AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಗೌಡರ ಕುಟುಂಬದಲ್ಲಿ ಸಂಭ್ರಮ; ನಿಖಿಲ್ ಪುತ್ರನನ್ನು ನೋಡಲು ಆಸ್ಪತ್ರೆಗೆ ಬಂದ ಎಚ್.ಡಿ ದೇವೇಗೌಡ- ಚಿನ್ನಮ್ಮ ದಂಪತಿ

ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿಗೆ ಪುತ್ರನ ಜನನವಾಗಿರುವುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದಲ್ಲಿ ಸಂಭ್ರಮ ಹೆಚ್ಚಿಸಿದೆ. ಆಸ್ಪತ್ರೆಗೆ ಭೇಟಿ ನೀಡಿದ ದೇವೇಗೌಡ ದಂಪತಿ, ಸಂತಸದ ಕ್ಷಣಗಳಿಗೆ ಸಾಕ್ಷಿಯಾಗಿದ್ದಾರೆ.

ದೊಡ್ಡ ಗೌಡರ ಕುಟುಂಬದಲ್ಲಿ ಸಂಭ್ರಮ; ನಿಖಿಲ್ ಪುತ್ರನನ್ನು ನೋಡಲು ಆಸ್ಪತ್ರೆಗೆ ಬಂದ ಎಚ್.ಡಿ ದೇವೇಗೌಡ- ಚಿನ್ನಮ್ಮ ದಂಪತಿ
ಮಗುವನ್ನು ಮುದ್ದಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Sep 24, 2021 | 4:52 PM

Share

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಗಂಡು ಮಗುವಿನ ತಂದೆಯಾಗಿದ್ದಾರೆ. ಕುಟುಂಬಕ್ಕೆ ಪುತ್ರನ ಆಗಮನವಾಗಿರುವುದು ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ಹಾಗೂ ಚಿನ್ನಮ್ಮ ದಂಪತಿ ಆಸ್ಪತ್ರೆಗೆ ಭೇಟಿ ನೀಡಿ ಮಗು ಹಾಗೂ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ನಿಖಿಲ್ ಸಂಭ್ರಮದಲ್ಲೂ ಜೊತೆಯಾಗಿದ್ದಾರೆ. ಇದೀಗ ಅವರೀರ್ವರು ಆಸ್ಪತ್ರೆಗೆ ಭೇಟಿ ನೀಡಿರುವ ಚಿತ್ರಗಳು ಎಲ್ಲರ ಗಮನ ಸೆಳೆದಿವೆ.

HD Devegowda and Chinnamma

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚಿನ್ನಮ್ಮ ಆಸ್ಪತ್ರೆಗೆ ಆಗಮಿಸುತ್ತಿರುವುದು

ನಿಖಿಲ್ ತಂದೆಯಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಖುಷಿ ಹಂಚಿಕೊಂಡಿರುವ ಅವರು, ತನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ ಎಂದಿದ್ಧಾರೆ. ‘‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಹಂಚಿಕೊಂಡ ಟ್ವೀಟ್:

2020ರ ಏಪ್ರಿಲ್​ನಲ್ಲಿ ನಿಖಿಲ್ ಹಾಗೂ ರೇವತಿ ವಿವಾಹವಾಗಿದ್ದರು. ಪ್ರಸ್ತುತ ನಿಖಿಲ್ ಕುಮಾರಸ್ವಾಮಿ ರಾಜಕೀಯ ಹಾಗೂ ಸಿನಿಮಾ ರಂಗ ಎರಡಲ್ಲೂ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ:

Nikhil Kumaraswamy: ಮಗುವನ್ನು ಎತ್ತಿ ಮುದ್ದಾಡಿದ ನಿಖಿಲ್; ಪುತ್ರ ಹೇಗಿದ್ದಾನೆ?

ಮುದ್ದಾದ ಮಗುವಿನ ಜತೆ ಪೋಸ್​​ ಕೊಟ್ಟ ನಿಖಿಲ್​ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು

ವಿಜಯ್​ ದೇವರಕೊಂಡ ಆರಂಭಿಸಿದ್ರು ಮಲ್ಟಿಪ್ಲೆಕ್ಸ್​​; ಬೆಂಗಳೂರಲ್ಲಿ ಓಪನ್​ ಆಗೋದು ಯಾವಾಗ?

(Former Prime Minister HD Devegowda and his wife Chinnamma visits to Hospital to see Nikhil and Revathi s baby boy)

Published On - 3:26 pm, Fri, 24 September 21

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್