AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ರೀ-ಯೂನಿಯನ್ ಸಂಭ್ರಮ; ಸ್ಯಾಂಡಲ್​ವುಡ್​ನಲ್ಲಿ ನಡೆಯೋದು ಯಾವಾಗ?

Tollywood Reunion: ತೆಲಂಗಾಣ ಸರ್ಕಾರದ ‘ಗದ್ದರ್ ಅವಾರ್ಡ್’ ಘೋಷಣೆ ಮಾಡಿದೆ. ಇದು ತೆಲುಗು ಚಿತ್ರರಂಗದಲ್ಲಿ ಒಂದು ದೊಡ್ಡ ಸಂಭ್ರಮವನ್ನು ತಂದಿದೆ. ಇದರಿಂದ ಸ್ಯಾಂಡಲ್‌ವುಡ್‌ನಲ್ಲಿಯೂ ಇಂತಹ ಒಂದು ಏಕತಾ ಕಾರ್ಯಕ್ರಮದ ಅಗತ್ಯ ಇದೆ ಎಂದು ಅನೇಕರು ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿನ ಒಡಕು ಇದರಿಂದ ಸರಿ ಹೊಂದಬಹುದು.

ಟಾಲಿವುಡ್​ನಲ್ಲಿ ರೀ-ಯೂನಿಯನ್ ಸಂಭ್ರಮ; ಸ್ಯಾಂಡಲ್​ವುಡ್​ನಲ್ಲಿ ನಡೆಯೋದು ಯಾವಾಗ?
ಸ್ಯಾಂಡಲ್​ವುಡ್​-ಟಾಲಿವುಡ್​
ರಾಜೇಶ್ ದುಗ್ಗುಮನೆ
|

Updated on: May 31, 2025 | 7:06 AM

Share

14 ವರ್ಷಗಳ ಬಳಿಕ ತೆಲಂಗಾಣ ಸರ್ಕಾರ  ‘ಗದ್ದರ್’ ಅವಾರ್ಡ್​ನ (Gaddar Award) ಘೋಷಣೆ ಮಾಡಿದೆ. ಅಂದರೆ ತೆಲುಗು ಸಿನಿಮಾ ರಂಗದಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ನೀಡುವ ಅವಾರ್ಡ್ ಇದಾಗಿದೆ. ವಿವಿಧ ಕಲಾವಿದರಿಗೆ ಈ ಅವಾರ್ಡ್ ಸಿಕ್ಕಿದೆ. ಜೂನ್ 14ರಂದು ಪ್ರಶಸ್ತಿ ಪ್ರಧಾನ ಕಾರ್ಯ ನಡೆಯಲಿದೆ. ಈ ಅವಾರ್ಡ್​ ಕಾರ್ಯಕ್ರಮದಲ್ಲಿ ಬಹುತೇಕ ಎಲ್ಲಾ ಟಾಲಿವುಡ್ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ. ಹಾಗಾದರೆ ಸ್ಯಾಂಡಲ್​ವುಡ್​ನಲ್ಲಿ ಈ ರೀತಿ ನಡೆಯೋದು ಯಾವಾಗ ಎನ್ನುವ ಪ್ರಶ್ನೆ ಮೂಡಿದೆ.

ಟಾಲಿವುಡ್​ನಲ್ಲಿ ಕಳೆದ 14 ವರ್ಷಗಳಿಂದ ಹೀಗೊಂದು ಅವಾರ್ಡ್ ಕಾರ್ಯಕ್ರಮ ನಡೆದೇ ಇರಲಿಲ್ಲ ಎನ್ನಬಹುದು. ಈ ಮೊದಲು ಸೈಮಾ ರೀತಿಯ ಅವಾರ್ಡ್​ ಫಂಕ್ಷನ್​ಗಳು ನಡೆದಿವೆ. ಆದರೆ, ಈ ಸಂದರ್ಭದಲ್ಲಿ ಅಲ್ಲಿ ಎಲ್ಲಾ ಕಲಾವಿದರ ಆಗಮನ ಆಗುತ್ತಿರಲಿಲ್ಲ. ಇದು ರಾಜ್ಯ ಪ್ರಶಸ್ತಿ ಆಗಿರುವುದರಿಂದ ಎಲ್ಲರೂ ಒಟ್ಟಾಗಿ ಸೇರುವ ಸಾಧ್ಯತೆ ಇದೆ.

ಇನ್ನು ಕನ್ನಡದಲ್ಲಿಯೂ ಈ ರೀತಿಯ ರೀ-ಯೂನಿಯನ್ ನಡೆಯದೇ ಸಾಕಷ್ಟು ವರ್ಷಗಳು ಕಳೆದಿವೆ. ಟಾಲಿವುಡ್​ನಲ್ಲಿ ಆದಂತೆ ಸ್ಯಾಂಡಲ್​ವುಡ್​ನವರಿಗೂ ಸೈಮಾ ರೀತಿಯ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದ ವೇಳೆ ಎಲ್ಲಾ ಸ್ಟಾರ್ ಹೀರೋಗಳು ಆಗಮಿಸುವುದಿಲ್ಲ. ಇನ್ನು ಕರ್ನಾಟಕ ರಾಜ್ಯ ಪ್ರಶಸ್ತಿ ಕಾರ್ಯಕ್ರಮ ಕೂಡ ಸರಿಯಾಗಿ ಆಯೋಜನೆ ಆಗಿಲ್ಲ. ಕೆಲವರಿಗೆ ಅವಾರ್ಡ್ ನೀಡಿದ ಬಗ್ಗೆಯೇ ಅಪಸ್ವರ ಇದೆ. ಹೀಗಾಗಿ, ರೀ-ಯೂನಿಯನ್ ಕಷ್ಟ.

ಇದನ್ನೂ ಓದಿ
Image
ಎಚ್​ಎಸ್​ ವೆಂಕಟೇಶ​ಮೂರ್ತಿ ನಿಧನ; ಖ್ಯಾತ ಸಾಹಿತಿ, ಕವಿ ಇನ್ನಿಲ್ಲ
Image
ಹೊಂಬಾಳೆ ನಿರ್ಮಾಣದ ಹೃತಿಕ್ ಚಿತ್ರಕ್ಕೆ ದಕ್ಷಿಣದ ಖ್ಯಾತ ಹೀರೋ ಡೈರೆಕ್ಷನ್
Image
ಸುಹಾಸಿನಿ ಸರಳತೆ; ಬೀದಿ ಬದಿ ಕಲಾವಿದ ಹಾಡು ಕೇಳಿ ಮೆಚ್ಚುಗೆ
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?

ಸ್ಯಾಂಡಲ್​ವುಡ್​ನಲ್ಲಿ ಒಗ್ಗಟ್ಟು ಕಡಿಮೆ ಆಗುತ್ತಿದೆ ಎನ್ನುವ ಆರೋಪ ಜೋರಾಗಿದೆ. ಹೌದು, ಸ್ಯಾಂಡ್​ಲ್​ವುಡ್​ನಲ್ಲಿ ಒಬ್ಬ ಹೀರೋ ವೇದಿಕೆ ಮೇಲೆ ಇದ್ದರೆ ಮತ್ತೋರ್ವ ಹೀರೋ ವೇದಿಕೆ ಏರುವುದಿಲ್ಲ ಎನ್ನುವ ಪರಿಸ್ಥಿತಿ ಇದೆ ಎಂಬುದು ಕೆಲವರ ಅಭಿಪ್ರಾಯ. ಇರುವುದೇ ಕೆಲವೇ ಸ್ಟಾರ್ಸ್​ಗಳು. ಅವರು ಒಟ್ಟಾಗಿ ಚಿತ್ರರಂಗದ ಪರವಾಗಿ ನಿಲ್ಲುವ ಅಗತ್ಯವಿದೆ. ಇದಕ್ಕೆ ಒಂದೊಳ್ಳೆಯ ರೀ-ಯೂನಿಯನ್ ಅಗತ್ಯವಿದೆ. ಈ ವೇಳೆ ಮಾತುಕತೆಗಳ ಮೂಲಕ ಒಂದಷ್ಟು ಮನಸ್ತಾಪಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಸಿಗಲಿದೆ.

ಇದನ್ನೂ ಓದಿ: ತೆಗಳಿದವರಿಂದಲೇ ಸನ್ಮಾನ, ಅಲ್ಲು ಅರ್ಜುನ್​ಗೆ ಪ್ರಶಸ್ತಿ ಘೋಷಿಸಿದ ತೆಲಂಗಾಣ ಸರ್ಕಾರ

ಸದ್ಯ ಕಮಲ್ ಹಾಸನ್ ಅವರು ಕನ್ನಡ ವಿರೋಧಿ ಹೇಳಿಕೆ ನೀಡಿ ತಮ್ಮ ಅಜ್ಞಾನ ತೋರಿಸಿದ್ದಾರೆ. ಈ ಕಾರಣಕ್ಕೆ ಅವರು ಹಲವರ ಟೀಕೆಗೆ ಗುರಿಯಾಗಿದ್ದಾರೆ. ಕನ್ನಡದ ಕೆಲವು ಸೆಲೆಬ್ರಿಟಿಗಳು ಅವರ ಹೇಳಿಕೆಯನ್ನು ತೆಗಳಿದ್ದಾರೆ. ಇನ್ನೂ ಕೆಲವರು ಈ ವಿಚಾರದಲ್ಲಿ ಮೌನ ತಾಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?