AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಗೆಳೆತನದ ಕಂಪು; ಕೆಲವು ಉಳಿದವು, ಕೆಲವು ಅಳಿದವು

Friendship Day: ಗೆಳೆತನಕ್ಕೆ ಮೀಸಲಾದ ಸ್ನೇಹಿತರ ದಿನಾಚರಣೆ ಇಂದು (ಆಗಸ್ಟ್ 04). ಕನ್ನಡ ಚಿತ್ರರಂಗದಲ್ಲಿ ಹಲವು ಉತ್ತಮ ಸ್ನೇಹಿತರಿದ್ದಾರೆ. ಒಳ್ಳೆಯ ಗೆಳೆತನದ ಜೋಡಿಗಳಿವೆ. ಅವುಗಳಲ್ಲಿ ಕೆಲವರ ಹೆಸರುಗಳು ಇಲ್ಲಿವೆ.

ಸ್ಯಾಂಡಲ್​ವುಡ್​ನಲ್ಲಿ ಗೆಳೆತನದ ಕಂಪು; ಕೆಲವು ಉಳಿದವು, ಕೆಲವು ಅಳಿದವು
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 04, 2024 | 7:53 AM

Share

ಇಂದು (ಆಗಸ್ಟ್ 4) ಫ್ರೆಂಡ್​ಶಿಫ್​ ಡೇ. ಗೆಳೆತನ ಅನ್ನೋದು ಕೇವಲ ಸಾಮಾನ್ಯ ವ್ಯಕ್ತಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಅನೇಕ ಹೀರೋ-ಹೀರೋಯಿನ್ಗಳ ನಡುವೆ ಉತ್ತಮ ಗೆಳೆತನ ಇದೆ. ಎಷ್ಟೇ ಅಡೆ-ತಡೆ ಬಂದರೂ ಜಗ್ಗದೆ ನಿಂತ ಸ್ಯಾಂಡಲ್ವುಡ್ನ ಅನೇಕ ಗೆಳೆತನ ಇದೆ. ಇನ್ನೂ ಕೆಲವು ಗೆಳೆತನಗಳು ಮುರಿದು ಹೋಗಿವೆ. ರಾಜ್ಕುಮಾರ್ ಅಜಾತಶತ್ರು ಎನಿಸಿಕೊಂಡಿದ್ದರು. ಇಂಡಸ್ಟ್ರಿಯ ಎಲ್ಲರ ಜೊತೆಯೂ ಅವರಿಗೆ ಗೆಳೆತನ ಇತ್ತು. ಬೆಸ್ಟ್ ಫ್ರೆಂಡ್ಸ್ ಎನಿಸಿಕೊಂಡ ಕನ್ನಡ ಸ್ಟಾರ್​ಗಳ ಬಗ್ಗೆ ಇಲ್ಲಿದೆ ಮಾಹಿತಿ.

ವಿಷ್ಣುವರ್ಧನ್ ಹಾಗೂ ಅಂಬರೀಷ್

ವಿಷ್ಣುವರ್ಧನ್ ಹಾಗೂ ಅಂಬರೀಷ್ ಅವರು ಸ್ಯಾಂಡಲ್ವುಡ್ನ ಬೆಸ್ಟ್ ಬಡ್ಡೀಸ್ ಎನಿಸಿಕೊಂಡಿದ್ದರು. ‘ನಾಗರಹಾವು’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದರು. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆಯಿತು. ಮೊದಲು ವಿಷ್ಣುವರ್ಧನ್ ಮೃತಪಟ್ಟರು. ಇದಾದ ಕೆಲ ವರ್ಷಗಳಲ್ಲಿ ಅಂಬರೀಷ್ ನಿಧನ ಹೊಂದಿದರು. ಆದರೆ, ಇವರ ಗೆಳೆತನ ಈಗಲೂ ಮಾದರಿ.

ಸುದೀಪ್ ಹಾಗೂ ದರ್ಶನ್

ಸುದೀಪ್ ಹಾಗೂ ದರ್ಶನ್ ಅವರು ಒಳ್ಳೆಯ ಗೆಳೆಯರು ಎನಿಸಿಕೊಂಡಿದ್ದರು. ಇವರ ಮಧ್ಯೆ ಆಪ್ತತೆ ಇತ್ತು. ಆದರೆ, ಇಬ್ಬರೂ ಈಗ ಬೇರೆ ಆಗಿದ್ದಾರೆ. ಕೆಲವು ಕಾರಣಗಳಿಂದ ಒಬ್ಬರ ಮುಖವನ್ನು ಒಬ್ಬರು ನೋಡಿಕೊಳ್ಳುತ್ತಿಲ್ಲ.

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ

‘ಉಪೇಂದ್ರ’ ನಿರ್ದೇಶನದ ‘ಓಂ’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಗಮನ ಸೆಳೆಯಿತು. ಈ ಚಿತ್ರದಿಂದ ಇಬ್ಬರ ಮಧ್ಯೆ ಫ್ರೆಂಡ್ಶಿಪ್ ಬೆಳೆದಿದ್ದು, ಈಗಲೂ ಮುಂದುವರಿದಿದೆ. ‘ಕಬ್ಜ’ ಸಿನಿಮಾದಲ್ಲಿ ಇವರು ಮತ್ತೆ ಒಂದಾಗಿದ್ದರು.

ಯಶ್ ಹಾಗೂ ಪುನೀತ್ ರಾಜ್​ಕುಮಾರ್

ಯಶ್ ಹಾಗೂ ಪುನೀತ್ ರಾಜ್ಕುಮಾರ್ ಗೆಳೆತನ ಅನೇಕರಿಗ ಮಾದರಿ. ಆದರೆ, ಪುನೀತ್ ಇಂದು ನಮ್ಮ ಜೊತೆಗಿಲ್ಲ. ಆದರೆ, ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕೆಲಸವನ್ನು ಯಶ್ ಅನೇಕ ಬಾರಿ ಮಾಡಿದ್ದಾರೆ.

ಶರಣ್ ಹಾಗೂ ನಂದಕಿಶೋರ್

ಕಾಮಿಡಿ ಸಿನಿಮಾಗಳ ಮೂಲಕ ಗಮನ ಸೆಳೆದ ಶರಣ್ ಅವರು ನಿರ್ದೇಶಕ ನಂದಕಿಶೋರ್ ಜೊತೆ ಒಳ್ಳೆಯ ಗೆಳೆತನ ಹೊಂದಿದ್ದಾರೆ. ಇವರ ಗೆಳೆತನ ಇಂದು ನಿನ್ನೆಯದಲ್ಲ. ಸಣ್ಣ ವಯಸ್ಸಿನಿಂದ ಇಬ್ಬರೂ ಗೆಳೆಯರು. ‘ವಿಕ್ಟರಿ’ ಸಿನಿಮಾನ ನಂದ ಕಿಶೋರ್ ನಿರ್ದೇಶನ ಮಾಡಿದರು. ಶರಣ್ ಈ ಚಿತ್ರಕ್ಕೆ ಹೀರೋ ಆಗಿದ್ದರು.

ಯೋಗಿ ಹಾಗೂ ದಿಗಂತ್

ಲೂಸ್ ಮಾದ ಯೋಗಿ ಅವರು ದಿಗಂತ್ ಜೊತೆ ಈಗಲೂ ಗೆಳೆತನ ಹೊಂದಿದ್ದಾರೆ. ಅವರು ಇಂಡಸ್ಟ್ರಿಗೆ ಬಂದಾಗಿನಿಂದ ಗೆಳೆಯರು. ಇತ್ತೀಚೆಗೆ ಇವರು ‘ಬ್ಯಾಚುಲರ್ ಪಾರ್ಟಿ’ ಹೆಸರಿನ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.

ಗಣೇಶ್ ಹಾಗೂ ದುನಿಯಾ ವಿಜಯ್

ಗಣೇಶ್ ಹಾಗೂ ದುನಿಯಾ ವಿಜಯ್ ತಮ್ಮ ಸ್ವಂತ ಶ್ರಮದಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಇಬ್ಬರೂ ಚಿತ್ರರಂಗದಲ್ಲಿ ಸಾಕಷ್ಟು ಸೈಕಲ್ ಹೊಡೆದು ಸ್ಟಾರ್ ಹೀರೋಗಳು ಎನಿಸಿಕೊಂಡಿದ್ದಾರೆ. ಇಬ್ಬರ ಮಧ್ಯೆ ಮೊದಲು ಬೆಳೆದ ಫ್ರೆಂಡ್​ಶಿಫ್​ ಈಗಲೂ ಹಾಗೆಯೇ ಇದೆ.

ಯಶ್ ಹಾಗೂ ರಾಧಿಕಾ ಪಂಡಿತ್

ಯಶ್ ಹಾಗೂ ರಾಧಿಕಾ ಪಂಡಿತ್ ಧಾರಾವಾಹಿ ಸಮಯದಿಂದ ಒಳ್ಳೆಯ ಗೆಳೆಯರು. ಆ ಬಳಿಕ ಇವರ ಗೆಳೆತನ ಪ್ರೀತಿಗೆ ತಿರುಗಿತು. ಈಗ ಇಬ್ಬರೂ ಪತಿ-ಪತ್ನಿ ಆಗಿದ್ದಾರೆ. ಆದರೂ ಇವರ ಮಧ್ಯೆ ಗೆಳೆತನ ಇದೆ.

ಚಿಕ್ಕಣ್ಣ ಹಾಗೂ ಕುರಿ ಪ್ರತಾಪ್

ಕಾಮಿಡಿ ಶೋಗಳ ಮೂಲಕ, ಸಿನಿಮಾಗಳ ಮೂಲಕ ಚಿಕ್ಕಣ್ಣ ಹಾಗೂ ಕುರಿ ಪ್ರತಾಪ್ ಎಲ್ಲರನ್ನೂ ನಗಿಸಿದ್ದಾರೆ. ಇವರು ಸ್ಯಾಂಡಲ್ವುಡ್ನಲ್ಲಿ ಒಳ್ಳೆಯ ಗೆಳೆತನ ಹೊಂದಿದ್ದಾರೆ.

ಸುದೀಪ್ ಹಾಗೂ ಅರುಣ್ ಸಾಗರ್

ಸುದೀಪ್ ಹಾಗೂ ಅರುಣ್ ಸಾಗರ್ ಗೆಳೆತನ ತುಂಬಾ ಹಿಂದಿನಿಂದಲೂ ಇದೆ. ಇವರು ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 1’ರಲ್ಲಿ ಅರುಣ್ ಸಾಗರ್ ಫಿನಾಲೆ ತಲುಪಿದ್ದರು. ಸುದೀಪ್ ಗೆಳೆಯ ಎನ್ನುವ ಕಾರಣಕ್ಕೆ ಅವರಿಗೆ ಫಿನಾಲೆವರೆಗೆ ಬರೋಕೆ ಸಾಧ್ಯವಾಯಿತು ಎಂದು ಅನೇಕರು ಮಾತನಾಡಿಕೊಂಡಿದ್ದೂ ಇದೆ.

ವಿಷ್ಣುವರ್ಧನ್ ಹಾಗೂ ದ್ವಾರಕೀಶ್

ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಅವರ ಮಧ್ಯೆ ಗೆಳೆತನ ಇದೆ. ಆದರೆ, ಇವರು ಕಾರಣಾಂತರಗಳಿಂದ ಬೇರೆ ಆದರು. ಆ ಬಳಿಕ ಮತ್ತೆ ಒಂದಾದರು. ಈಗ ಇಬ್ಬರೂ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?