AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಣ್ಣದ ಲೋಕಕ್ಕೆ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಪ್ರವೇಶ

ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಇಂದು ನಿನ್ನೆಯದಲ್ಲ. ಹಲವು ವರ್ಷಗಳಿಂದ ಈ ಸುದ್ದಿ ಓಡಾಡುತ್ತಲೇ ಇದೆ. ಆದರೆ, ಯಾವ ವಿಚಾರವೂ ಅಧಿಕೃತ ಆಗಿರಲಿಲ್ಲ.

ಬಣ್ಣದ ಲೋಕಕ್ಕೆ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಪ್ರವೇಶ
ಜನಾರ್ಧನ ರೆಡ್ಡಿ-ಕಿರೀಟಿ ರೆಡ್ಡಿ
TV9 Web
| Edited By: |

Updated on:Jan 04, 2022 | 6:57 PM

Share

ಚಿತ್ರರಂಗಕ್ಕೂ ರಾಜಕೀಯಕ್ಕೂ ಎಲ್ಲಿಲ್ಲದ ನಂಟು. ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಉದಾಹರಣೆ ಇದೆ. ಅದೇ ರೀತಿ, ಹಲವು ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗ ಮಾಜಿ ಸಚಿವ ಜನಾರ್ದನ ​ ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದು, ಶೀಘ್ರವೇ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ, ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಯಾರು? ನಿರ್ಮಾಣ ಯಾರದ್ದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಇಂದು ನಿನ್ನೆಯದಲ್ಲ. ಹಲವು ವರ್ಷಗಳಿಂದ ಈ ಸುದ್ದಿ ಓಡಾಡುತ್ತಲೇ ಇದೆ. ಆದರೆ, ಯಾವ ವಿಚಾರವೂ ಅಧಿಕೃತ ಆಗಿರಲಿಲ್ಲ. ಆದರೆ, ಈಗ ಕಿರೀಟಿ ರೆಡ್ಡಿ ಲಾಂಚ್​ ಮಾಡೋಕೆ ವೇದಿಕೆ ರೆಡಿ ಆಗಿದೆ ಎನ್ನಲಾಗಿದೆ. ಎಲ್ಲವೂ ಅಂತಿಮ ಹಂತದಲ್ಲಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

ಪುನೀತ್​ ರಾಜ್​ಕುಮಾರ್ ಒಡೆತನದ ಪಿಆರ್​ಕೆ ಪ್ರೊಡಕ್ಷನ್​ ಅಡಿಯಲ್ಲಿ ಸಿದ್ಧವಾದ ‘ಮಾಯಾ ಬಜಾರ್​ 2016’ ಚಿತ್ರ ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾವನ್ನು ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡಿದ್ದರು. ಈ ಚಿತ್ರ ಎಂಟರ್​ಟೇನಿಂಗ್​ ಆಗಿತ್ತು. ಈಗ ಇದೇ ರಾಧಾಕೃಷ್ಣ ಅವರು ಕಿರೀಟಿ ಮೊದಲ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಈಗ’ ಸಿನಿಮಾ ನಿರ್ಮಾಣ ಮಾಡಿದ್ದ ಸಾಯಿ ಕೋರ್ರಾಪಾಟಿ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

ಜನಾರ್ದನ ರೆಡ್ಡಿ ಅವರಿಗೆ ತೆಲುಗು ನಾಡಿನ ಜತೆಗೂ ಒಳ್ಳೆಯ ಒಡನಾಟ ಇದೆ. ಈ ಕಾರಣಕ್ಕೆ ಈ ಸಿನಿಮಾ ತೆಲುಗು ಹಾಗೂ ಕನ್ನಡ ಎರಡಲ್ಲೂ ಸಿದ್ಧಗೊಳ್ಳುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರಕ್ಕಾಗಿ ಕಿರೀಟಿ ನಟನಾ ತರಬೇತಿ ಕೂಡ ಪಡೆದು ಬಂದಿದ್ದಾರೆ.

ಚಿಕ್ಕ ವಯಸ್ಸಿನಲ್ಲೇ ಕಿರೀಟಿ ರೆಡ್ಡಿಗೆ ಸಿನಿಮಾರಂಗದ ಮೇಲೆ ಆಸಕ್ತಿ ಬೆಳೆದಿತ್ತು. ‘ಜಾಕಿ’ ಚಿತ್ರ ತೆರೆಕಂಡಾಗ ಪುನೀತ್ ರಾಜ್‌ಕುಮಾರ್ ಅವರೊಟ್ಟಿಗೆ ಸಿನಿಮಾ ನೋಡುವ ಅವಕಾಶ ಕಿರೀಟಿಗೆ ಲಭ್ಯವಾಗಿತ್ತು. ಪುನೀತ್ ಕೂಡ ಆಗ ಕಿರೀಟಿಗೆ ಸಾಕಷ್ಟು ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದರು.

ಇದನ್ನೂ ಓದಿ: ‘ನಾನು ತಪ್ಪು ಆಯ್ಕೆಗಳನ್ನು ಮಾಡುತ್ತಲೇ ಇದ್ದೆ’; ಸಮಂತಾ ಹೀಗೆ ಮರುಗಿದ್ದೇಕೆ?

ಬೋಲ್ಡ್​ ದೃಶ್ಯಗಳಲ್ಲೇ ಮಿಂಚುತ್ತಿದ್ದಾರೆ ಕೃತಿ ಶೆಟ್ಟಿ; ವೈರಲ್​ ಆಗುತ್ತಿವೆ ಫೋಟೋಗಳು

Published On - 6:09 pm, Tue, 4 January 22

Follow Us
Web contact
Web contact

TV9 Kannada

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್