AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ಕರುನಾಡಿನಾದ್ಯಂತ ‘ಗಂಧದ ಗುಡಿ’ ಗುಣಗಾನ; ಅಪ್ಪು ಡ್ರೀಮ್​ ಪ್ರಾಜೆಕ್ಟ್​ ನೋಡಲು ಮುಗಿಬಿದ್ದ ಜನ

Puneeth Rajkumar | Amoghavarsha: ಪುನೀತ್​ ರಾಜ್​ಕುಮಾರ್ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರಿದ್ದಾರೆ. ವೃದ್ಧರು, ಮಕ್ಕಳು ಎನ್ನದೇ ಎಲ್ಲ ವಯೋಮಾನದವರು ಬಂದು ‘ಗಂಧದ ಗುಡಿ’ ಕಣ್ತುಂಬಿಕೊಳ್ಳುತ್ತಿದ್ದಾರೆ.

Gandhada Gudi: ಕರುನಾಡಿನಾದ್ಯಂತ ‘ಗಂಧದ ಗುಡಿ’ ಗುಣಗಾನ; ಅಪ್ಪು ಡ್ರೀಮ್​ ಪ್ರಾಜೆಕ್ಟ್​ ನೋಡಲು ಮುಗಿಬಿದ್ದ ಜನ
‘ಗಂಧದ ಗುಡಿ’ ನೋಡಲು ಮುಗಿಬಿದ್ದ ಫ್ಯಾನ್ಸ್​
TV9 Web
| Edited By: |

Updated on: Oct 28, 2022 | 8:50 AM

Share

ಈ ಒಂದು ದಿನಕ್ಕಾಗಿ ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳು ಒಂದು ವರ್ಷದಿಂದ ಕಾದಿದ್ದರು. ಅಪ್ಪು ಕಂಡಿದ್ದು ದೊಡ್ಡ ಕನಸು ಈ ‘ಗಂಧದ ಗುಡಿ’. ಬಹಳ ಪ್ರೀತಿಯಿಂದ ಇದನ್ನು ಜನರಿಗೆ ತೋರಿಸಬೇಕು ಎಂದು ಪುನೀತ್​ ಆಸೆ ಇಟ್ಟುಕೊಂಡಿದ್ದರು. ಆ ಆಸೆಯನ್ನು ಈಡೇರಿಸುವ ಸಲುವಾಗಿ ಡಾ. ರಾಜ್​ಕುಮಾರ್​ ಕುಟುಂಬ ಹಗಲಿರುಳು ಶ್ರಮಿಸಿದೆ. ಇಂದು (ಅಕ್ಟೋಬರ್​ 28) ರಾಜ್ಯಾದ್ಯಂತ ಅದ್ದೂರಿಯಾಗಿ ‘ಗಂಧದ ಗುಡಿ’ (Gandhada Gudi) ರಿಲೀಸ್​ ಆಗಿದೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಮುಗಿಬಿದ್ದು ಇದನ್ನು ನೋಡುತ್ತಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಎಲ್ಲ ಜಿಲ್ಲೆಯಲ್ಲೂ ಅಪ್ಪು ಗುಣಗಾನ ಮಾಡಲಾಗುತ್ತಿದೆ. ಮುಂಜಾನೆಯ ಎಲ್ಲ ಶೋಗಳು ಹೌಸ್​ಫುಲ್​ ಆಗಿವೆ.

ದೊಡ್ಡ ಪರದೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರನ್ನು ನೋಡಲು ಸಿಕ್ಕಿರುವ ಕೊನೆಯ ಅವಕಾಶ ಇದು. ಕರ್ನಾಟಕದ 225ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಾಕ್ಷ್ಯಚಿತ್ರ ಬಿಡುಗಡೆ ಆಗಿದೆ. ಗುರುವಾರವೇ (ಅ.27) ಹಲವು ಕಡೆಗಳಲ್ಲಿ ಪ್ರೀಮಿಯರ್​ ಶೋ ಆಯೋಜನೆಗೊಂಡಿತ್ತು. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಡಾಕ್ಯುಮೆಂಟರಿ ನೋಡಿ ಎಮೋಷನಲ್​ ಆಗುತ್ತಿದ್ದಾರೆ. ಇಂದು ಮುಂಜಾನೆಯೇ ಚಿತ್ರಮಂದಿರದ ಎದುರು ಸಾಲಾಗಿ ನಿಂತು, ಟಿಕೆಟ್​ ಪಡೆದು ಅಪ್ಪು ದರ್ಶನಕ್ಕೆ ಬಂದಿದ್ದಾರೆ ಅಪಾರ ಸಂಖ್ಯೆಯ ಅಭಿಮಾನಿಗಳು.

‘ಗಂಧದ ಗುಡಿ’ ಪ್ರದರ್ಶನ ಆಗುತ್ತಿರುವ ಎಲ್ಲ ಚಿತ್ರಮಂದಿರಗಳ ಎದುರಲ್ಲಿ ಅಪ್ಪು ಕಟೌಟ್​ಗಳು ರಾರಾಜಿಸುತ್ತಿವೆ. ತುಂಬ ಅದ್ದೂರಿಯಾಗಿ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ ಇದನ್ನು ನೋಡಲು ಮುಗಿಬಿದ್ದ ಪ್ರೇಕ್ಷಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ವೃದ್ಧರು, ಮಕ್ಕಳು ಎನ್ನದೇ ಎಲ್ಲ ವಯೋಮಾನದವರು ಬಂದು ಈ ಡಾಕ್ಯುಮೆಂಟರಿ ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

‘ಗಂಧದ ಗುಡಿ’ ಡಾಕ್ಯುಮೆಂಟರಿಗೆ ಅಮೋಘವರ್ಷ ಅವರು ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​ ಮೂಲಕ ಇದು ನಿರ್ಮಾಣ ಆಗಿದೆ. ದಾಖಲೆ ಪ್ರಮಾಣದಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಕರ್ನಾಟಕದ ಪ್ರಕೃತಿ ಸೌಂದರ್ಯ, ವನ್ಯ ಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಹಲವಾರು ವಿಷಯಗಳನ್ನು ಇದರಲ್ಲಿ ಹೇಳಲಾಗಿದೆ. ಅಪ್ಪು ಅವರ ಈ ಅಪರೂಪದ ಪ್ರಯತ್ನ ಎಲ್ಲರಿಗೂ ಇಷ್ಟ ಆಗುತ್ತಿದೆ.

ಗುರುವಾರ ಆಯೋಜಿಸಿದ್ದ ಪ್ರೀಮಿಯರ್​ ಶೋನಲ್ಲಿ ರಮ್ಯಾ, ಸುಧಾ ಮೂರ್ತಿ, ಅನುಶ್ರೀ, ಅಜಯ್​ ರಾವ್​, ದೇವರಾಜ್​, ನೆನಪಿರಲಿ ಪ್ರೇಮ್​, ಗುರು ಕಿರಣ್​, ಸಂಗೀತಾ ಶೃಂಗೇರಿ, ಅಮೃತಾ ಅಯ್ಯಂಗಾರ್​, ರೋಹಿತ್​ ಪದಕಿ, ಕುನಾಲ್​ ಗಾಂಜಾವಾಲಾ, ಅಭಿಷೇಕ್​ ಅಂಬರೀಷ್​, ಚೇತನ್ ಕುಮಾರ್​, ಸಂತೋಷ್​ ಆನಂದ್​ ರಾಮ್​ ಮುಂತಾದವರು ‘ಗಂಧದ ಗುಡಿ’ ವೀಕ್ಷಿಸಿ ಭಾವುಕರಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ