AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

Tiger Claw Locket Row: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್​ ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್​ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ದರ್ಶನ್​ ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್​ ಆದ ಬೆನ್ನಲ್ಲೇ ಅವರ ವಿರುದ್ಧ ದೂರು ನೀಡಲಾಗಿತ್ತು.

Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ
ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ
Follow us
ಮದನ್​ ಕುಮಾರ್​
| Updated By: Digi Tech Desk

Updated on:Oct 26, 2023 | 12:36 PM

ವರ್ತೂರು ಸಂತೋಷ್​ (Varthur Santhosh) ಅವರ ಬಂಧನದ ಬಳಿಕ ಹುಲಿ ಉಗುರು ಧರಿಸಿದ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ನಟ ದರ್ಶನ್​ ಅವರು ಹುಲಿ ಉಗುರು ಧರಿಸಿದ್ದ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದರ ಬೆನ್ನಲ್ಲೇ ದೂರು ಕೂಡ ದಾಖಲಾಗಿತ್ತು. ಇಂದು (ಅಕ್ಟೋಬರ್​ 25) ಅರಣ್ಯಾಧಿಕಾರಿಗಳು ದರ್ಶನ್​ ಮನೆಗೆ ಬಂದಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇರುವ ದರ್ಶನ್​ (Darshan) ಅವರ ನಿವಾಸದಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ದರ್ಶನ್​ ಬಳಿ ಇರುವುದು ನಿಜವಾದ ಹುಲಿ ಉಗುರು (Tiger Claw Pendant) ಹೌದೋ ಅಥವಾ ಅಲ್ಲವೋ ಎಂಬುದು ಗೊತ್ತಾಗಬೇಕಿದೆ. ಒಂದು ವೇಳೆ ಹುಲಿ ಉಗುರು ಇರುವುದು ಖಚಿತವಾದರೆ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಸೋಶಿಯಲ್​ ಮೀಡಿಯಾದಲ್ಲಿ ದರ್ಶನ್​, ರಾಕ್​ಲೈನ್​ ವೆಂಕಟೇಶ್​, ಜಗ್ಗೇಶ್​, ನಿಖಿಲ್​ ಕುಮಾರಸ್ವಾಮಿ ಅವರ ಫೋಟೋಗಳು ವೈರಲ್​ ಆಗಿವೆ. ಈ ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದಾರೆ ಎಂಬ ಆರೋಪ ಎದುರಾಗಿದೆ. ವೈರಲ್​ ಆಗಿರುವ ಫೋಟೋದ ಆಧಾರದ ಮೇಲೆ ದೂರು ನೀಡಲಾಗಿತ್ತು. ಅದರ ಅನ್ವಯ ಅರಣ್ಯಾಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಆರೋಪ ಎದುರಿಸುತ್ತಿರುವ ಎಲ್ಲರಿಗೂ ನೋಟೀಸ್​ ನೀಡಲಾಗುತ್ತಿದೆ. ಅಲ್ಲದೇ ತಪಾಸಣೆ ಕೂಡ ಮಾಡಲಾಗುತ್ತಿದೆ.

ಇದನ್ನೂ ಓದಿ: ಹುಲಿ ಉಗುರು ಲಾಕೆಟ್: ಜಗ್ಗೇಶ್​ ವಿರುದ್ಧ ದೂರು ದಾಖಲು, ಅರಣ್ಯಾಧಿಕಾರಿ ಹೇಳಿದ್ದೇನು?

ನಟ ಜಗ್ಗೇಶ್​ ಅವರು ಈ ಹಿಂದೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಬಳಿ ಇರುವ ಹುಲಿ ಉಗುರಿನ ಬಗ್ಗೆ ಮಾತನಾಡಿದ್ದರು. ಅದು ನಿಜವಾದ ಹುಲಿ ಉಗುರು ಎಂದು ಕೂಡ ಅವರು ಹೇಳಿದ್ದರು. ಆ ವಿಡಿಯೋ ಈಗ ವೈರಲ್​ ಆಗಿದೆ. ಆ ಹಿನ್ನೆಲೆಯಲ್ಲಿ ಅವರ ಮನೆಯಲ್ಲೂ ಅರಣ್ಯಾಧಿಕಾರಿಗಳು ತಪಾಸಣೆ ನಡೆಸುವ ಸಾಧ್ಯತೆ ದಟ್ಟವಾಗಿದೆ. ಸಿನಿಮಾ ನಟರು ಮಾತ್ರವಲ್ಲದೇ ಕೆಲವು ರಾಜಕಾರಣಿಗಳು ಕೂಡ ಹುಲಿ ಉಗುರು ಧರಿಸಿದ ಪ್ರಕರಣ ಬೆಳಕಿಗೆ ಬರುತ್ತಿದೆ.

ನಿಖಿಲ್​ ಕುಮಾರ್​ ಅವರ ಫೋಟೋ ಕೂಡ ವೈರಲ್​ ಆಗಿದೆ. ಆದರೆ ತಮ್ಮ ಬಳಿ ಇರುವುದು ನಿಜವಾದ ಹುಲಿ ಉಗುರು ಅಲ್ಲ ಎಂದು ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ‘ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು’ ಎಂದು ಪೋಸ್ಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Wed, 25 October 23

ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್