AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಪ್ರಕರಣ; ಮಳೆಯಲಿ ಜೊತೆಯಲಿ ಸಿನಿಮಾ ನಟಿ ವಿರುದ್ಧ ಎಫ್​ಐಆರ್​

ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

ಜಾತಿ ನಿಂದನೆ ಪ್ರಕರಣ; ಮಳೆಯಲಿ ಜೊತೆಯಲಿ ಸಿನಿಮಾ ನಟಿ ವಿರುದ್ಧ ಎಫ್​ಐಆರ್​
ಯುವಿಕಾ ಚೌಧರಿ
ರಾಜೇಶ್ ದುಗ್ಗುಮನೆ
|

Updated on: May 29, 2021 | 8:32 PM

Share

ಜಾತಿ ನಿಂದನೆ ಆರೋಪದ ಮೇಲೆ ಗಣೇಶ್ ನಟನೆಯ ಮಳೆಯಲಿ ಜೊತೆಯಲಿ ಸಿನಿಮಾದ ನಾಯಕಿ ಯುವಿಕಾ ಚೌಧರಿ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರಿಂದ ನಟಿ ಕೋರ್ಟ್​ ಮೆಟ್ಟಿಲು ಹತ್ತಬೇಕಾದ ಪರಿಸ್ಥಿತಿ ಬಂದೊದಗಿದೆ.

ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ದಲಿತ ಹಕ್ಕುಗಳ ಕಾರ್ಯಕರ್ತರೊಬ್ಬರು ಕೇಸ್​ ದಾಖಲು ಮಾಡಿದ್ದರು. ಹೀಗಾಗಿ, ಯುವಿಕಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಯುವಿಕಾ ಎಸ್​ಸಿ-ಎಸ್​ಟಿ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವ ಭರವಸೆ ನಮಗಿದೆ ಎಂದು ದಲಿತ ಹಕ್ಕುಗಳ ಕಾರ್ಯಕರ್ತ ರಜತ್​ ಹೇಳಿದ್ದಾರೆ. ಮೇ 26ರಂದು ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದಾರೆ. ಈ ವಿಚಾರ ವೈರಲ್​ ಆಗುತ್ತಿದ್ದಂತೆ ಯುವಿಕಾ ಟ್ವಿಟರ್​ನಲ್ಲಿ ಕ್ಷಮೆ ಕೇಳಿದ್ದಾರೆ. ಯಾರಿಗೂ ಬೇಸರ ಮಾಡೋದು ನನ್ನ ಉದ್ದೇಶ ಆಗಿರಲಿಲ್ಲ. ಈ ಬಗ್ಗೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಮಳೆಯಲಿ ಜತೆಯಲಿ’ ಸಿನಿಮಾದಲ್ಲಿ ಯುವಿಕಾ ನಟಿಸಿದ್ದರು. ಗಣೇಶ್​ ಸಿನಿಮಾದ ಹೀರೋ. ಈ ಚಿತ್ರ ಸಾಧಾರಾಣ ಗೆಲುವು ಕಂಡಿತ್ತು.

ಇದನ್ನೂ ಓದಿ: ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ