SPB ಅನಾರೋಗ್ಯ.. 24 ಗಂಟೆಗಳ ಕಾಲ ಏನನ್ನೂ ಹೇಳಲಾಗದು

[lazy-load-videos-and-sticky-control id=”v7HiKIXxVzE”] ಚೆನ್ನೈ:ಕೊರೊನಾ ಸೋಂಕು ತಗುಲಿದ ನಂತರ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಹದಗೆಡುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್ ಕೇರ್ ಸೆಂಟರಿಗೆ ಆಡ್ಮಿಟ್ ಆಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿಯವರು ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬಾಲಸುಬ್ರಹ್ಮಣ್ಯಂರವರಿಗೆ ಲೈಫ್ ಸಪೋರ್ಟರ್​ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, SPB ಆರೋಗ್ಯದಲ್ಲಿ ಚೇತರಿಕೆ […]

SPB ಅನಾರೋಗ್ಯ.. 24 ಗಂಟೆಗಳ ಕಾಲ ಏನನ್ನೂ ಹೇಳಲಾಗದು
ಸಾಧು ಶ್ರೀನಾಥ್​

Updated on: Aug 15, 2020 | 1:14 PM

[lazy-load-videos-and-sticky-control id=”v7HiKIXxVzE”]

ಚೆನ್ನೈ:ಕೊರೊನಾ ಸೋಂಕು ತಗುಲಿದ ನಂತರ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಹದಗೆಡುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್ ಕೇರ್ ಸೆಂಟರಿಗೆ ಆಡ್ಮಿಟ್ ಆಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿಯವರು ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬಾಲಸುಬ್ರಹ್ಮಣ್ಯಂರವರಿಗೆ ಲೈಫ್ ಸಪೋರ್ಟರ್​ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, SPB ಆರೋಗ್ಯದಲ್ಲಿ ಚೇತರಿಕೆ ಕಾಣಲು ಎರಡು ದಿನಗಳ ಕಾಲ ಸಮಯ ಬೇಕಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Published On - 11:33 am, Sat, 15 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us