AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pentagon: ಏಪ್ರಿಲ್​ 7ಕ್ಕೆ ರಿಲೀಸ್​ ಆಗಲಿದೆ ‘ಪೆಂಟಗನ್​’ ಸಿನಿಮಾ; ಒಂದು ಟಿಕೆಟ್​ನಲ್ಲಿ 5 ಕಥೆ

Guru Deshpande | Pentagon Movie: ಹಾಡುಗಳು ಮತ್ತು ಟೀಸರ್​ ಮೂಲಕ ‘ಪೆಂಟಗನ್​’ ಸಿನಿಮಾ ಗಮನ ಸೆಳೆಯುತ್ತಿದೆ. ಕಥಾಸಂಕಲನದ ರೀತಿ ಮೂಡಿಬಂದಿರುವ ಈ ಚಿತ್ರ ಹಲವು ಕಾರಣಗಳಿಂದ ನಿರೀಕ್ಷೆ ಮೂಡಿಸಿದೆ.

Pentagon: ಏಪ್ರಿಲ್​ 7ಕ್ಕೆ ರಿಲೀಸ್​ ಆಗಲಿದೆ ‘ಪೆಂಟಗನ್​’ ಸಿನಿಮಾ; ಒಂದು ಟಿಕೆಟ್​ನಲ್ಲಿ 5 ಕಥೆ
ಪೆಂಟಗನ್ ಸಿನಿಮಾ ಪೋಸ್ಟರ್
ಮದನ್​ ಕುಮಾರ್​
|

Updated on:Mar 19, 2023 | 3:28 PM

Share

ಚಂದನವನದಲ್ಲಿ ಸಾಕಷ್ಟು ಭಿನ್ನವಾದಂತಹ ಪ್ರಯತ್ನಗಳು ನಡೆಯುತ್ತಿವೆ. ಆ ಪೈಕಿ ನಿರ್ದೇಶಕ-ನಿರ್ಮಾಪಕ ಗುರು ದೇಶಪಾಂಡೆ (Guru Deshpande) ಅವರು ಕೂಡ ತಮ್ಮ ಛಾಪು ಮೂಡಿಸುತ್ತಿದ್ದಾರೆ. 5 ಭಿನ್ನವಾದ ಕಥೆಗಳ ಸಂಕಲನದ (Anthology Movie) ರೀತಿಯಲ್ಲಿ ‘ಪೆಂಟಗನ್​’ ಸಿನಿಮಾ ಮೂಡಿಬಂದಿದೆ. ಈ ಪ್ರಾಜೆಕ್ಟ್​ನ ಉಸ್ತುವಾರಿಯನ್ನು ಹೊತ್ತಿರುವ ಗುರು ದೇಶಪಾಂಡೆ ಅವರು ನಿರ್ಮಾಣದ ಜೊತೆಗೆ ಒಂದು ಕಥೆಯನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದ ರಿಲೀಸ್​ ಡೇಟ್​ ಘೋಷಣೆ ಆಗಿದೆ. ಏಪ್ರಿಲ್​ 7ರಂದು ‘ಪೆಂಟಗನ್​’ ಸಿನಿಮಾ (Pentagon Movie) ಬಿಡುಗಡೆ ಆಗಲಿದೆ. ಒಂದು ಟಿಕೆಟ್​ ಖರೀದಿಸಿ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ 5 ಕಥೆಗಳು ಸಿಗಲಿವೆ. ಡಿಫರೆಂಟ್​ ಪ್ರಯತ್ನ ಎಂಬ ಕಾರಣಕ್ಕೆ ಈ ಸಿನಿಮಾ ಸಾಕಷ್ಟು ಕೌತುಕ ಮೂಡಿಸಿದೆ.

ಕಥಾಸಂಕಲನದ ರೀತಿ ಮೂಡಿಬಂದ ಸಿನಿಮಾಗಳ ಸಂಖ್ಯೆ ತುಂಬ ವಿರಳ. ‘ಜಿ ಸಿನಿಮಾಸ್​’ ಬ್ಯಾನರ್​ ಮೂಲಕ ‘ಪೆಂಟಗನ್​’ ಸಿನಿಮಾ ಮೂಡಿಬಂದಿದೆ. ಇದರಲ್ಲಿನ 5 ಬೇರೆ ಬೇರೆ ಕಥೆಗಳಿಗೆ ಐವರು ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಸಿನಿಪ್ರಿಯರಿಗೆ ಈ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಇದೆ. ಇಂಥ ಭಿನ್ನವಾದ ಪ್ರಯತ್ನಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ಸಿಗಲಿದೆ ಎಂಬ ಭರವಸೆಯಲ್ಲಿ ಚಿತ್ರತಂಡ ರಿಲೀಸ್​ ಡೇಟ್​ ಘೋಷಣೆ ಮಾಡಿದೆ.

ಇದನ್ನೂ ಓದಿ: ಪವನ್ ಕಲ್ಯಾಣ್​ ಚಿತ್ರಕ್ಕೆ ಆರ್​. ಚಂದ್ರು ನಿರ್ದೇಶನ? ‘ಕಬ್ಜ’ ನೋಡಿ ಮೆಚ್ಚಿಕೊಂಡ ಪವರ್​ಸ್ಟಾರ್

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಐವರು ಖ್ಯಾತ ನಿರ್ದೇಶಕರು ‘ಪೆಂಟಗನ್​’ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಗುರು ದೇಶಪಾಂಡೆ, ‘ಶಿವಾಜಿ ಸುರತ್ಕಲ್​’ ಸಿನಿಮಾ ಖ್ಯಾತಿಯ ಆಕಾಶ್​ ಶ್ರೀವತ್ಸ, ‘ಚೂರಿಕಟ್ಟೆ’ ಖ್ಯಾತಿಯ ರಾಘು ಶಿವಮೊಗ್ಗ, ‘ಬ್ರಹ್ಮಚಾರಿ’ ಚಿತ್ರದ ಚಂದ್ರಮೋಹನ್ ಹಾಗೂ ಹೊಸ ನಿರ್ದೇಶಕ ಕಿರಣ್ ಕುಮಾರ್​ ಅವರು ತಲಾ ಒಂದು ಕಥೆಗೆ ನಿರ್ದೇಶನ ಮಾಡಿದ್ದಾರೆ. ಎಲ್ಲ ಪ್ರತಿಭಾವಂತರ ಸಂಗಮ ಈ ಸಿನಿಮಾದಲ್ಲಿ ಆಗಿದೆ.

ಇದನ್ನೂ ಓದಿ: Kantara: ಇಟಾಲಿಯನ್​, ಸ್ಪ್ಯಾನಿಶ್​ ಭಾಷೆಯಲ್ಲೂ ರಿಲೀಸ್​ ಆಗತ್ತೆ ‘ಕಾಂತಾರ’; ಗುಡ್​ ನ್ಯೂಸ್​ ನೀಡಿದ ‘ಹೊಂಬಾಳೆ’

‘ಪೆಂಟಗನ್​’ ಚಿತ್ರದ ಪಾತ್ರವರ್ಗದಲ್ಲಿ ಸಾಕಷ್ಟು ಕಲಾವಿದರು ನಟಿಸಿದ್ದಾರೆ. ಪ್ರಕಾಶ್​ ಬೆಳವಾಡಿ, ಕಿಶೋರ್​, ಪಿ. ರವಿಶಂಕರ್​, ತನಿಶಾ, ಪ್ರೇರಣಾ ಕಂಬಂ, ಪ್ರೀತಿಕಾ ದೇಶಪಾಂಡೆ, ರವಿ ನಾಯಕ್​, ಶ್ರುತಿ ನಾಯಕ್​, ವಂಶಿ ಕೃಷ್ಣ ಸೇರಿದಂತೆ ದೊಡ್ಡ ತಾರಾಗಣ ಈ ಸಿನಿಮಾದಲ್ಲಿದೆ. ಅಭಿಲಾಷ್ ಕಲ್ಲತ್ತಿ, ಗುರುಪ್ರಸಾದ್ ಎಮ್.ಜಿ. ಹಾಗೂ ಕಿರಣ್ ಹಂಪಾಪುರ ಛಾಯಾಗ್ರಹಣ ಮಾಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಹಾಡುಗಳು ಮತ್ತು ಟೀಸರ್​ ಮೂಲಕ ‘ಪೆಂಟಗನ್​’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಕಿಶೋರ್​ ಮಾಡಿರುವ ಕನ್ನಡ ಹೋರಾಟಗಾರನ ಪಾತ್ರ ಕೊಂಚ ವಿವಾದ ಹುಟ್ಟುಹಾಕುವಂತಿದೆ. ‘ಕಾಮನಬಿಲ್ಲು’ ಹಾಡು ಯುವ ಪ್ರೇಕ್ಷಕರ ಗಮನ ಸಳೆದಿದೆ. ಒಟ್ಟಿನಲ್ಲಿ ‘ಪೆಂಟಗನ್​’ ನೋಡಲು ಸಿನಿಪ್ರಿಯರು ಕಾತರದಿಂದ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:28 pm, Sun, 19 March 23

Follow Us
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್