AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಖಾಸಗಿ ಭಾಗಕ್ಕೆ ಗುದ್ದುತ್ತಿದ್ದ’; ಬಾಯ್​​ಫ್ರೆಂಡ್ ಬಗ್ಗೆ ‘ನಮ್ಮಣ್ಣ’ ಸಿನಿಮಾ ನಟಿಯ ಗಂಭೀರ ಆರೋಪ

1999ರಲ್ಲಿ ಫ್ಲೋರಾ ಸೈನಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ವೃತ್ತಿಜೀವನ ಆರಂಭಿಸಿದ್ದು ತೆಲುಗು ಚಿತ್ರರಂಗದಿಂದ. ಹಲವು ತೆಲುಗು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

‘ನನ್ನ ಖಾಸಗಿ ಭಾಗಕ್ಕೆ ಗುದ್ದುತ್ತಿದ್ದ’; ಬಾಯ್​​ಫ್ರೆಂಡ್ ಬಗ್ಗೆ ‘ನಮ್ಮಣ್ಣ’ ಸಿನಿಮಾ ನಟಿಯ ಗಂಭೀರ ಆರೋಪ
ಫ್ಲೋರಾ ಸೈನಿ
ರಾಜೇಶ್ ದುಗ್ಗುಮನೆ
|

Updated on: Jan 31, 2023 | 3:01 PM

Share

‘ಕೋದಂಡ ರಾಮ’, ‘ನಮ್ಮಣ್ಣ’ ಸೇರಿ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ ಫ್ಲೋರಾ ಸೈನಿ (ಆಶಾ ಸೈನಿ) ಅವರು ಈಗ ಸುದ್ದಿಯಲ್ಲಿದ್ದಾರೆ. 14 ತಿಂಗಳ ಕಾಲ ಅವರು ನಿರ್ಮಾಪಕ ಗೌರಂಗ್​ (Gaurang Doshi) ಜತೆ ರಿಲೇಶನ್​ಶಿಪ್​ನಲ್ಲಿದ್ದರು. ಆದರೆ, ಈ ರಿಲೇಶನ್​ಶಿಪ್ ತುಂಬಾನೇ ಬೀಭತ್ಸವಾಗಿತ್ತು ಎಂದು ಹೇಳಿದ್ದಾರೆ. 1999ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿರುವ ಫ್ಲೋರಾ (Flora Saini) ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಸದ್ಯ ಅವರ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

1999ರಲ್ಲಿ ಫ್ಲೋರಾ ಸೈನಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ವೃತ್ತಿಜೀವನ ಆರಂಭಿಸಿದ್ದು ತೆಲುಗು ಚಿತ್ರರಂಗದಿಂದ. ಹಲವು ತೆಲುಗು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆ ಬಳಿಕ ಹಿಂದಿ, ಕನ್ನಡ, ಪಂಜಾಬಿ ಚಿತ್ರಗಳಲ್ಲಿ ಅವರು ನಟಿಸಿದರು. ಈಗಲೂ ಫ್ಲೋರಾ ಅವರು ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ತಮ್ಮ ರಿಲೇಶನ್​ಶಿಪ್​ ಬಗ್ಗೆ ಮಾತನಾಡಿದ್ದಾರೆ.

ಗೌರಂಗ್ ದೋಶಿ ಜತೆ ಫ್ಲೋರಾ 14 ತಿಂಗಳು ಕಳೆದಿದ್ದರು. ಇದು ನರಕವಾಗಿತ್ತು ಎಂದು ಈ ಮೊದಲು ಅವರ ಆರೋಪ ಮಾಡಿದ್ದರು. ಈಗ ಹೆಸರನ್ನು ಉಲ್ಲೇಖ ಮಾಡದೆ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ‘ನಾನು ಖ್ಯಾತ ನಿರ್ಮಾಪಕನ ಜತೆ ಪ್ರೀತಿಯಲ್ಲಿದ್ದೆ. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ, ಕೆಲವೇ ದಿನಗಳಲ್ಲಿ ಅದು ನಿಂದನಾತ್ಮಕ ಸಂಬಂಧವಾಗಿ ಬದಲಾಯಿತು. ಆತ ನನ್ನ ಮುಖ ಹಾಗೂ ಖಾಸಗಿ ಭಾಗಕ್ಕೆ ಹೊಡೆಯುತ್ತಿದ್ದ. ನನ್ನ ಮೊಬೈಲ್ ಕಸಿದುಕೊಳ್ಳುತ್ತಿದ್ದ. ನನ್ನನ್ನು ಸಿನಿಮಾ ರಂಗದಿಂದ ದೂರ ಇಡಲು ಪ್ರಯತ್ನಿಸಿದ. 14 ತಿಂಗಳು ನಾನು ಯಾರ ಜತೆಯೂ ಮಾತನಾಡದಂತೆ ನೋಡಿಕೊಂಡ. ಒಂದು ದಿನ ಆತ ನನ್ನ ಹೊಟ್ಟೆಯ ಮೇಲೆ ಹೊಡೆದ. ನಾನು ಓಡಿ ಬಂದೆ’ ಎಂದಿದ್ದಾರೆ ಫ್ಲೋರಾ.

ಇದನ್ನೂ ಓದಿ: Ashitha First Reaction: ಆಶಿತಾ ಮೀಟೂ ವಿವಾದ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ‘ಬಾ ಬಾರೋ ರಸಿಕ’ ಚಿತ್ರದ ನಟಿ

ಹೀಗೆ ಓಡಿಬಂದ ಫ್ಲೋರಾ ಪಾಲಕರ ಜತೆ ವಾಸಮಾಡೋಕೆ ಆರಂಭಿಸಿದರು. ಈ ಘಟನೆಯಿಂದ ಚೇತರಿಸಿಕೊಳ್ಳೋಕೆ ಅವರಿಗೆ ತಿಂಗಳೇ ಬೇಕಾಯಿತು. ನಂತರ ಅವರು ಮತ್ತೆ ನಟನೆ ಆರಂಭಿಸಿದರು. ‘ಎಲ್ಲದರಿಂದ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಾಯಿತು. ಆದರೆ, ನಾನು ಈಗ ಖುಷಿಯಾಗಿದ್ದೇನೆ. ನನಗೆ ಪ್ರೀತಿಯೂ ಸಿಕ್ಕಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ