AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ನಿಂದನೆ ಪ್ರಕರಣ; ಮಳೆಯಲಿ ಜೊತೆಯಲಿ ಸಿನಿಮಾ ನಟಿ ವಿರುದ್ಧ ಎಫ್​ಐಆರ್​

ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

ಜಾತಿ ನಿಂದನೆ ಪ್ರಕರಣ; ಮಳೆಯಲಿ ಜೊತೆಯಲಿ ಸಿನಿಮಾ ನಟಿ ವಿರುದ್ಧ ಎಫ್​ಐಆರ್​
ಯುವಿಕಾ ಚೌಧರಿ
ರಾಜೇಶ್ ದುಗ್ಗುಮನೆ
|

Updated on: May 29, 2021 | 8:32 PM

Share

ಜಾತಿ ನಿಂದನೆ ಆರೋಪದ ಮೇಲೆ ಗಣೇಶ್ ನಟನೆಯ ಮಳೆಯಲಿ ಜೊತೆಯಲಿ ಸಿನಿಮಾದ ನಾಯಕಿ ಯುವಿಕಾ ಚೌಧರಿ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದರಿಂದ ನಟಿ ಕೋರ್ಟ್​ ಮೆಟ್ಟಿಲು ಹತ್ತಬೇಕಾದ ಪರಿಸ್ಥಿತಿ ಬಂದೊದಗಿದೆ.

ಯುವಿಕಾ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋದಲ್ಲಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ದಲಿತ ಹಕ್ಕುಗಳ ಕಾರ್ಯಕರ್ತರೊಬ್ಬರು ಕೇಸ್​ ದಾಖಲು ಮಾಡಿದ್ದರು. ಹೀಗಾಗಿ, ಯುವಿಕಾ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಯುವಿಕಾ ಎಸ್​ಸಿ-ಎಸ್​ಟಿ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಈಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವ ಭರವಸೆ ನಮಗಿದೆ ಎಂದು ದಲಿತ ಹಕ್ಕುಗಳ ಕಾರ್ಯಕರ್ತ ರಜತ್​ ಹೇಳಿದ್ದಾರೆ. ಮೇ 26ರಂದು ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದಾರೆ. ಈ ವಿಚಾರ ವೈರಲ್​ ಆಗುತ್ತಿದ್ದಂತೆ ಯುವಿಕಾ ಟ್ವಿಟರ್​ನಲ್ಲಿ ಕ್ಷಮೆ ಕೇಳಿದ್ದಾರೆ. ಯಾರಿಗೂ ಬೇಸರ ಮಾಡೋದು ನನ್ನ ಉದ್ದೇಶ ಆಗಿರಲಿಲ್ಲ. ಈ ಬಗ್ಗೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

2009ರಲ್ಲಿ ತೆರೆಗೆ ಬಂದ ‘ಮಳೆಯಲಿ ಜತೆಯಲಿ’ ಸಿನಿಮಾದಲ್ಲಿ ಯುವಿಕಾ ನಟಿಸಿದ್ದರು. ಗಣೇಶ್​ ಸಿನಿಮಾದ ಹೀರೋ. ಈ ಚಿತ್ರ ಸಾಧಾರಾಣ ಗೆಲುವು ಕಂಡಿತ್ತು.

ಇದನ್ನೂ ಓದಿ: ಜಾತಿ ನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ ಮುನ್​ಮುನ್​ ದತ್ತ ವಿರುದ್ಧ ಎಫ್​ಐಆರ್​ ದಾಖಲು

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!