AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ

‘Always in our Heart, Sanchari Vijay, Gone Yet Not Forgotten’ ಎಂಬ ಸಾಲನ್ನು ಅಮೆರಿಕದ ಫ್ರಾಂಕ್ಲಿನ್​ ಥಿಯೇಟರ್ ಮುಂಭಾಗದಲ್ಲಿ 24 ಗಂಟೆಗಳ ಕಾಲ ಬಿತ್ತರಿಸಲಾಯಿತು. ಆ ಮೂಲಕ ಗೌರವ ಸಲ್ಲಿಸಲಾಯಿತು.

ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ
ಫ್ರಾಂಕ್ಲಿನ್​ ಥಿಯೇಟರ್​ನಿಂದ ಸಂಚಾರಿ ವಿಜಯ್​ಗೆ ನಮನ
ಮದನ್​ ಕುಮಾರ್​
|

Updated on: Jun 29, 2021 | 6:04 PM

Share

ನಟ ಸಂಚಾರಿ ವಿಜಯ್​ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿದ್ದಲ್ಲ. ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್​ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ದರು. ಈಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ ಕೂಡ ಅವರಿಗೆ ಗೌರವ ಸೂಚಿಸಿದೆ. ಫ್ರಾಂಕ್ಲಿನ್​ ಥಿಯೇಟರ್ ಮುಂದೆ ವಿಜಯ್​ ಅವರನ್ನು ಸ್ಮರಿಸುವ ಬರಹವನ್ನು ಬಿತ್ತರಿಸಲಾಗಿದೆ.

ಈ ಸುದ್ದಿಯನ್ನು ‘ನಾನು ಅವನಲ್ಲ ಅವಳು’ ಚಿತ್ರದ ನಿರ್ದೇಶಕ ಬಿ.ಎಸ್​. ಲಿಂಗದೇವರು ಅವರು ಹಂಚಿಕೊಂಡಿದ್ದಾರೆ. ‘Always in our Heart, Sanchari Vijay, Gone Yet Not Forgotten’ ಎಂಬ ಸಾಲನ್ನು ಫ್ರಾಂಕ್ಲಿನ್​ ಥಿಯೇಟರ್ ಮುಂಭಾಗದಲ್ಲಿ 24 ಗಂಟೆಗಳ ಕಾಲ ಬಿತ್ತರಿಸಲಾಯಿತು. ಇದು ಇಡೀ ಕನ್ನಡಿಗರಿಗೆ ಹೆಮ್ಮೆ ತರುವಂತಹ ವಿಚಾರ. ಆದರೆ ಇಂದು ಸಂಚಾರಿ ವಿಜಯ್​ ಅವರು ನಮ್ಮ ಜೊತೆ ಇಲ್ಲ ಎಂಬುದು ನೋವಿನ ಸಂಗತಿ.

‘ಈ ಮೆಸೇಜ್​ ಪ್ರದರ್ಶನ ಮಾಡುವ ಮೂಲಕ ಸಂಚಾರಿ ವಿಜಯ್​ ಅವರಿಗೆ ಅಮೆರಿಕದ ಫ್ರಾಂಕ್ಲಿನ್​ ಥಿಯೇಟರ್​ನವರು ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಅದಕ್ಕೆ ಕಾರಣಕರ್ತರಾದ ರವಿ ಕಶ್ಯಪ್ ಅವರಿಗೆ ವಂದನೆಗಳು’ ಎಂದು ಲಿಂಗದೇವರು ಹೇಳಿದ್ದಾರೆ.

ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು.

ಇದನ್ನೂ ಓದಿ:

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ನಟ ಸಂಚಾರಿ ವಿಜಯ್​ಗೆ ಜಾತಿ ಭೇದ ಮಾಡಲಾಗಿತ್ತು ಎಂಬ ಆರೋಪ ಸುಳ್ಳು; ಸಹೋದರ ವಿರೂಪಾಕ್ಷ ಸ್ಪಷ್ಟನೆ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ