AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಪುನೀತ್ ಪ್ರೇರಣೆ; ಇಬ್ಬರು ದಂಪತಿಗಳು ದೇಹದಾನಕ್ಕೆ ಹಾಗೂ 52 ಜನರು ನೇತ್ರದಾನಕ್ಕೆ ನೋಂದಣಿ

Puneeth Rajkumar: ನಟ ಪುನೀತ್ ರಾಜಕುಮಾರ್ ಅವರ ಪ್ರೇರಣೆಯಿಂದ ಯಾದಗಿರಿಯಲ್ಲಿ ಎರಡು ಜೋಡಿಗಳು ದೇಹದಾನಕ್ಕೆ ಹಾ ಗೂ 52 ಜನೆರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ.

ಯಾದಗಿರಿ: ಪುನೀತ್ ಪ್ರೇರಣೆ; ಇಬ್ಬರು ದಂಪತಿಗಳು ದೇಹದಾನಕ್ಕೆ ಹಾಗೂ 52 ಜನರು ನೇತ್ರದಾನಕ್ಕೆ ನೋಂದಣಿ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Nov 07, 2021 | 2:46 PM

Share

ಯಾದಗಿರಿ: ನಟ ಪುನೀತ್ ರಾಜಕುಮಾರ್ ತಮ್ಮ ನಿಧನದ ನಂತರ ನೇತ್ರದಾನ ಮಾಡಿ ಸಾರ್ಥಕತೆ ಮೆರೆದಿದ್ದರು. ಇದು ಅವರ ಅಪಾರ ಅಭಿಮಾನಿ ಬಳಗಕ್ಕೆ ಸ್ಫೂರ್ತಿ ತುಂಬಿದ್ದು, ರಾಜ್ಯದೆಲ್ಲೆಡೆ ನೇತ್ರದಾನಕ್ಕೆ ಜನರು ನೋಂದಾಯಿಸುತ್ತಿದ್ದಾರೆ. ಯಾದಗಿರಿಯಲ್ಲಿ ಎರಡು ಜೋಡಿಗಳು ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಎಲ್ಲರಿಗೂ ಆದರ್ಶವಾಗಿದ್ದಾರೆ. ನಟ ಪುನೀತ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇಹ ದಾನ ಮಾಡುವುದಾಗಿ ಅವರು ನೋಂದಣಿ ಮಾಡಿಸಿದ್ದಾರೆ. ಹನುಮಯ್ಯ ದಂಪತಿ ಹಾಗೂ ಮಲ್ಲಿಕಾರ್ಜುನ ದಂಪತಿಗಳು ದೇಹದಾನ ಮಾಡುವುದಾಗಿ ತಿಳಿಸಿದ್ದಾರೆ.

ಯಾದಗಿರಿ ನಿವಾಸಿಗಳಾದ ಹನುಮಯ್ಯ ದಂಪತಿ ಹಾಗೂ ಮಲ್ಲಿಕಾರ್ಜುನ ದಂಪತಿಗಳು, ನಗರದ ಗಂಜ್ ಬಳಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದೇಹದಾನ ಮಾಡುವುದಾಗಿ ನೋಂದಣಿ ಮಾಡಿಸಿದ್ದಾರೆ. ರಿಮ್ಸ್ ಆಸ್ಪತ್ರೆಗೆ ದೇಹದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ. ಇದರೊಂದಿಗೆ 52 ಜನ ಪುನೀತ್ ಅಭಿಮಾನಿಗಳು ನೇತ್ರದಾನಕ್ಕೆ ನೋಂದಾಯಿಸಿದ್ಧಾರೆ. ಈ ಮೂಲಕ ಯಾದಗಿರಿಯ ಅಭಿಮಾನಿಗಳು ಮಾದರಿಯಾಗಿದ್ದಾರೆ.

ಪುನೀತ್ ಹಾಗೂ ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30 ರಷ್ಟು ಹೆಚ್ಚಳ ಬೆಂಗಳೂರು: ರಾಜ್ಯದಲ್ಲಿ ಪುನೀತ್ ರಾಜಕುಮಾರ್ ಹಾಗೂ ಸಂಚಾರಿ ವಿಜಯ್ ನೇತ್ರದಾನ ಮಾಡಿದ ನಂತರ ಜನರಲ್ಲಿ ಈ ಕುರಿತು ಜಾಗೃತಿ ಹೆಚ್ಚಾಗಿದೆ. ಪರಿಣಾಮವಾಗಿ, ನೇತ್ರದಾನಕ್ಕೆ ಮುಂದಾಗುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತಂತೆ ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ಹೇಳಿಕೆ ನೀಡಿದ್ದು, ‘‘ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಸಂಚಾರಿ ವಿಜಯ್, ಪುನಿತ್ ನಿಧನದ ಬಳಿಕ ಹೆಚ್ಚಾಗಿದೆ. ನೇತ್ರದಾನ ಮಾಡಲು ಯುವಕರು ಮುಂದೆ ಬರುತ್ತಿದ್ದಾರೆ. ಇದರೊಂದಿಗೆ ನಾವು ಕೂಡ ಪಾಕ್ಷಿಕ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಪರಿಣಾಮವಾಗಿ ನೇತ್ರದಾನ ಮಾಡುವವರ ಸಂಖ್ಯೆ ಶೇ.20-30ರಷ್ಟು ಹೆಚ್ಚಳವಾಗಿದೆ’’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

ಅನುಷ್ಕಾ ಶೆಟ್ಟಿ ಜನ್ಮದಿನಕ್ಕೆ ಸರ್​​ಪ್ರೈಸ್ ಗಿಫ್ಟ್

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ