AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಪ್ರಕರಣ; ಮಳೆಯಲಿ ಜೊತೆಯಲಿ ಸಿನಿಮಾ ನಟಿ ವಿರುದ್ಧ ಎಫ್​ಐಆರ್​

ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

ಜಾತಿ ನಿಂದನೆ ಪ್ರಕರಣ; ಮಳೆಯಲಿ ಜೊತೆಯಲಿ ಸಿನಿಮಾ ನಟಿ ವಿರುದ್ಧ ಎಫ್​ಐಆರ್​
ಯುವಿಕಾ ಚೌಧರಿ
ರಾಜೇಶ್ ದುಗ್ಗುಮನೆ
|

Updated on: May 29, 2021 | 8:32 PM

Share

ಜಾತಿ ನಿಂದನೆ ಆರೋಪದ ಮೇಲೆ ಗಣೇಶ್ ನಟನೆಯ ಮಳೆಯಲಿ ಜೊತೆಯಲಿ ಸಿನಿಮಾದ ನಾಯಕಿ ಯುವಿಕಾ ಚೌಧರಿ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರಿಂದ ನಟಿ ಕೋರ್ಟ್​ ಮೆಟ್ಟಿಲು ಹತ್ತಬೇಕಾದ ಪರಿಸ್ಥಿತಿ ಬಂದೊದಗಿದೆ.

ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ದಲಿತ ಹಕ್ಕುಗಳ ಕಾರ್ಯಕರ್ತರೊಬ್ಬರು ಕೇಸ್​ ದಾಖಲು ಮಾಡಿದ್ದರು. ಹೀಗಾಗಿ, ಯುವಿಕಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಯುವಿಕಾ ಎಸ್​ಸಿ-ಎಸ್​ಟಿ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವ ಭರವಸೆ ನಮಗಿದೆ ಎಂದು ದಲಿತ ಹಕ್ಕುಗಳ ಕಾರ್ಯಕರ್ತ ರಜತ್​ ಹೇಳಿದ್ದಾರೆ. ಮೇ 26ರಂದು ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದಾರೆ. ಈ ವಿಚಾರ ವೈರಲ್​ ಆಗುತ್ತಿದ್ದಂತೆ ಯುವಿಕಾ ಟ್ವಿಟರ್​ನಲ್ಲಿ ಕ್ಷಮೆ ಕೇಳಿದ್ದಾರೆ. ಯಾರಿಗೂ ಬೇಸರ ಮಾಡೋದು ನನ್ನ ಉದ್ದೇಶ ಆಗಿರಲಿಲ್ಲ. ಈ ಬಗ್ಗೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಮಳೆಯಲಿ ಜತೆಯಲಿ’ ಸಿನಿಮಾದಲ್ಲಿ ಯುವಿಕಾ ನಟಿಸಿದ್ದರು. ಗಣೇಶ್​ ಸಿನಿಮಾದ ಹೀರೋ. ಈ ಚಿತ್ರ ಸಾಧಾರಾಣ ಗೆಲುವು ಕಂಡಿತ್ತು.

ಇದನ್ನೂ ಓದಿ: ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ