AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಧದಗುಡಿ’ ಟ್ರೇಲರ್ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್; ಇಲ್ಲಿದೆ ಪೂರ್ತಿ ವಿವರ

ಟ್ರೇಲರ್ ಬಿಡುಗಡೆಗೆ ದಿನಾಂಕ ಅನೌನ್ಸ್ ಮಾಡಲಾಗಿದೆ. ಅಕ್ಟೋಬರ್ 9ರಂದು ಬೆಳಗ್ಗೆ 10:19ಕ್ಕೆ ಪಿಆರ್​ಕೆ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ‘ಗಂಧದಗುಡಿ’ಯ ಟ್ರೇಲರ್ ರಿಲೀಸ್ ಆಗಲಿದೆ.

‘ಗಂಧದಗುಡಿ’ ಟ್ರೇಲರ್ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್​ ರಾಜ್​ಕುಮಾರ್; ಇಲ್ಲಿದೆ ಪೂರ್ತಿ ವಿವರ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Oct 06, 2022 | 8:26 PM

Share

‘ಗಂಧದಗುಡಿ’ ಸಾಕ್ಷ್ಯ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದು ಪುನೀತ್​ ರಾಜ್​ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿತ್ತು. ಇದನ್ನು ಜನರ ಮುಂದಿಡುವ ಮೊದಲೇ ಪುನೀತ್ (Puneeth Rajkumar) ಅವರು ಇಹಲೋಕ ತ್ಯಜಿಸಿದರು. ಈಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ಜನರ ಮುಂದೆ ಇಡುತ್ತಿದ್ದಾರೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಆಗಲಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ಥಿಯೇಟರ್​​ನಲ್ಲೇ ರಿಲೀಸ್ ಆಗಲಿದೆ. ಸದ್ಯ ಟ್ರೇಲರ್ ಬಿಡುಗಡೆಗೆ ದಿನಾಂಕ ಅನೌನ್ಸ್ ಮಾಡಲಾಗಿದೆ. ಅಕ್ಟೋಬರ್ 9ರಂದು ಬೆಳಗ್ಗೆ 10:19ಕ್ಕೆ ಪಿಆರ್​ಕೆ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ‘ಗಂಧದಗುಡಿ’ಯ ಟ್ರೇಲರ್ ರಿಲೀಸ್ ಆಗಲಿದೆ.

ಪುನೀತ್ ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗದ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ ಪ್ರೇಕ್ಷಕರ ಎದುರು ಬರುವ ಉದ್ದೇಶ ಇಟ್ಟುಕೊಂಡಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸ್ಥಾಪಿಸಿ ಹೊಸಬರಿಗೆ ಅವಕಾಶ ನೀಡುವ ಕೆಲಸವೂ ನಡೆಯುತ್ತಿತ್ತು. ಇದೇ ನಿರ್ಮಾಣ ಸಂಸ್ಥೆ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಗಣೇಶ ಚತುರ್ಥಿ ಅಂಗವಾಗಿ ‘ಗಂಧದ ಗುಡಿ’ಯ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಪುನೀತ್ ಅವರು ಆನೆಯ ಜತೆ ನಿಂತಿದ್ದರು. ‘ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ಭಗವಂತನು ನಿಮಗೆಲ್ಲರಿಗೂ ಸುಖ ಸಮೃದ್ಧಿ, ಉತ್ತಮ ಆರೋಗ್ಯ ಹಾಗೂ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಈ ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿತ್ತು.

ಇದನ್ನೂ ಓದಿ: ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್

2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ