AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ

‘Always in our Heart, Sanchari Vijay, Gone Yet Not Forgotten’ ಎಂಬ ಸಾಲನ್ನು ಅಮೆರಿಕದ ಫ್ರಾಂಕ್ಲಿನ್​ ಥಿಯೇಟರ್ ಮುಂಭಾಗದಲ್ಲಿ 24 ಗಂಟೆಗಳ ಕಾಲ ಬಿತ್ತರಿಸಲಾಯಿತು. ಆ ಮೂಲಕ ಗೌರವ ಸಲ್ಲಿಸಲಾಯಿತು.

ಅಮೆರಿಕದಲ್ಲಿ ಸಂಚಾರಿ ವಿಜಯ್​ಗೆ ಗೌರವ; ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ನಿಂದ ನಮನ
ಫ್ರಾಂಕ್ಲಿನ್​ ಥಿಯೇಟರ್​ನಿಂದ ಸಂಚಾರಿ ವಿಜಯ್​ಗೆ ನಮನ
ಮದನ್​ ಕುಮಾರ್​
|

Updated on: Jun 29, 2021 | 6:04 PM

Share

ನಟ ಸಂಚಾರಿ ವಿಜಯ್​ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿದ್ದಲ್ಲ. ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್​ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ದರು. ಈಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್​ ಥಿಯೇಟರ್​ ಕೂಡ ಅವರಿಗೆ ಗೌರವ ಸೂಚಿಸಿದೆ. ಫ್ರಾಂಕ್ಲಿನ್​ ಥಿಯೇಟರ್ ಮುಂದೆ ವಿಜಯ್​ ಅವರನ್ನು ಸ್ಮರಿಸುವ ಬರಹವನ್ನು ಬಿತ್ತರಿಸಲಾಗಿದೆ.

ಈ ಸುದ್ದಿಯನ್ನು ‘ನಾನು ಅವನಲ್ಲ ಅವಳು’ ಚಿತ್ರದ ನಿರ್ದೇಶಕ ಬಿ.ಎಸ್​. ಲಿಂಗದೇವರು ಅವರು ಹಂಚಿಕೊಂಡಿದ್ದಾರೆ. ‘Always in our Heart, Sanchari Vijay, Gone Yet Not Forgotten’ ಎಂಬ ಸಾಲನ್ನು ಫ್ರಾಂಕ್ಲಿನ್​ ಥಿಯೇಟರ್ ಮುಂಭಾಗದಲ್ಲಿ 24 ಗಂಟೆಗಳ ಕಾಲ ಬಿತ್ತರಿಸಲಾಯಿತು. ಇದು ಇಡೀ ಕನ್ನಡಿಗರಿಗೆ ಹೆಮ್ಮೆ ತರುವಂತಹ ವಿಚಾರ. ಆದರೆ ಇಂದು ಸಂಚಾರಿ ವಿಜಯ್​ ಅವರು ನಮ್ಮ ಜೊತೆ ಇಲ್ಲ ಎಂಬುದು ನೋವಿನ ಸಂಗತಿ.

‘ಈ ಮೆಸೇಜ್​ ಪ್ರದರ್ಶನ ಮಾಡುವ ಮೂಲಕ ಸಂಚಾರಿ ವಿಜಯ್​ ಅವರಿಗೆ ಅಮೆರಿಕದ ಫ್ರಾಂಕ್ಲಿನ್​ ಥಿಯೇಟರ್​ನವರು ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಅದಕ್ಕೆ ಕಾರಣಕರ್ತರಾದ ರವಿ ಕಶ್ಯಪ್ ಅವರಿಗೆ ವಂದನೆಗಳು’ ಎಂದು ಲಿಂಗದೇವರು ಹೇಳಿದ್ದಾರೆ.

ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು.

ಇದನ್ನೂ ಓದಿ:

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ನಟ ಸಂಚಾರಿ ವಿಜಯ್​ಗೆ ಜಾತಿ ಭೇದ ಮಾಡಲಾಗಿತ್ತು ಎಂಬ ಆರೋಪ ಸುಳ್ಳು; ಸಹೋದರ ವಿರೂಪಾಕ್ಷ ಸ್ಪಷ್ಟನೆ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು