AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಜಾವರ ಶ್ರೀಗಳ ವಿರುದ್ದ ಹಂಸಲೇಖ ಅಕ್ಷೆಪಾರ್ಹ ಹೇಳಿಕೆ ವಿಚಾರ; ಬಸವನಗುಡಿ ಪೊಲೀಸ್ ಠಾಣೆಯಲ್ಲಿ FIR ದಾಖಲು

Hamsalekha Controversy: ಶೀಘ್ರವೇ ಸಂಗೀತ‌ ನಿರ್ದೇಶಕ ಹಂಸಲೇಖಗೆ ಬಸವನಗುಡಿ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಚಾರಣೆ ಹಾಜರಾಗುವಂತೆ ನೋಟಿಸ್ ಸಾಧ್ಯತೆ ಕಂಡುಬಂದಿದೆ.

ಪೇಜಾವರ ಶ್ರೀಗಳ ವಿರುದ್ದ ಹಂಸಲೇಖ ಅಕ್ಷೆಪಾರ್ಹ ಹೇಳಿಕೆ ವಿಚಾರ; ಬಸವನಗುಡಿ ಪೊಲೀಸ್ ಠಾಣೆಯಲ್ಲಿ FIR ದಾಖಲು
ಹಂಸಲೇಖ
TV9 Web
| Edited By: |

Updated on:Nov 17, 2021 | 10:50 PM

Share

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅಕ್ಷೆಪಾರ್ಹ ಹೇಳಿಕೆ ವಿಚಾರ ಇದೀಗ ಬಹಳ ಸದ್ದು ಮಾಡುತ್ತಿದೆ. ನಾದಬ್ರಹ್ಮ ಖ್ಯಾತಿಯ ಹಂಸಲೇಖ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿದೆ. ನೆಟ್ಟಿಗರಲ್ಲಿ ಈ ಬಗ್ಗೆ ವಾದ- ಪ್ರತಿವಾದಗಳೂ ಕಾಣುತ್ತಿವೆ. ಈ ಮಧ್ಯೆ, ಇದೀಗ ಹಂಸಲೇಖ ವಿರುದ್ದ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಐಪಿಸಿ 295 ಎ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇಂದು (ನವೆಂಬರ್ 17) ಸಂಜೆ ಪೇಜಾವರ ಶ್ರೀಗಳ ಭಕ್ತರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ಮಾಡಿ ಪ್ರತ್ಯೇಕ ದೂರು ನೀಡಿದ್ದಾರೆ. ವರ್ಗ ವರ್ಗಗಳ ನಡುವೆ ದುರುದ್ದೇಶದಿಂದ, ದ್ವೇಷಭಾವನೆ ಉಂಟು ಮಾಡಿರುತ್ತಾರೆ. ಸಮಾಜದಲ್ಲಿ ಶಾಂತಿ ಭಂಗ ಮಾಡಿದ್ದಾರೆ. ಗುರುಗಳಿಗೆ ಕೇಡನ್ನು ಬಯಸುವ ಉದ್ದೇಶದಿಂದ, ಚಾರಿತ್ರ್ಯಕ್ಕೆ ಕಪ್ಪು ಚುಕ್ಕೆ ಇಡುವ ಉದ್ದೇಶದಿಂದ ಹಂಸಲೇಖ ಹೇಳಿಕೆ ನೀಡಿದ್ದಾರೆ ಎಂದು ದೂರು ನೀಡಲಾಗಿದೆ.

ದೂರಿನ ಅನ್ವಯ FIR ದಾಖಲಿಸಿ ಬಸವನಗುಡಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಶೀಘ್ರವೇ ಸಂಗೀತ‌ ನಿರ್ದೇಶಕ ಹಂಸಲೇಖಗೆ ಬಸವನಗುಡಿ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲು ವಿಚಾರಣೆ ಹಾಜರಾಗುವಂತೆ ನೋಟಿಸ್ ಸಾಧ್ಯತೆ ಕಂಡುಬಂದಿದೆ.

ದಲಿತರ ಮನೆಯಲ್ಲಿ ಸವರ್ಣೀಯರ ವಾಸ್ತವ್ಯದ ಕುರಿತಂತೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ನೀಡಿದ ವಿವಾದಾತ್ಮಕ ಹೇಳಿಕೆಗೆ ಅನೇಕರಿಂದ ವಿರೋಧ ವ್ಯಕ್ತವಾಗುತ್ತಿದೆ. ತಮ್ಮ ಹೇಳಿಕೆ ಕುರಿತಂತೆ ಹಂಸಲೇಖ ಅವರು ಈಗಾಗಲೇ ಕ್ಷಮೆ ಕೇಳಿದ್ದರೂ ಕೂಡ ವಿವಾದ ತಣ್ಣಗಾಗಿಲ್ಲ. ಅವರ ವಿರುದ್ಧ ಹಲವೆಡೆ ದೂರು ದಾಖಲಾಗುತ್ತಿದೆ. ಅಖಿಲ ಭಾರತ ಬ್ರಾಹ್ಮಣ ಮಹಾಸಭಾ (Akhila Bharatha Brahmana Mahasabha) ವಿಪ್ರ ಯುವ ವೇದಿಕೆಯಿಂದ ಹಂಸಲೇಖ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿತ್ತು.

‘ಪೇಜಾವರ ಶ್ರೀಗಳ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ್ದು ತಪ್ಪು. ಅದಕ್ಕಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪೇಜಾವರ ಶ್ರೀಗಳ (Pejawar Shree) ಬೃಂದಾವನದ ಮುಂದೆ ಬಂದು ಹಂಸಲೇಖ ಬಹಿರಂಗವಾಗಿ ಕ್ಷಮೆ ಕೇಳಬೇಕು. ನಾಲ್ಕು ಗೋಡೆ ಮಧ್ಯೆ ಕ್ಷಮೆ ಕೇಳಿರುವುದನ್ನು ಒಪ್ಪುವುದಿಲ್ಲ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ’ ಎಂದು ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಕೃಷ್ಣ ಹೇಳಿದ್ದರು.

ಇದನ್ನೂ ಓದಿ: ಹಂಸಲೇಖ ವಿರುದ್ಧ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ದೂರು; ಶ್ರೀಗಳ ಬೃಂದಾವನದ ಮುಂದೆ ಕ್ಷಮೆಗೆ ಆಗ್ರಹ

ಇದನ್ನೂ ಓದಿ: ಪ್ರಚಾರಕ್ಕಾಗಿ ಜನ ಹೀಗೆ ಮಾಡ್ತಾರೆ; ಶಿಶುಪಾಲನಿಗೆ ಕೃಷ್ಣನೇ ಶಾಸ್ತಿ ಮಾಡಿದ್ದ -ಹಂಸಲೇಖ ಟೀಕೆಗೆ ವಿಶ್ವಪ್ರಸನ್ನ ತೀರ್ಥಶ್ರೀ ಉತ್ತರ

Published On - 10:49 pm, Wed, 17 November 21

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ