಗ್ಗಿ ಸ್ನೇಹಿತ್ ಇಬ್ಬರು ಮಹಿಳಾ ಕೆಲಸದವರ ಮೇಲೆ ಹಲ್ಲೆ ಮಾಡಿದ್ದಾರೆ. ಸ್ನೇಹಿತ್ ಹತ್ತು ಜನ ಬೌನ್ಸರ್​ಗಳನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ. ಮಹಿಳೆಯರಿಗೆ ಬಟ್ಟೆ ಹರಿದು ಹೋಗುವಂತೆ ಹಾಗೂ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ’ ಎಂದು ಈ ಮೊದಲು ರಜತ್ ದೂರು ದಾಖಲು ಮಾಡಿದ್ದರು.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ