AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೈರ್ ಫ್ಲೈ’ ಟೀಸರ್: ವಿಚಿತ್ರವಾಗಿದೆ ವಿಕ್ಕಿ ಅಲಿಯಾಸ್​ ವಿವೇಕಾನಂದನ ವರ್ತನೆ

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಪಾತ್ರದ ಹೆಸರು ವಿಕ್ಕಿ. ಆ ಪಾತ್ರದ ವರ್ತನೆಗಳು ಬಹಳ ವಿಚಿತ್ರವಾಗಿವೆ ಎಂಬುದನ್ನು ಟೀಸರ್​ ಮೂಲಕ ತೋರಿಸಲಾಗಿದೆ. ಸಿನಿಮಾದ ಬಗ್ಗೆ ಕೌತುಕ ಮೂಡುವ ರೀತಿಯಲ್ಲಿ ಈ ಟೀಸರ್​ ಮೂಡಿಬಂದಿದೆ. ಪ್ರೇಕ್ಷಕರಿಂದ ಟೀಸರ್​ಗೆ ಮೆಚ್ಚುಗೆ ಸಿಗುತ್ತಿದೆ. ಸಿನಿಮಾ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ..

‘ಫೈರ್ ಫ್ಲೈ’ ಟೀಸರ್: ವಿಚಿತ್ರವಾಗಿದೆ ವಿಕ್ಕಿ ಅಲಿಯಾಸ್​ ವಿವೇಕಾನಂದನ ವರ್ತನೆ
ವಂಶಿ
ಮದನ್​ ಕುಮಾರ್​
|

Updated on: Sep 10, 2024 | 10:31 PM

Share

ಶಿವರಾಜ್​ಕುಮಾರ್ ಅವರ ಪುತ್ರಿ ನಿವೇದಿತಾ ಅವರು ‘ಫೈರ್‌ ಫ್ಲೈ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇದು ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವಾಗಿದ್ದು, ಯುವ ಪ್ರತಿಭೆಗಳಿಗೆ ಇದರಲ್ಲಿ ಅವಕಾಶ ನೀಡಿದ್ದಾರೆ. ವಂಶಿ ಅವರು ನಟಿಸಿ, ನಿರ್ದೇಶನ ಮಾಡಿರುವ ಈ ಸಿನಿಮಾದ ಮೊದಲ ಝಲಕ್, ಅಂದರೆ ಟೀಸರ್​ ಬಿಡುಗಡೆ ಮಾಡಲಾಗಿದೆ. ನಾಯಕನ ಪಾತ್ರ ವಿಕ್ಕಿಯ ಪರಿಚಯವನ್ನು ಈ ಟೀಸರ್​ ಮೂಲಕ ಮಾಡಿಕೊಡಲಾಗಿದೆ. ವಂಶಿ ಅವರು ಈ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಫೈರ್ ಫ್ಲೈ’ ಸಿನಿಮಾ ಒಂದಷ್ಟು ಕಾರಣಗಳಿಂದ ಹೈಪ್​ ಸೃಷ್ಟಿ ಮಾಡಿದೆ.

ಟೀಸರ್​ನಲ್ಲಿ ವಿವೇಕಾನಂದ ಅಂತ ಪರಿಚಯ ಮಾಡಿಕೊಳ್ಳುವ ನಾಯಕ ವಿಕ್ಕಿ ತಾನೊಬ್ಬ ಪ್ರಶಸ್ತಿ ವಿಜೇತ ಮ್ಯಾಥ್ಸ್ ಟೀಚರ್ ಎಂದು ಹೇಳಿಕೊಳ್ತಾನೆ. ವಿಕ್ಕಿಯ ಜಗತ್ತಿನಲ್ಲಿ ಬೆಳಿಗ್ಗೆ 7, ಮಧ್ಯಾಹ್ನ 1 ಹಾಗೂ ರಾತ್ರಿ 8 ಗಂಟೆಗೆ ಏನು ನಡೆಯುತ್ತೆ? ವಿಕ್ಕಿಯ ವಿಚಿತ್ರ ವರ್ತನೆಗಳನ್ನು ತುಂಬ ತಮಾಷೆಯಾಗಿ ಕಟ್ಟಿಕೊಡಲಾಗಿದೆ. ಎರಡು ನಿಮಿಷ 49 ಸೆಕೆಂಡ್ ಇರುವ ‘ಫೈರ್ ಫ್ಲೈ’ ಟೀಸರ್ ಕುತೂಹಲದಿಂದ ಕೂಡಿದೆ. ವಿಕ್ಕಿ ಯಾರು ಎಂಬುದನ್ನು ಹೇಳಿರುವ ಚಿತ್ರತಂಡವು ಆತ ಯಾಕೆ ವಿಚಿತ್ರವಾಗಿ ವರ್ತಿಸುತ್ತಾನೆ ಎಂಬುದನ್ನು ಗೌಪ್ಯವಾಗಿಯೇ ಉಳಿಸಿಕೊಂಡಿದೆ.

ಈ ಸಿನಿಮಾದಲ್ಲಿ ವಂಶಿ ಅವರು ನಾಯಕನಾಗಿ ನಟಿಸಿದ್ದಾರೆ. ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ತಾಂತ್ರಿಕವಾಗಿ ಈ ಟೀಸರ್ ಬಹಳ ರಿಚ್​ ಆಗಿ ಮೂಡಿಬಂದಿದೆ. ಸಿನಿಮಾದ ಎಲ್ಲ ಫ್ರೇಮ್​ನ ಕಲರಿಂಗ್, ಕ್ವಾಲಿಟಿಯಲ್ಲಿ ರಾಜಿ ಆಗದೇ ಒಳ್ಳೆ ಔಟ್ ಫುಟ್ ನೀಡಲು ಪ್ರಯತ್ನಿಸಿರುವುದಾಗಿ ಚಿತ್ರತಂಡ ಹೇಳಿದೆ. ಈ ಸಿನಿಮಾಗೆ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಅಭಿಲಾಷ್ ಕಳತ್ತಿ ಅವರು ಛಾಯಾಗ್ರಹಣ ಮಾಡಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆ ಬರೆದಿದ್ದಾರೆ. ಸುರೇಶ್ ಆರ್ಮುಗಂ ಅವರ ಸಂಕಲನ ‘ಫೈರ್ ಫ್ಲೈ’ ಸಿನಿಮಾಗೆ ಇದೆ. ಈ ಸಿನಿಮಾದಲ್ಲಿ ವಂಶಿಗೆ ಜೋಡಿಯಾಗಿ ರಚನಾ ಇಂದರ್ ಅವರು ಅಭಿನಯಿಸಿದ್ದಾರೆ. ಸುಧಾರಾಣಿ, ಅಚ್ಯುತ್ ಕುಮಾರ್, ಶೀತಲ್ ಶೆಟ್ಟಿ, ಚಿತ್ಕಲಾ ಬಿರಾದಾರ್, ಮೂಗು ಸುರೇಶ್, ಸಿಹಿ ಕಹಿ ಚಂದ್ರು ಮುಂತಾದ ಕಲಾವಿದರು ಕೂಡ ನಟಿಸಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್ ಜೊತೆ ಸಣ್ಣ ಪಾತ್ರ ಮಾಡಿದ್ದ ಈ ಕಲಾವಿದ ಈಗ ಬಾಲಿವುಡ್​ನ ಸ್ಟಾರ್ ಹೀರೋ

‘ಶ್ರೀ ಮುತ್ತು ಸಿನಿ ಸರ್ವಿಸಸ್​ ಸಂಸ್ಥೆ’ ಮೂಲಕ ‘ಫೈರ್ ಫ್ಲೈ’ ಸಿನಿಮಾ ನಿರ್ಮಾಣ ಆಗುತ್ತಿದೆ. ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಈ ಚಿತ್ರದ ಮೂಲಕ ನಿರ್ದೇಶಕ ವಂಶಿ ಅವರು ಪೂರ್ಣ ಪ್ರಮಾಣದ ಹೀರೋ ಆಗುತ್ತಿದ್ದಾರೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್ ಮುಗಿದಿದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ