AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರವಿ ಬೋಪಣ್ಣ’, ‘ಗಾಳಿಪಟ 2’ ರಿಲೀಸ್​; ಕನ್ನಡದ ಸಿನಿ ಪ್ರೇಕ್ಷಕರಿಗೆ ಡಬಲ್​ ಧಮಾಕಾ

Gaalipata 2 | Ravi Bopanna: ‘ರವಿ ಬೋಪಣ್ಣ’ ಹಾಗೂ ‘ಗಾಳಿಪಟ 2’ ಸಿನಿಮಾಗಳು ಇಂದು (ಆಗಸ್ಟ್ 12) ರಾಜ್ಯಾದ್ಯಂತ ಬಿಡುಗಡೆ ಆಗಿವೆ. ಈ ಎರಡೂ ಸಿನಿಮಾಗಳು ಬೇರೆ ಬೇರೆ ಕಾರಣದಿಂದ ನಿರೀಕ್ಷೆ ಮೂಡಿಸಿವೆ.

‘ರವಿ ಬೋಪಣ್ಣ’, ‘ಗಾಳಿಪಟ 2’ ರಿಲೀಸ್​; ಕನ್ನಡದ ಸಿನಿ ಪ್ರೇಕ್ಷಕರಿಗೆ ಡಬಲ್​ ಧಮಾಕಾ
ಗಣೇಶ್​, ರವಿಚಂದ್ರನ್​
TV9 Web
| Edited By: |

Updated on:Aug 12, 2022 | 7:53 AM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಗಾಳಿಪಟ 2’ (Gaalipata 2) ಚಿತ್ರ ಇಂದು (ಆಗಸ್ಟ್​ 12) ರಿಲೀಸ್​ ಆಗಿದೆ. ಅದರ ಜೊತೆಗೆ ರವಿಚಂದ್ರನ್​ ಅಭಿನಯದ ‘ರವಿ ಬೋಪಣ್ಣ’ (Ravi Bopanna) ಸಿನಿಮಾ ಕೂಡ ತೆರೆ ಕಂಡಿದೆ. ಹಾಗಾಗಿ ಈ ವಾರ ಸಿನಿಪ್ರಿಯರಿಗೆ ಡಬಲ್​ ಧಮಾಕಾ. ಹಲವು ಕಾರಣದಿಂದ ಈ ಚಿತ್ರಗಳ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘ಗಾಳಿಪಟ 2’ ಚಿತ್ರಕ್ಕೆ ಯೋಗರಾಜ್​ ಭಟ್​ ನಿರ್ದೇಶನ ಮಾಡಿದ್ದಾರೆ. ರವಿಚಂದ್ರನ್​ ಅವರ ನಿರ್ದೇಶನದಲ್ಲಿ ‘ರವಿ ಬೋಪಣ್ಣ’ ಸಿನಿಮಾ ಮೂಡಿಬಂದಿದೆ. ಈ ಎರಡೂ ಸಿನಿಮಾಗಳು ಬೇರೆ ಬೇರೆ ಪ್ರಕಾರದಲ್ಲಿವೆ. ‘ಗೋಲ್ಡನ್​ ಸ್ಟಾರ್’​ ಗಣೇಶ್​ (Golden Star Ganesh) ಹಾಗೂ ರವಿಚಂದ್ರನ್​ ಅಭಿಮಾನಿಗಳು ಈ ಸಿನಿಮಾಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಸಮಯ ಬಂದಿದೆ.

ಜನರ ಪಾಲಿಗೆ ‘ಗಾಳಿಪಟ’ ಸಿನಿಮಾ ಎಂದರೆ ಒಂದು ಎಮೋಷನ್​. ಈಗ ಆ ಚಿತ್ರದ ಎರಡನೇ ಪಾರ್ಟ್​ ಬಂದಿದೆ. ಗಣೇಶ್​ ಮತ್ತು ದಿಗಂತ್​ ಜೊತೆಗೆ ಈ ಬಾರಿ ಪಾತ್ರವರ್ಗದಲ್ಲಿ ಪವನ್​ ಕುಮಾರ್​ ಸೇರಿಕೊಂಡಿದ್ದಾರೆ. ನಾಯಕಿಯರ ಸ್ಥಾನದಲ್ಲಿ ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತಾ ಮೆನನ್​ ಇದ್ದಾರೆ. ಪೋಷಕ ಪಾತ್ರದಲ್ಲಿ ಕಲಾವಿದ ದಂಡೇ ನೆರೆದಿದೆ. ಅನಂತ್​ ನಾಗ್​, ಸುಧಾ ಬೆಳವಾಡಿ, ರಂಗಾಯಣ ರಘು, ಶ್ರೀನಾಥ್​, ಪದ್ಮಜಾ ರಾವ್​, ನಿಶ್ವಿಕಾ ನಾಯ್ಡು ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹಾಡುಗಳ ಮೂಲಕ ‘ಗಾಳಿಪಟ 2’ ಸಿನಿಮಾ ಗಮನ ಸೆಳೆದಿದೆ. ‘ನೀನು ಬಗೆಹರಿದ ಹಾಡು..’, ‘ದೇವ್ಲೆ ದೇವ್ಲೆ..’, ‘ನಾವು ಬದುಕಿರಬಹುದು ಪ್ರಾಯಶಃ..’, ‘ನಾನಾಡದ ಮಾತೆಲ್ಲವ ಕದ್ದಾಲಿಸು..’ ಹಾಡುಗಳು ಜನರ ಮನ ಗೆದ್ದಿವೆ. ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರ ಬತ್ತಳಿಕೆಯಿಂದ ಬಂದ ಹಾಡುಗಳಿಂದಾಗಿ ಸಿನಿಮಾ ಮೇಲಿನ ಹೈಪ್​ ಹೆಚ್ಚಿದೆ. ರಮೇಶ್​ ರೆಡ್ಡಿ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ
Image
Gaalipata 2 Review: ಇದು ಬಗೆಹರಿಯದ ಭಾವನೆಗಳ ‘ಹಾಡು’-ಪಾಡು ಆಗಿರಬಹುದು ಪ್ರಾಯಶಃ
Image
Gaalipata 2: ಅಕ್ಷಯ್​ ಕುಮಾರ್​ ಚಿತ್ರವನ್ನೇ ಮೀರಿಸಿದ ‘ಗಾಳಿಪಟ 2’; ಬುಕ್​ ಮೈ ಶೋನಲ್ಲಿ ಭರ್ಜರಿ ಹವಾ
Image
Gaalipata 2: ಯೋಗರಾಜ್​ ಭಟ್​ ಲೇಖನಿಯಲ್ಲಿ ಮತ್ತೊಂದು ಎಣ್ಣೆ ಸಾಂಗ್​; ‘ಗಾಳಿಪಟ 2’ ಚಿತ್ರದಲ್ಲಿ ಹಿಟ್​ ಕಾಂಬಿನೇಷನ್​
Image
‘ಗಾಳಿಪಟ 2’ ಹುಡುಗರ ಎಲ್ಲ ಸಬ್ಜೆಕ್ಟ್​ ಫೇಲ್​; ಬಾಯಿ ಬಡಿದುಕೊಂಡ ಗಣೇಶ್​, ದಿಗಂತ್​, ಪವನ್​

ರವಿಚಂದ್ರನ್​ ಸಿನಿಮಾ ಎಂದರೆ ಏನಾದರೂ ವಿಶೇಷ ಇದ್ದೇ ಇರುತ್ತದೆ ಎಂಬುದು ಅಭಿಮಾನಿಗಳ ನಂಬಿಕೆ. ಟ್ರೇಲರ್​ ಮೂಲಕ ಈ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ವಿಭಿನ್ನ ಗೆಟಪ್​ನಲ್ಲಿ ‘ಕ್ರೇಜಿ ಸ್ಟಾರ್​’ ಕಾಣಿಸಿಕೊಂಡಿದ್ದಾರೆ. ರಾಧಿಕಾ ಕುಮಾರಸ್ವಾಮಿ, ಕಾವ್ಯಾ ಶೆಟ್ಟಿ, ಪಾವನಾ ಗೌಡ, ಕಿಚ್ಚ ಸುದೀಪ್​ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಯೂಟ್ಯೂಬ್​ನಲ್ಲಿ ಈ ಸಿನಿಮಾದ ಟ್ರೇಲರ್​ 10 ಲಕ್ಷಕ್ಕಿಂತಲೂ ಅಧಿಕ ವೀವ್ಸ್​ ಪಡೆದಿದೆ. ಸೀತಾರಾಮ್​ ಜಿಎಸ್​ವಿ ಛಾಯಾಗ್ರಹಣ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:53 am, Fri, 12 August 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ