AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳಿಗಾಗುವಷ್ಟು ಸಿನಿಮಾ ಒಂದೇ ದಿನ ರಿಲೀಸ್; ಜನವರಿ ಅಂತ್ಯಕ್ಕೆ ಧಮಾಕಾ

ಈ ವಾರ ಕನ್ನಡ ಚಿತ್ರರಂಗದಲ್ಲಿ ಅಪಾರ ಸಂಖ್ಯೆಯ ಚಿತ್ರಗಳ ಬಿಡುಗಡೆ ಕಾಣುತ್ತಿದೆ. ಪ್ರಜ್ವಲ್ ದೇವರಾಜ್ ಅಭಿನಯದ ‘ಗಣ’ ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ದೀಪಿಕಾ ದಾಸ್ ಅಭಿನಯದ ‘#ಪಾರುಪಾರ್ವತಿ’ ಸೇರಿದಂತೆ ಒಟ್ಟು ಎಂಟು ಸಿನಿಮಾಗಳು ತೆರೆಗೆ ಬರುತ್ತಿವೆ ಅನ್ನೋದು ವಿಶೇಷ.

ತಿಂಗಳಿಗಾಗುವಷ್ಟು ಸಿನಿಮಾ ಒಂದೇ ದಿನ ರಿಲೀಸ್; ಜನವರಿ ಅಂತ್ಯಕ್ಕೆ ಧಮಾಕಾ
ಈ ವಾರದ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Jan 30, 2025 | 2:02 PM

Share

ಪ್ರತಿ ವಾರ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಕೆಲವು ಸಿನಿಮಾ ರಿಲೀಸ್ ಆಗುತ್ತದೆ. ಆದರೆ, ಕೆಲವೊಮ್ಮೆ ವಿಶೇಷ ದಿನದಂದು ಹಲವು ಚಿತ್ರಗಳು ಒಟ್ಟೊಟ್ಟಿಗೆ ರಿಲೀಸ್ ಆಗುತ್ತವೆ. ಈಗ ಜನವರಿ 31ರಂದು ಕನ್ನಡ ನಿರ್ಮಾಪಕರ ಕಣ್ಣು ನೆಟ್ಟಿದೆ. ಈ ಕಾರಣಕ್ಕೆ ಒಂದೇ ವಾರ ಬರೋಬ್ಬರಿ ಏಳೆಂಟು ಚಿತ್ರಗಳು ತೆರೆಗೆ ಬರುತ್ತಿವೆ ಅನ್ನೋದು ವಿಶೇಷ. ಹೌದು, ಈ ವಾರ ಸಣ್ಣ ಬಜೆಟ್​ನ ಹಲವು ಚಿತ್ರಗಳು ಬಿಡುಗಡೆ ಕಾಣುತ್ತಿವೆ.

ಪ್ರಜ್ವಲ್ ದೇವರಾಜ್ ನಟನೆಯ ‘ಗಣ’ ಸಿನಿಮಾ ಜನವರಿ 30ರಂದು ರಿಲೀಸ್ ಆಗುತ್ತಿದೆ. ವೇದಿಕಾ, ಯಶಾ ಶಿವಕುಮಾರ್, ಸಂಪತ್ ರಾಜ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಹರಿ ಪ್ರಸಾದ್ ಜಕ್ಕ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಪಾರ್ತಸಾರಥಿ ಸೊಪ್ಪ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜನವರಿ 31ರಂದು ಸಿನಿಮಾ ರಿಲೀಸ್ ಆಗಲಿದೆ.

‘ನೋಡಿದವರು ಏನಂತಾರೆ’ ಕೂಡ ಜನವರಿ 31ರಂದು ತೆರೆಗೆ ಬರುತ್ತಿದೆ. ನವೀನ್ ಶಂಕರ್ ನಟನೆಯ ಈ ಚಿತ್ರದಲ್ಲಿ ಪದ್ಮಾವತಿ ರಾವ್, ಸ್ಪಂದನಾ ಪ್ರಸಾದ ಮೊದಲಾದವರು ನಟಿಸಿದ್ದಾರೆ. ಕುಲ್ದೀಪ್ ಕರಿಯಪ್ಪ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ನಾಗೇಶ್ ಗೋಪಾಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

#ಪಾರುಪಾರ್ವತಿ ಚಿತ್ರ ಕೂಡ ಈ ವಾರ ತೆರೆಗೆ ಬರುತ್ತಿದೆ. ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರೋಹಿತ್ ಕೀರ್ತಿ ನಿರ್ದೇಶನ ಮಾಡಿರುವ ಈ ಚಿತ್ರವನ್ನು ಪಿಬಿ ಪ್ರೇಮನಾಥ್ ಅವರು ನಿರ್ಮಾಣ ಮಾಡಿದ್ದಾರೆ. ಉಳಿದಂತೆ ಸಂಗೀತಾ ರಾಜಾರಾಮ್, ಅರ್ಥ ಹರ್ಷನ್ ಮೊದಲಾದವರು ನಟಿಸಿರೋ ‘ಕಾಡು ಮಳೆ’, ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಟನೆಯ ‘ಬೇಗೂರು ಕಾಲೋನಿ’, ವೆಂಕಟ್ ಭಾರದ್ವಾಜ್ ನಟನೆಯ ‘ಹೈನಾ’, ‘ರಾಜ ರಾಣಿ’, ಹಾಗೂ ‘ರಾವುತ’ ಚಿತ್ರಗಳೂ ಈ ವಾರ ತೆರೆಗೆ ಬರುತ್ತಿವೆ.

ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ಹನುಮಂತಗೆ ಹುಟ್ಟೂರಲ್ಲಿ ಭರ್ಜರಿ ಸ್ವಾಗತ

ಈ ವಾರ ಕನ್ನಡದಲ್ಲೇ 8 ಸಿನಿಮಾಗಳು ರಿಲೀಸ್ ಆಗುತ್ತಿರುವುದರಿಂದ ಯಾವ ಚಿತ್ರವನ್ನು ನೋಡಬೇಕು ಎನ್ನುವ ಗೊಂದಲ ಪ್ರೇಕ್ಷಕರಲ್ಲಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:00 pm, Thu, 30 January 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?