ಪುನೀತ್​ ನಿಧನದಿಂದ ಸ್ಪಂದನಾ ಮರಣದ ತನಕ ಡಾ. ರಾಜ್​ ಕುಟುಂಬದಲ್ಲಿ ಒಂದರ ಹಿಂದೊಂದು ದುರಂತ

Spandana Vijay Raghavendra Death: ರಾಜ್​ ಕುಟುಂಬದವರು ಒಂದು ದುಃಖವನ್ನು ಮರೆಯುವ ಮುನ್ನವೇ ಮತ್ತೊಂದು ಆಘಾತ ಎದುರಾಗುತ್ತಿರುವುದು ದುರದೃಷ್ಟದ ಸಂಗತಿ. ಪುನೀತ್​ ರಾಜ್​ಕುಮಾರ್​ ನಿಧನದಿಂದ ಈವರೆಗೆ ಸರಣಿ ದುರಂತಗಳು ಸಂಭವಿಸಿವೆ.

ಪುನೀತ್​ ನಿಧನದಿಂದ ಸ್ಪಂದನಾ ಮರಣದ ತನಕ ಡಾ. ರಾಜ್​ ಕುಟುಂಬದಲ್ಲಿ ಒಂದರ ಹಿಂದೊಂದು ದುರಂತ
ಡಾ. ರಾಜ್​ ಕುಟುಂಬದಲ್ಲಿ ಒಂದರ ಹಿಂದೊಂದು ದುರಂತ
Follow us
|

Updated on: Aug 07, 2023 | 2:12 PM

ಖ್ಯಾತ ನಟ ವಿಜಯ್​ ರಾಘವೇಂದ್ರ ಅವರ ಪತ್ನಿ ಸ್ಪಂದನಾ (Spandana Vijay Raghavendra) ಅವರು ನಿಧನ ಹೊಂದಿರುವುದು ಚಿತ್ರರಂಗಕ್ಕೆ ನೋವು ತಂದಿದೆ. ಅಭಿಮಾನಿಗಳು ಕೂಡ ಕಂಬನಿ ಮಿಡಿಯುತ್ತಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬಕ್ಕೆ ವಿಜಯ್​ ರಾಘವೇಂದ್ರ (Vijay Raghavendra) ಅವರು ಹತ್ತಿರದ ಸಂಬಂಧಿ. ಪಾರ್ವತಮ್ಮ ರಾಜ್​ಕುಮಾರ್​ ಅವರ ಸಹೋದರನ ಮಕ್ಕಳು ವಿಜಯ್​ ರಾಘವೇಂದ್ರ ಮತ್ತು ಶ್ರೀಮುರಳಿ. ರಾಜ್​ ಕುಟುಂಬಕ್ಕೆ ಒಂದರ ಹಿಂದೊಂದು ಆಘಾತ ಎದುರಾಗುತ್ತಲೇ ಇದೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ನಿಧನದಿಂದ ಸ್ಪಂದನಾ ಮರಣದ ತನಕ ಸರಣಿ ದುರಂತ ಸಂಭವಿಸಿದೆ. ಇದು ಅವರ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ. ಒಂದು ದುಃಖವನ್ನು ಮರೆಯುವ ಮುನ್ನವೇ ಮತ್ತೊಂದು ಆಘಾತ ಎದುರಾಗುತ್ತಿರುವುದು ನಿಜಕ್ಕೂ ದುರದೃಷ್ಟದ ಸಂಗತಿ. ಪುನೀತ್​ ರಾಜ್​ಕುಮಾರ್​ ನಿಧನದಿಂದ ಈವರೆಗೆ ಏನೆಲ್ಲ ಏಯಿತು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ಪುನೀತ್​ ರಾಜ್​ಕುಮಾರ್​ ನಿಧನ (2021 ಅಕ್ಟೋಬರ್​ 29):

ಆ ದಿನವನ್ನು ಅಪ್ಪು ಅಭಿಮಾನಿಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ. ಫಿಟ್ನೆಸ್​ಗೆ ತುಂಬ ಮಹತ್ವ ನೀಡುತ್ತಿದ್ದ ಪುನೀತ್​ ರಾಜ್​ಕುಮಾರ್ ಅವರು ಹೃದಯಾಘಾತದಿಂದ ನಿಧನ ಹೊಂದಿದಾಗ ಯಾರಿಗೂ ನಂಬಲು ಸಾಧ್ಯವಾಗಲಿಲ್ಲ. ಅವರ ನಿಧನದಿಂದ ಅಸಂಖ್ಯಾತ ಅಭಿಮಾನಿಗಳಿಗೆ ದಿಕ್ಕೇ ತೋಚದಂತಾಯಿತು. ಆ ನೋವು ಎಂದಿಗೂ ಮರೆಯಾಗುವಂಥದ್ದಲ್ಲ.

ಇದನ್ನೂ ಓದಿ: ವಿಜಯ್-ಸ್ಪಂದನಾ ಪ್ರೇಮಕ್ಕೆ ಮುನ್ನಡಿ ಹಾಡಿತ್ತು ಮಲ್ಲೇಶ್ವರದ ಕಾಫಿ ಡೇ

 ಅಶ್ವಿನಿ ತಂದೆ ರೇವನಾಥ್​ ಮರಣ: (2022 ಫೆಬ್ರವರಿ 20):

ಪುನೀತ್​ ರಾಜ್​ಕುಮಾರ್​ ಅವರು ನಿಧನರಾದ ಬಳಿಕ ಅಶ್ವಿನಿ ಅವರು ಅನುಭವಿಸಿದ ನೋವನ್ನು ಪದಗಳಲ್ಲಿ ವಿವರಿಸಲು ಆಗದು. ಅದಾಗಿ ಕೆಲವೇ ತಿಂಗಳು ಕಳೆಯುವುದರಲ್ಲಿ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಉಂಟಾಯಿತು. ಅಶ್ವಿನಿ ಅವರ ತಂದೆ ರೇವನಾಥ್​ ಅವರು ಫೆಬ್ರವರಿ 20ರಂದು ನಿಧನರಾದರು. ಅಶ್ವಿನಿಯವರು ಪತಿಯನ್ನು ಕಳೆದುಕೊಂಡ ನೋವಿನ ಬೆನ್ನಲ್ಲೇ ತಂದೆಯನ್ನೂ ಕಳೆದುಕೊಳ್ಳುವಂತಾಗಿದ್ದಕ್ಕೆ ಅಭಿಮಾನಿಗಳು ವಿಧಿಯನ್ನು ಶಪಿಸಿದರು.

ಇದನ್ನೂ ಓದಿ: ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ

ಕಾಲು ಕಳೆದುಕೊಂಡ ಸೂರಜ್​ (2023 ಜೂನ್​ 24):

ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಮಗ ಸೂರಜ್​ ಅವರು ಕೆಲವು ವಾರಗಳ ಹಿಂದೆ ಸಂಭವಿಸಿದೆ ಗಂಭೀರ ಅಪಘಾತದಲ್ಲಿ ಕಾಲು ಕಳೆದುಕೊಂಡರು. ಜೂನ್​ 24ರಂದು ಬೈಕ್​ನಲ್ಲಿ ಪ್ರಯಾಣ ಮಾಡುತ್ತಿದ್ದ ಅವರಿಗೆ ಲಾರಿಯೊಂದು ಡಿಕ್ಕಿ ಹೊಡೆಯಿತು. ಆ ಅಪಘಾತದಲ್ಲಿ ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಯಿತು. ಅದರ ಪರಿಣಾಮವಾಗಿ ಅವರ ಕಾಲನ್ನು ವೈದ್ಯರು ಕತ್ತರಿಸಬೇಕಾಯಿತು. ಹೀರೋ ಆಗಬೇಕು ಎಂದು ಕನಸು ಕಂಡಿದ್ದ ಸೂರಜ್​ ಅವರಿಗೆ ಈ ಘಟನೆಯಿಂದ ಆದ ನಷ್ಟ ಅಷ್ಟಿಷ್ಟಲ್ಲ.

ಇದನ್ನೂ ಓದಿ: ವಿದೇಶದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ನಿಧನ, ಸ್ಪಂದನಾ ಇಲ್ಲದ ಬೆಂಗಳೂರಿನ ಮನೆಯಲ್ಲಿ ನೀರವ ಮೌನ

ಹೃದಯಾಘಾತದಿಂದ ಸ್ಪಂದನಾ ನಿಧನ: (2023 ಆಗಸ್ಟ್​ 06):

ವಿಜಯ್​ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಫ್ಯಾಮಿಲಿ ಸಮೇತ ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಪ್ರಯೋಜನ ಆಗಲಿಲ್ಲ. ಅವರ ನಿಧನದಿಂದ ಕುಟುಂಬದಲ್ಲಿ ಶೋಕ ಆವರಿಸಿದೆ. ವಿಜಯ್​ ರಾಘವೇಂದ್ರ ಅವರಿಗೆ ಎಲ್ಲರೂ ಸಾಂತ್ವನ ಹೇಳುತ್ತಿದ್ದಾರೆ. ಸ್ಪಂದನಾ ಅವರನ್ನು ತುಂಬ ಇಷ್ಟಪಟ್ಟು ವಿಜಯ್​ ರಾಘವೇಂದ್ರ ಮದುವೆ ಆಗಿದ್ದರು. ಪತ್ನಿಯ ಅಗಲಿಕೆಯಿಂದ ಅವರೀಗ ಕಣ್ಣೀರು ಹಾಕುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು